ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.

ಮಾರುಕಟ್ಟೆಗೆ ಅದೆಷ್ಟೇ ಹೊಸ ಹೇರ್ ಆಯಿಲ್ ಬಂದರೂ ಪ್ಯಾರಾಚ್ಯೂಟ್ ಆಯಿಲನ್ನು ಮಾತ್ರ ಇಂದಿಗೂ ಬಹಳಷ್ಟು ಮಂದಿ ಬಳಸುತ್ತಿದ್ದಾರೆ. ಆದರೆ ಈ ಆಯಿಲ್ ಬಗ್ಗೆ ನಿಮಗೊಂದು ಸಂಗತಿ ಗೊತ್ತಾ.? ನಿಜವಾಗಿ ನಾವು ಈ ಎಣ್ಣೆಯನ್ನು ಹೇರ್ ಆಯಿಲ್ ಆಗಿ ಬಳಸುತ್ತಿದ್ದೇವಾದರೂ, ಪ್ಯಾರಾಚ್ಯೂಟ್ ಕೋಕೊನಟ್ ಹೇರ್ ಆಯಿಲ್ ಅಲ್ಲವಂತೆ. ಹೌದು ನೀವು ಕೇಳಿದ್ದು ನಿಜ. ಅದು ಕುಕಿಂಗ್ ಆಯಿಲ್ ಅಂತೆ. ಹೌದು ಸಾಕ್ಷಾತ್ ಅದನ್ನು ತಯಾರಿಸುವ ಕಂಪೆನಿಯೇ ಆ ಮಾತು ಹೇಳುತ್ತಿದೆ.

ಪ್ಯಾರಾಚ್ಯೂಟ್ ಕೋಕನಟ್ ಹೇರ್ ಆಯಿಲ್ ಅಲ್ಲ. ಅದು ಕುಕಿಂಗ್ ಆಯಿಲ್. ಬೇಕಿದ್ದರೆ ಅದರ ಪ್ಯಾಕಿಂಗ್ ಮೇಲೆ ನೋಡಿದರೆ ಕೋಕೊನಟ್ ಆಯಿಲ್ ಎಂದಿರುತ್ತದಾದರೂ..ಹೇರ್ ಆಯಿಲ್ ಎಂದು ಇರಲ್ಲ ಅಲ್ಲವೇ. ಅಷ್ಟೇ ಅಲ್ಲ, ಆ ಆಯಿಲ್ ಕುಕಿಂಗ್ ಆಯಿಲ್ ಎಂದು ಹೇಳಿ ಅದನ್ನು ತಯಾರಿಸುವ ಕಂಪೆನಿ ವಾದಿಸುತ್ತಾ ಸರಕಾರಕ್ಕೆ ತೆರಿಗೆ ವಂಚಿಸುತ್ತಿದೆ. ಯಾಕೆಂದರೆ…ಕುಕಿಂಗ್ ಆಯಿಲ್ಸ್ ಮೇಲೆ ಅಬಕಾರಿ ಸುಂಕ ಇರಲ್ಲ. ಕಾಸ್ಮೆಟಿಕ್ಸ್ನ ಒಂದು ಭಾಗವಾದ ಹೇರ್ ಆಯಿಲ್ ಮೇಲೆ ಈ ಸುಂಕ ಇರುತ್ತದೆ. ಆದಕಾರಣ ಮರಿಕೋ ಎಂಬ ಕಂಪೆನಿ ಏನು ಮಾಡುತ್ತಿದೆ ಎಂದರೆ… ತನ್ನ ಪ್ಯಾರಾಚ್ಯೂಟ್ ಕೋಕೋನಟ್ ಆಯಿಲನ್ನು ಕುಕಿಂಗ್ ಆಯಿಲ್ ಎಂದು ಹೇಳುತ್ತಿದೆ.

ಈ ಸಂಬಂಧ ಸರಕಾರ ಕೋರ್ಟ್ ಮೆಟ್ಟಿಲೇರಿತು. ಮರಿಕೋ ಕಂಪೆನಿ ತಯಾರಿಸುತ್ತಿರುವ ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಕುಕಿಂಗ್ ಆಯಿಲ್ ಅಲ್ಲ, ಹೇರ್ ಆಯಿಲ್ ಎಂದು, ಆದಕಾರಣ ಅದರ ಮೇಲೆ ತೆರಿಗೆ ವಿಧಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಕೋರ್ಟನ್ನು ಸರಕಾರ ಕೋರಿದೆ. ಆದರೆ ಕೋರ್ಟ್ ಇದಕ್ಕೆ ವಿವರಣೆ ಕೇಳಿದರೆ ಸದರಿ ಮರಿಕೋ ಕಂಪೆನಿ ತನ್ನ ವಾದವನ್ನು ಮಂಡಿಸಿತು. ತಾವು ತಯಾರಿಸುತ್ತಿರುವ ಪ್ಯಾರಾಚ್ಯೂಟ್ ಆಯಿಲ್ ಕುಕಿಂಗ್ ಆಯಿಲ್ ಎಂದು, ಹೇರ್ ಆಯಿಲ್ ಅಲ್ಲವೆಂದು, ಅದರ ಮೇಲೆ ಎಲ್ಲೂ ಹೇರ್ ಆಯಿಲ್ ಎಂದು ಬರೆದಿಲ್ಲವೆಂದು, ಬೇಕಿದ್ದರೆ ಪರಿಶೀಲಿಸಬಹುದೆಂದು ವಾದಿಸಿತು.

ಆದರೆ 200 ಎಂಎಲ್ಗಿಂತಲೂ ಕಡಿಮೆ ಪ್ರಮಾಣದಲ್ಲಿ ಪ್ಯಾಕ್ ಶಾಚೆಗಳನ್ನು ಯಾಕೆ ಕೊಡುತ್ತಿದ್ದೀರಿ ಎಂದು ಕೇಂದ್ರ ಕೇಳಿದ್ದಕ್ಕೆ, ಅದಕ್ಕೆ ಮರಿಕೋ ಪ್ರತಿಕ್ರಿಯಿಸುತ್ತಾ, ಆ ರೀತಿಯ ಶಾಚೆಗಳು ಬಡ, ಮಧ್ಯಮ ವರ್ಗದ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ತಯಾರಿಸಿದೇವೆಂದು, ಅವರು ಆಯಿಲನ್ನು ಅಡುಗೆಗೆ ಕಡಿಮೆ ಪ್ರಮಾಣದಲ್ಲಿ ಬಳಸುತ್ತಾರೆಂದು, ಹಾಗಾಗಿ ದೊಡ್ಡ ಪ್ಯಾಕೆಟ್ ಅಗತ್ಯವಿಲ್ಲವೆಂದು, ಚಿಕ್ಕ ಪ್ಯಾಕೆಟ್ ಸಾಕೆಂದು ಹಾಗಾಗಿ ಅವನ್ನು ಬಳಸುತ್ತಿದ್ದೇವೆಂದು ಮರಿಕೋ ವಾದಿಸಿತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್…