ದೇಶ-ವಿದೇಶ

ಇತಿಹಾಸ ನಿರ್ಮಿಸಿದ ಇಸ್ರೋ…..

167

ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ.

ಭಾರತ ಇದುವರೆಗೂ ಅಭಿವೃದ್ಧಿಪಡಿಸಿದ ರಾಕೆಟ್‌ಗಳಲ್ಲೇ ಅತ್ಯಂತ ದೈತ್ಯ ಗಾತ್ರ (200 ಆನೆ ತೂಕದ) ಮತ್ತು ಸೂಪರ್‌ ಪವರ್‌ ಹೊಂದಿರುವ ಜಿಎಸ್‌ಎಲ್‌ವಿ ಮಾರ್ಕ್-3 ಉಡ್ಡಯನ ವಾಹಕವನ್ನು ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಆ ಮೂಲಕ, ಇಂಥ ಭಾರೀ ತೂಕದ ರಾಕೆಟ್‌ ಹಾರಿಸಬಲ್ಲ ಸಾಮರ್ಥ್ಯ ಹೊಂದಿರುವ ಅಮೆರಿಕ, ರಷ್ಯಾ, ಯುರೋಪ್‌, ಚೀನಾ ಹಾಗೂ ಜಪಾನ್‌ ಸಾಲಿಗೆ ಭಾರತವೂ ಸೇರ್ಪಡೆಯಾಗಿದೆ.

ಜಿಎಸ್‌ಎಲ್‌ವಿ ಮಾರ್ಕ್ 3 ರಾಕೆಟ್‌, ತನ್ನೊಂದಿಗೆ ಜಿಸ್ಯಾಟ್‌ 19 ಉಪಗ್ರಹ ಕೂಡಾ ಹೊತ್ತೊಯ್ಯಲಿದೆ. ಜಿಸ್ಯಾಟ್‌ 19 ಉಪಗ್ರಹವು, ಅತ್ಯಾಧುನಿಕವಾಗಿದ್ದು, ಡಿಜಿಟಲ್‌ ಇಂಡಿಯಾದ ಕನಸು ನನಸು ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಭಾರತ ಇದುವರೆಗೆ 41 ಉಪಗ್ರಹಗಳನ್ನು ಹಾರಿಬಿಟ್ಟಿದ್ದು, ಅದರಲ್ಲಿ 13 ಸಂಪರ್ಕ ಉಪಗ್ರಹಗಳಾಗಿವೆ.

ಜಿಎಸ್‏ಎಲ್‏ವಿ ಮಾರ್ಕ್ 3 ರಾಕೆಟ್ ಮಹತ್ವ :-

ಸದ್ಯ ಇಸ್ರೋ ಬತ್ತಳಿಕೆಯಲ್ಲಿ ಪಿಎಸ್‌ಎಲ್‌ವಿ ಹಾಗೂ ಜಿಎಸ್‌ಎಲ್‌ವಿ ಮಾರ್ಕ್-2 ರಾಕೆಟ್‌ಗಳು 2 ಟನ್‌ ಭಾರ ಹೊತ್ತೊ ಯ್ಯ ಬಲ್ಲದು. ಅದಕ್ಕೂ ಮೇಲ್ಪಟ್ಟಭಾರದ ಉಪಗ್ರಹ ಒಯ್ಯುವ ಸಾಮರ್ಥ್ಯ ಜಿಎಸ್‌ಎಲ್‌ವಿ ಮಾರ್ಕ್ 3ಗೆ ಇದೆ. ಈ ರಾಕೆಟ್‌ ಬಳಕೆಯಿಂದ ಸಂಪರ್ಕ ಉಪಗ್ರಹಗಳನ್ನು ಉಡಾವಣೆ ಮಾಡಲು ಬೇರೆ ದೇಶಗಳ ಮೇಲೆ ಅವಲಂಬಿಸುವುದು ತಪ್ಪುತ್ತದೆ.

ಜಿಎಸ್‌ಎಲ್‌ವಿ ವಿಶೇಷತೆ:-

ದ್ರವರೂಪದ ಆಮ್ಲಜನಕ ಹಾಗೂ ದ್ರವರೂಪದ ಜಲಜನಕವನ್ನು ಇಂಧನವಾಗಿ ಬಳಸಿ ಕಾರ್ಯನಿರ್ವಹಿಸುವ ಕ್ರಯೋಜೆನಿಕ್‌ ಎಂಜಿನ್‌ ಮೂಲಕ ಪೂರ್ಣಪ್ರಮಾಣದ ರಾಕೆಟ್‌ ಉಡಾವಣೆ ಮಾಡುತ್ತಿರುವುದು ಇದೇ ಮೊದಲು.

ಜಿಎಸ್‏ಎಲ್‏ವಿ ಮಾರ್ಕ್ 3 ದೇಶದ ಅತ್ಯಂತ ದೈತ್ಯ ರಾಕೆಟ್‌ ಆಗಿದೆ. ಜತೆಗೆ ಅತ್ಯಂತ ಕುಬ್ಜ ರಾಕೆಟ್‌ ಕೂಡ ಹೌದು. ಎತ್ತರ 43 ಮೀಟರ್‌. (ಪಿಎಸ್‌ಎಲ್‌ವಿ ರಾಕೆಟ್‌ 44.4 ಮೀಟರ್‌ ಎತ್ತರವಿದೆ).
ಭೂಸ್ಥಿರ ವರ್ಗಾವಣೆ ಕಕ್ಷೆಗೆ 4 ಟನ್‌, ಕೆಳ ಭೂ ಕಕ್ಷೆಗೆ 8 ಟನ್‌ ತೂಕದ ಉಪಗ್ರಹ ಒಯ್ಯುವ ಸಾಮರ್ಥ್ಯ ಹೊಂದಿದೆ.

ಜಿಸ್ಯಾಟ್‌ 19 ವಿಶೇಷತೆ:-ಜಿಸ್ಯಾಟ್‌-19, ಉಪಗ್ರಹ ಆಧರಿತ ಧ್ವನಿ, ವೇಗದ ಇಂಟರ್ನೆಟ್‌ ಹಾಗೂ ವಿಡಿಯೋದಂತಹ ಅತ್ಯಂತ ಸುರಕ್ಷಿತ ಸೇವೆ ಆರಂಭಿಸುವ ನಿಟ್ಟಿನಲ್ಲಿ ಮೊದಲ ಉಪಗ್ರಹ . ಈ ಹಿಂದೆ ಉಡಾವಣೆ ಮಾಡಲಾದ 6-7 ಉಪಗ್ರಹಗಳಿಗೆ ಒಂದು ಜಿಸ್ಯಾಟ್‌- 19 ಸಮ. ಜಿಸ್ಯಾಟ್‌ 19ರಲ್ಲಿ ಟ್ರಾನ್ಸ್‌ಫಾಂಡರ್‌ಗಳು ಇರುವುದಿಲ್ಲ. ಈ ಹಿಂದಿನ ಉಪಗ್ರಹಗಳಲ್ಲಿ 1 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದ್ದರೆ ಈ ಉಪಗ್ರಹದಲ್ಲಿ ಒಮ್ಮೆಗೆ 8 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಿನಕ್ಕೆ 40 ಕಪ್ ಚಹಾ ಕುಡಿಯುತ್ತಿದ್ದ ಮಹಿಳೆ ನಂತರ ಏನಾಯ್ತು ಗೊತ್ತಾ ?ತಿಳಿದರೆ ಶಾಕ್ ; ತಾಯಿಯ ಕೊನೆ ಆಸೆ ತೀರಿಸಿದ ಮಗಳು..!

    ಇಂಗ್ಲೆಂಡ್‌ನ ಲೀಸೆಸ್ಟರ್ ಶೈರ್‌ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…

  • ಉಪಯುಕ್ತ ಮಾಹಿತಿ

    ಲಕ್ಷಾಂತರ ಪ್ಯಾನ್ ಕಾರ್ಡ್ ರದ್ದು!ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಿದೆಯಾ,ಇಲ್ಲವಾ ಚೆಕ್ ಮಾಡಲು ಈ ಲೇಖನಿ ಓದಿ…

    ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್‌ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.

  • ಸುದ್ದಿ

    ಸ್ನಾಕ್ಸ್ ಗೆ ಮನೆಯಲ್ಲೇ ಸ್ಪೈಸಿ ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ,.!

    ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…

  • ಸುದ್ದಿ

    ಏಕಕಾಲಕ್ಕೆ ಪಂಚಭಾಷೆಗಳಲ್ಲಿ ರಿಲೀಸ್ ಆಗಲಿರುವ ಶಿವರಾಜ್‌ ಕುಮಾರ್‌ ಭಜರಂಗಿ 2 ಚಿತ್ರ…!

    ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್‌ ಮಾಡಿದ್ದೇವೆ. ಸೆಪ್ಟೆಂಬರ್‌ 9ರಿಂದ ಶೂಟಿಂಗ್‌ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್‌ ಸಿನಿಮಾದ ಬಂದ ನಂತರ ಪ್ಯಾನ್‌ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್‌ ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್‌ ಕುಮಾರ್‌ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…

  • ಸೌಂದರ್ಯ

    ‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

    ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…

  • ಸುದ್ದಿ

    ಅಡುಗೆ ಮಾಡಲು ಹೊಲದಲ್ಲಿ ಕ್ಯಾರೆಟ್ ಕಿತ್ತಾಗ, ಅದರಲ್ಲಿ ಇದ್ದ ವಸ್ತುವನ್ನು ನೋಡಿ ಶಾಕ್ ಆದ ಮಹಿಳೆ.

    ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…