ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ.
ಭಾರತ ಇದುವರೆಗೂ ಅಭಿವೃದ್ಧಿಪಡಿಸಿದ ರಾಕೆಟ್ಗಳಲ್ಲೇ ಅತ್ಯಂತ ದೈತ್ಯ ಗಾತ್ರ (200 ಆನೆ ತೂಕದ) ಮತ್ತು ಸೂಪರ್ ಪವರ್ ಹೊಂದಿರುವ ಜಿಎಸ್ಎಲ್ವಿ ಮಾರ್ಕ್-3 ಉಡ್ಡಯನ ವಾಹಕವನ್ನು ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಆ ಮೂಲಕ, ಇಂಥ ಭಾರೀ ತೂಕದ ರಾಕೆಟ್ ಹಾರಿಸಬಲ್ಲ ಸಾಮರ್ಥ್ಯ ಹೊಂದಿರುವ ಅಮೆರಿಕ, ರಷ್ಯಾ, ಯುರೋಪ್, ಚೀನಾ ಹಾಗೂ ಜಪಾನ್ ಸಾಲಿಗೆ ಭಾರತವೂ ಸೇರ್ಪಡೆಯಾಗಿದೆ.
ಜಿಎಸ್ಎಲ್ವಿ ಮಾರ್ಕ್ 3 ರಾಕೆಟ್, ತನ್ನೊಂದಿಗೆ ಜಿಸ್ಯಾಟ್ 19 ಉಪಗ್ರಹ ಕೂಡಾ ಹೊತ್ತೊಯ್ಯಲಿದೆ. ಜಿಸ್ಯಾಟ್ 19 ಉಪಗ್ರಹವು, ಅತ್ಯಾಧುನಿಕವಾಗಿದ್ದು, ಡಿಜಿಟಲ್ ಇಂಡಿಯಾದ ಕನಸು ನನಸು ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಭಾರತ ಇದುವರೆಗೆ 41 ಉಪಗ್ರಹಗಳನ್ನು ಹಾರಿಬಿಟ್ಟಿದ್ದು, ಅದರಲ್ಲಿ 13 ಸಂಪರ್ಕ ಉಪಗ್ರಹಗಳಾಗಿವೆ.
ಜಿಎಸ್ಎಲ್ವಿ ಮಾರ್ಕ್ 3 ರಾಕೆಟ್ ಮಹತ್ವ :-
ಸದ್ಯ ಇಸ್ರೋ ಬತ್ತಳಿಕೆಯಲ್ಲಿ ಪಿಎಸ್ಎಲ್ವಿ ಹಾಗೂ ಜಿಎಸ್ಎಲ್ವಿ ಮಾರ್ಕ್-2 ರಾಕೆಟ್ಗಳು 2 ಟನ್ ಭಾರ ಹೊತ್ತೊ ಯ್ಯ ಬಲ್ಲದು. ಅದಕ್ಕೂ ಮೇಲ್ಪಟ್ಟಭಾರದ ಉಪಗ್ರಹ ಒಯ್ಯುವ ಸಾಮರ್ಥ್ಯ ಜಿಎಸ್ಎಲ್ವಿ ಮಾರ್ಕ್ 3ಗೆ ಇದೆ. ಈ ರಾಕೆಟ್ ಬಳಕೆಯಿಂದ ಸಂಪರ್ಕ ಉಪಗ್ರಹಗಳನ್ನು ಉಡಾವಣೆ ಮಾಡಲು ಬೇರೆ ದೇಶಗಳ ಮೇಲೆ ಅವಲಂಬಿಸುವುದು ತಪ್ಪುತ್ತದೆ.
ಜಿಎಸ್ಎಲ್ವಿ ವಿಶೇಷತೆ:-
ದ್ರವರೂಪದ ಆಮ್ಲಜನಕ ಹಾಗೂ ದ್ರವರೂಪದ ಜಲಜನಕವನ್ನು ಇಂಧನವಾಗಿ ಬಳಸಿ ಕಾರ್ಯನಿರ್ವಹಿಸುವ ಕ್ರಯೋಜೆನಿಕ್ ಎಂಜಿನ್ ಮೂಲಕ ಪೂರ್ಣಪ್ರಮಾಣದ ರಾಕೆಟ್ ಉಡಾವಣೆ ಮಾಡುತ್ತಿರುವುದು ಇದೇ ಮೊದಲು.
ಜಿಎಸ್ಎಲ್ವಿ ಮಾರ್ಕ್ 3 ದೇಶದ ಅತ್ಯಂತ ದೈತ್ಯ ರಾಕೆಟ್ ಆಗಿದೆ. ಜತೆಗೆ ಅತ್ಯಂತ ಕುಬ್ಜ ರಾಕೆಟ್ ಕೂಡ ಹೌದು. ಎತ್ತರ 43 ಮೀಟರ್. (ಪಿಎಸ್ಎಲ್ವಿ ರಾಕೆಟ್ 44.4 ಮೀಟರ್ ಎತ್ತರವಿದೆ).
ಭೂಸ್ಥಿರ ವರ್ಗಾವಣೆ ಕಕ್ಷೆಗೆ 4 ಟನ್, ಕೆಳ ಭೂ ಕಕ್ಷೆಗೆ 8 ಟನ್ ತೂಕದ ಉಪಗ್ರಹ ಒಯ್ಯುವ ಸಾಮರ್ಥ್ಯ ಹೊಂದಿದೆ.
ಜಿಸ್ಯಾಟ್ 19 ವಿಶೇಷತೆ:-ಜಿಸ್ಯಾಟ್-19, ಉಪಗ್ರಹ ಆಧರಿತ ಧ್ವನಿ, ವೇಗದ ಇಂಟರ್ನೆಟ್ ಹಾಗೂ ವಿಡಿಯೋದಂತಹ ಅತ್ಯಂತ ಸುರಕ್ಷಿತ ಸೇವೆ ಆರಂಭಿಸುವ ನಿಟ್ಟಿನಲ್ಲಿ ಮೊದಲ ಉಪಗ್ರಹ . ಈ ಹಿಂದೆ ಉಡಾವಣೆ ಮಾಡಲಾದ 6-7 ಉಪಗ್ರಹಗಳಿಗೆ ಒಂದು ಜಿಸ್ಯಾಟ್- 19 ಸಮ. ಜಿಸ್ಯಾಟ್ 19ರಲ್ಲಿ ಟ್ರಾನ್ಸ್ಫಾಂಡರ್ಗಳು ಇರುವುದಿಲ್ಲ. ಈ ಹಿಂದಿನ ಉಪಗ್ರಹಗಳಲ್ಲಿ 1 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದ್ದರೆ ಈ ಉಪಗ್ರಹದಲ್ಲಿ ಒಮ್ಮೆಗೆ 8 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್ ಐಡಿಯಾಗೆ ಶಾಕ್ ಉಂಟಾಗಿದೆ. ಸಂಸ್ಥೆಗೆ ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.