ಜ್ಯೋತಿಷ್ಯ

ಯಾವ ದಿನ ಹುಟ್ಟಿದವರು, ಏನೆಲ್ಲಾ ಗುಣ ನಡೆತೆ ಹೊಂದಿರುತ್ತಾರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1462

ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

ದೇಹದ ಮೇಲಿನ ಮಚ್ಚೆ, ನಿಮ್ಮ ಜಾತಕವನ್ನೇ ಬಿಚ್ಚಿಡುತ್ತದೆ! ಹುಟ್ಟಿದ ದಿನಾಂಕ, ಸಮಯ ಗೊತ್ತಾದರೆ ಜ್ಯೋತಿಷಿಗಳು ವ್ಯಕ್ತಿಯ ವ್ಯಕ್ತಿತ್ವ ಮತ್ತು ಇತರ ವಿಷಯಗಳ ಬಗ್ಗೆ ಸೂಕ್ತ ವಿವರ ನೀಡಬಲ್ಲರು. ಇಂದಿನ ಲೇಖನದಲ್ಲಿ ಹುಟ್ಟಿದ ದಿನ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಏನು ಹೇಳುತ್ತದೆ ಎಂಬುದನ್ನು ನೋಡೋಣ: ಈ ವಿವರಗಳ ಬಗ್ಗೆ ಅರಿತರೆ ನಿಮ್ಮ ಅಥವಾ ನೀವು ತಿಳಿದುಕೊಳ್ಳಬೇಕಾದ ವ್ಯಕ್ತಿಯ ವ್ಯಕ್ತಿತ್ವ ಮತ್ತು ನಿಮ್ಮ ಗುಣಗಳು ಹೇಗೆ ಎಂಬುದನ್ನು ಕಂಡುಕೊಳ್ಳಬಹುದು.

ಸೋಮವಾರ:-

ಈ ದಿನದಂದು ಹುಟ್ಟಿದವರು ಸಾಮಾನ್ಯವಾಗಿ ಸ್ವಪ್ರಶಂಸಕರಾಗಿದ್ದು ಉಳಿದವರನ್ನೆಲ್ಲಾ ದ್ವೇಶಿಸುವ ಮನೋಭಾವ ಹೊಂದಿರುತ್ತಾರೆ. ಆದರೆ ಕೆಲವು ಅಪವಾದ ಎಂಬಂತೆ ಈ ದಿನ ಹುಟ್ಟಿರುವವರಲ್ಲಿ ಕೆಲವರು ಅತ್ಯಂತ ಪ್ರೇಮಮಯಿಗಳಾಗಿರುತ್ತಾರೆ.  ಇವರು ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡುವವರೂ, ಕ್ರಿಯಾತ್ಮಕರೂ, ತಮ್ಮ ವಿಚಾರಗಳನ್ನು ತಮ್ಮೊಂದಿಗೇ ಇಟ್ಟುಕೊಳ್ಳುವವರೂ ಆಗಿರುತ್ತಾರೆ. ಇವರು ಯಸಸ್ಸನ್ನು ಹಿಂಬಾಲಿಸಿಕೊಂಡು ಹೋಗುವವರೂ, ನಾಯಕತ್ವದ ಗುಣಗಳನ್ನು ಹೊಂದಿರುವವರೂ ಆಗಿದ್ದಾರೆ.

ಮಂಗಳವಾರ:-

ಇವರು ಕುತೂಹಲಕಾರಿ ವ್ಯಕ್ತಿಗಳಾಗಿದ್ದು ತಮ್ಮ ಬಗ್ಗೆ ಬರುವ ಅಭಿಪ್ರಾಯಗಳನ್ನು ಅತಿ ಗಂಭೀರವಾಗಿ ಪರಿಗಣಿಸುವ ವ್ಯಕ್ತಿಗಳಾಗಿರುತ್ತಾರೆ. ಇವರು ಒಂದು ಗುರಿಯನ್ನು ಹೊಂದಿದ್ದು ಆ ಗುರಿಯನ್ನು ಪಡೆಯಲು ತಮ್ಮ ಪೂರ್ಣ ಸಾಮರ್ಥ್ಯವನ್ನು ಮುಡಿಪಾಗಿಸುತ್ತಾರೆ. ಸಂಬಂಧಗಳಿಗೆ ಹೆಚ್ಚು ಒಲವು ನೀಡುವ ಇವರು ಸಾಮಾನ್ಯವಾಗಿ ತಮ್ಮ ಕೆಲಸದ ಬಗ್ಗೆ ಹೆಚ್ಚು ಒತ್ತಡವನ್ನು ಅನುಭವಿಸುತ್ತಾರೆ.

ಬುಧವಾರ:-

ಈ ದಿನ ಹುಟ್ಟಿದವರು ತಮ್ಮ ಕೆಲಸವನ್ನು ಇಷ್ಟಪಟ್ಟರೂ ಆರಾಮವಾಗಿ ಮಗಿಸುವಂತಹವರಾಗಿದ್ದಾರೆ. ಇವರು ತಾವಾಗಿ ಕೆಲಸ ಮಾಡುವುದಕ್ಕಿಂತ ತಮ್ಮ ಕೈಕೆಳಗಿನ ವ್ಯಕ್ತಿಗಳಿಂದ ಪೂರ್ಣಪ್ರಮಾಣದ ಕೆಲಸವನ್ನು ಮಾಡಿಸಿಕೊಳ್ಳುವ ಗುಣ ಹೊಂದಿದ್ದು ಇದಕ್ಕಾಗಿ ತಮ್ಮ ಸ್ನೇಹ ಆದರಗಳನ್ನು ಬಳಸುತ್ತಾರೆ. ಇವರು ಸಮಾಜದ ವಿವಿಧ ಬಗೆಯ ವ್ಯಕ್ತಿಗಳೊಂದಿಗೆ ಇತರರಿಗಿಂತ ಸುಲಭವಾಗಿ ಸ್ನೇಹ ಸಂಪಾದಿಸಿಕೊಳ್ಳುತ್ತಾರೆ.

ಗುರುವಾರ:-

ಈ ದಿನ ಹುಟ್ಟಿದ ಜನರು ಸಾಮಾನ್ಯವಾಗಿ ಇತರರಿಂದ ಪ್ರಶಂಸೆ ಪಡೆಯುವವರಾಗಿರುತ್ತಾರೆ. ಇವರು ಆಕರ್ಷಕ ವ್ಯಕ್ತಿತ್ವ ಹೊಂದಿದ್ದು ಹುಟ್ಟಿನಿಂದಲೇ ನಾಯಕತ್ವದ ಗುಣ ಹೊಂದಿರುತ್ತಾರೆ. ಇವರು ಒಂಟಿಯಾಗಿ ಕೆಲಸ ಮಾಡಲು ಇಚ್ಛಿಸುವವರಾಗಿದ್ದು ಸದಾ ಆಶಾವಾದಿಗಳಾಗಿರುತ್ತಾರೆ. ಇವರು ತಮ್ಮ ಸುತ್ತಮುತ್ತಲಿನ ಜನರಿಗೆ ಅತಿ ಹೆಚ್ಚಿನ ಗೌರವ ನೀಡುತ್ತಾರೆ ಹಾಗೂ ಗೌರವ ಪಡೆಯಲು ಇಚ್ಛಿಸುತ್ತಾರೆ.

ಶುಕ್ರವಾರ:-

ಶುಕ್ರವಾರ ಜನಿಸಿದ ಜನರು ಕ್ರಿಯಾತ್ಮರಾಗಿರುತ್ತಾರೆ. ಇವರು ಅಪಾರ ಬುದ್ಧಿಮತ್ತೆಯುಳ್ಳವರಾಗಿದ್ದು ತಮ್ಮ ಸ್ನೇಹವೃಂದದಲ್ಲಿ ಪ್ರಮುಖ ಪಾತ್ರ ಪಡೆಯುತ್ತಾರೆ. ಇವರಿಗೆ ಅಪಾರವಾದ ದೂರದೃಷ್ಟಿ ಮತ್ತು ಒಳ ಅರಿವು ಸಹಾ ಜನ್ಮತಃ ಬಂದಿರುತ್ತದೆ.

ಶನಿವಾರ:-

ಈ ದಿನ ಹುಟ್ಟಿದವರು ಅತಿ ಹೆಚ್ಚಿನ ಆತ್ಮವಿಶ್ವಾಸವುಳ್ಳವರಾಗಿರುತ್ತಾರೆ. ಆದರೆ ಕೆಲವೊಮ್ಮೆ ಇವರು ಚಿಕ್ಕಪುಟ್ಟ ಸೋಲುಗಳಿಗೂ ತೀರಾ ಹತಾಶೆ ವ್ಯಕ್ತಪಡಿಸಿ ಹಿಮ್ಮೆಟ್ಟುತ್ತಾರೆ. ಇವರು ಸಾಮಾನ್ಯವಾಗಿ ಹೊಸ ವಿಚಾರಗಳಿಗೆ ಸ್ಪಂದಿಸದೇ ಬದಲಿಗೆ ಋಣಾತ್ಮಕ ಸಲಹೆಗಳನ್ನೇ ನೀಡುತ್ತಾರೆ. ಇವರು ತಮ್ಮ ರೂಪ ಲಾವಣ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಕೊಂಚ ಕುಟಿಲರೂ ಆಗಿರುತ್ತಾರೆ.

ಭಾನುವಾರ:-

ಈ ದಿನ ಹುಟ್ಟಿದ ವ್ಯಕ್ತಿಗಳು ಅತಿ ಆಶಾವಾದಿಗಳಾಗಿದ್ದು ಭಿನ್ನ ಸಂದರ್ಭಗಳಲ್ಲಿ ಭಿನ್ನವಾಗಿ ಪ್ರತಿಕ್ರಿಯಿಸುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಚಿಂತನೆ ಹೊಂದಿದ್ದು ಸದಾ ನಗುತ್ತಲೇ ಇರುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜದಲ್ಲಿರಲು ಇಷ್ಟಪಡುವಂತೆಯೇ ಕೊಂಚ ಕಾಲ ಏಕಾಂತದಲ್ಲಿಯೂ ಇರಲು ಇಚ್ಛಿಸುತ್ತಾರೆ.

ನಿಮ್ಮ ಹುಟ್ಟಿದ ದಿನಾಂಕ ನಿಮ್ಮ ಭವಿಷ್ಯ ಹೇಳುತ್ತೆ…ತಿಳಿಯಲು ಕೆಳಗಿನ ಚಿತ್ರದ ಮೇಲೆ ಕ್ಲಿಕ್ ಮಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಏಟು ತಿಂದ ಹಾವುಗಳು, ಹೊಡೆದವರನ್ನು ಸುಮ್ಮನೆ ಬಿಡಲ್ವಾ!ತಿಳಿಯಲು ಈ ಲೇಖನ ಓದಿ…

    ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.

  • ದೇವರು-ಧರ್ಮ

    ಪ್ರತಿಯೊಬ್ಬ “ಹಿಂದೂ ಧರ್ಮ”ದವರು ಕೂಡ ತಿಳಿಯಲೇಬೇಕಾದ ಈ ವಿಷಯಗಳು..!ಏನೆಂದು ತಿಳಿಯಬೇಕಾದ್ರೆ ಈ ಲೇಖನ ಓದಿ…

    ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.

  • ಸುದ್ದಿ

    ಕೊನೆಗೂ ಐಟಿ ಉದ್ಯೋಗಿಗಳಿಗೆ ಎದುರಾದ ಸಂಕಷ್ಟ..! ಯಾಕೆ ಗೊತ್ತಾ?

    ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್​ಆರ್​ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್​ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…

  • ಸುದ್ದಿ

    ಕಣ್ಣಿಗೆ ನೀಲಿ ಟ್ಯಾಟೂ ಹಾಕಿಸಿಕೊಂಡ ಮಾಡೆಲ್ ನಂತರ ಏನಾಯ್ತು ಗೊತ್ತಾ,?ಇದನ್ನೊಮ್ಮೆ ಓದಿ,.!

    ಟ್ಯಾಟೂ ಎಂದರೆ  ಯಾರಿಗೆ  ತಾನೇ ಇಷ್ಟ ಇರಲ್ಲ  ಹೇಳಿ, ಈಗಿನ  ಕಾಲದಲ್ಲಿ ಎಲ್ಲರಿಗೂ  ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ  ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು  ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್‌ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ…

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ನಿಮ್ಮಲ್ಲಿ ಇದ್ರೆ, ನಿಮ್ಗೆ ಸಿಗಲಿದೆ ಕಾರ್ ಭಾಗ್ಯ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.