ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ.
ಭಾರತ ಇದುವರೆಗೂ ಅಭಿವೃದ್ಧಿಪಡಿಸಿದ ರಾಕೆಟ್ಗಳಲ್ಲೇ ಅತ್ಯಂತ ದೈತ್ಯ ಗಾತ್ರ (200 ಆನೆ ತೂಕದ) ಮತ್ತು ಸೂಪರ್ ಪವರ್ ಹೊಂದಿರುವ ಜಿಎಸ್ಎಲ್ವಿ ಮಾರ್ಕ್-3 ಉಡ್ಡಯನ ವಾಹಕವನ್ನು ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಆ ಮೂಲಕ, ಇಂಥ ಭಾರೀ ತೂಕದ ರಾಕೆಟ್ ಹಾರಿಸಬಲ್ಲ ಸಾಮರ್ಥ್ಯ ಹೊಂದಿರುವ ಅಮೆರಿಕ, ರಷ್ಯಾ, ಯುರೋಪ್, ಚೀನಾ ಹಾಗೂ ಜಪಾನ್ ಸಾಲಿಗೆ ಭಾರತವೂ ಸೇರ್ಪಡೆಯಾಗಿದೆ.
ಜಿಎಸ್ಎಲ್ವಿ ಮಾರ್ಕ್ 3 ರಾಕೆಟ್, ತನ್ನೊಂದಿಗೆ ಜಿಸ್ಯಾಟ್ 19 ಉಪಗ್ರಹ ಕೂಡಾ ಹೊತ್ತೊಯ್ಯಲಿದೆ. ಜಿಸ್ಯಾಟ್ 19 ಉಪಗ್ರಹವು, ಅತ್ಯಾಧುನಿಕವಾಗಿದ್ದು, ಡಿಜಿಟಲ್ ಇಂಡಿಯಾದ ಕನಸು ನನಸು ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಭಾರತ ಇದುವರೆಗೆ 41 ಉಪಗ್ರಹಗಳನ್ನು ಹಾರಿಬಿಟ್ಟಿದ್ದು, ಅದರಲ್ಲಿ 13 ಸಂಪರ್ಕ ಉಪಗ್ರಹಗಳಾಗಿವೆ.
ಜಿಎಸ್ಎಲ್ವಿ ಮಾರ್ಕ್ 3 ರಾಕೆಟ್ ಮಹತ್ವ :-
ಸದ್ಯ ಇಸ್ರೋ ಬತ್ತಳಿಕೆಯಲ್ಲಿ ಪಿಎಸ್ಎಲ್ವಿ ಹಾಗೂ ಜಿಎಸ್ಎಲ್ವಿ ಮಾರ್ಕ್-2 ರಾಕೆಟ್ಗಳು 2 ಟನ್ ಭಾರ ಹೊತ್ತೊ ಯ್ಯ ಬಲ್ಲದು. ಅದಕ್ಕೂ ಮೇಲ್ಪಟ್ಟಭಾರದ ಉಪಗ್ರಹ ಒಯ್ಯುವ ಸಾಮರ್ಥ್ಯ ಜಿಎಸ್ಎಲ್ವಿ ಮಾರ್ಕ್ 3ಗೆ ಇದೆ. ಈ ರಾಕೆಟ್ ಬಳಕೆಯಿಂದ ಸಂಪರ್ಕ ಉಪಗ್ರಹಗಳನ್ನು ಉಡಾವಣೆ ಮಾಡಲು ಬೇರೆ ದೇಶಗಳ ಮೇಲೆ ಅವಲಂಬಿಸುವುದು ತಪ್ಪುತ್ತದೆ.
ಜಿಎಸ್ಎಲ್ವಿ ವಿಶೇಷತೆ:-
ದ್ರವರೂಪದ ಆಮ್ಲಜನಕ ಹಾಗೂ ದ್ರವರೂಪದ ಜಲಜನಕವನ್ನು ಇಂಧನವಾಗಿ ಬಳಸಿ ಕಾರ್ಯನಿರ್ವಹಿಸುವ ಕ್ರಯೋಜೆನಿಕ್ ಎಂಜಿನ್ ಮೂಲಕ ಪೂರ್ಣಪ್ರಮಾಣದ ರಾಕೆಟ್ ಉಡಾವಣೆ ಮಾಡುತ್ತಿರುವುದು ಇದೇ ಮೊದಲು.
ಜಿಎಸ್ಎಲ್ವಿ ಮಾರ್ಕ್ 3 ದೇಶದ ಅತ್ಯಂತ ದೈತ್ಯ ರಾಕೆಟ್ ಆಗಿದೆ. ಜತೆಗೆ ಅತ್ಯಂತ ಕುಬ್ಜ ರಾಕೆಟ್ ಕೂಡ ಹೌದು. ಎತ್ತರ 43 ಮೀಟರ್. (ಪಿಎಸ್ಎಲ್ವಿ ರಾಕೆಟ್ 44.4 ಮೀಟರ್ ಎತ್ತರವಿದೆ).
ಭೂಸ್ಥಿರ ವರ್ಗಾವಣೆ ಕಕ್ಷೆಗೆ 4 ಟನ್, ಕೆಳ ಭೂ ಕಕ್ಷೆಗೆ 8 ಟನ್ ತೂಕದ ಉಪಗ್ರಹ ಒಯ್ಯುವ ಸಾಮರ್ಥ್ಯ ಹೊಂದಿದೆ.
ಜಿಸ್ಯಾಟ್ 19 ವಿಶೇಷತೆ:-ಜಿಸ್ಯಾಟ್-19, ಉಪಗ್ರಹ ಆಧರಿತ ಧ್ವನಿ, ವೇಗದ ಇಂಟರ್ನೆಟ್ ಹಾಗೂ ವಿಡಿಯೋದಂತಹ ಅತ್ಯಂತ ಸುರಕ್ಷಿತ ಸೇವೆ ಆರಂಭಿಸುವ ನಿಟ್ಟಿನಲ್ಲಿ ಮೊದಲ ಉಪಗ್ರಹ . ಈ ಹಿಂದೆ ಉಡಾವಣೆ ಮಾಡಲಾದ 6-7 ಉಪಗ್ರಹಗಳಿಗೆ ಒಂದು ಜಿಸ್ಯಾಟ್- 19 ಸಮ. ಜಿಸ್ಯಾಟ್ 19ರಲ್ಲಿ ಟ್ರಾನ್ಸ್ಫಾಂಡರ್ಗಳು ಇರುವುದಿಲ್ಲ. ಈ ಹಿಂದಿನ ಉಪಗ್ರಹಗಳಲ್ಲಿ 1 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದ್ದರೆ ಈ ಉಪಗ್ರಹದಲ್ಲಿ ಒಮ್ಮೆಗೆ 8 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ.