ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು



ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

ಆ ಪ್ರಕಾರ ನೋಡುವುದಾದರೆ ಇಡೀ ಮೈಸೂರು ಜಿಲ್ಲೆಯಲ್ಲಿ ಪಕ್ಷೇತರವಾಗಿ ಹಾಗೂ ವೈಯುಕ್ತಿಕ ಹೆಚ್ಚು ವರ್ಚಸ್ಸು ಹೊಂದಿರುವ ಗೆಲ್ಲಬಲ್ಲ ವ್ಯಕ್ತಿ ಚಾಮರಾಜ ಅಭ್ಯರ್ಥಿ ಕೆ ಹರೀಶ್ ಗೌಡರು ಒಬ್ಬರೇ.. ಚಾಮರಾಜ ಕ್ಷೇತ್ರದಲ್ಲಿ ತನ್ನದೇ ಆದ ವೈಯಕ್ತಿಕ ಪ್ರಾಬಲ್ಯ ಹೊಂದಿರುವ ಕೆ ಹರೀಶ್ ಗೌಡರು ಸಮಾಜಸೇವೆ ಮೂಲಕ ಮನೆ ಮನೆ ಮಾತಾಗಿರುವವರು, ಕಳೆದ ಹನ್ನೆರಡು ವರ್ಷಗಳಿಂದಲೂ ಚಾಮರಾಜ ಕ್ಷೇತ್ರದ ಜನತೆಯ ಜೊತೆ ನಿರಂತರ ಸಂಪರ್ಕ ಹೊಂದಿ ಜನರ ಕಷ್ಟ ನೋವುಗಳಿಗೆ ನೆರವಾಗುತ್ತಾ ಜನಾನುರಾಗಿ ಮನ್ನಣೆ ಪಡೆದವರು… ಮೈಸೂರಿನ ಇನ್ಯಾವ ಕ್ಷೇತ್ರಗಳಲ್ಲೂ ಪಕ್ಷೇತರವಾಗಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿ ಇಲ್ಲ ಯಾಕೆಂದರೆ ಇನ್ನೆಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ತಮ್ಮ ಪ್ರಾಬಲ್ಯ ಹೊಂದಿವೆ… ಹೆಮ್ಮೆಯಿಂದ ಶೇರ್ ಮಾಡಿ ಚಾಮರಾಜ ಕ್ಷೇತ್ರದಲ್ಲಿ ಕೆ ಹರೀಶ್ ಗೌಡರ ಗೆಲ್ಲುವ ಖಚಿತ…

ಮೂವತ್ತು ವರ್ಷಗಳ ಜೆಡಿಎಸ್ ಸೋಲು ಮುಂದುವರಿಯುತ್ತಾ? ಮೈಸೂರು ನಗರ ಪ್ರದೇಶದ ಹೃದಯ ಭಾಗ ಎಂದು ಕರೆಸಿಕೊಳ್ಳುವ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಕಳೆದ ಮೂವತ್ತೆರಡು ವರ್ಷಗಳಿಂದ ಗೆಲ್ಲಲು ಸಾಧ್ಯವಾಗಿಲ್ಲ, 1986 ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಿ ಎಂ ಚಿಕ್ಕಬೋರಯ್ಯರವರು ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ ಜನತಾ ಪಕ್ಷ ಜನತಾದಳ ಆದ ನಂತರ ಒಮ್ಮೆಯೂ ಚಾಮರಾಜ ಕ್ಷೇತ್ರ ಜೆಡಿಎಸ್ ವಶವಾಗಿಲ್ಲ, ಮೂವತ್ತು ವರ್ಷಗಳ ಸೋಲಿಗೆ ಕಾರಣ ಹಲವಾರಿವೆ ಆದರೆ ಸೋಲನ್ನು ಮೆಟ್ಟು ನಿಂತು ಗೆಲ್ಲುವ ಕಡೆ ಜೆಡಿಎಸ್ ಪಕ್ಷವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿ ಶ್ರಮ ಹಾಕಿದ್ದು ಪಕ್ಷ ಕಟ್ಟಿದ್ದು ಜನರು ಜೆಡಿಎಸ್ ಪಕ್ಷದ ಹೆಸರು ಹೇಳುವಂತೆ ಮಾಡಿದ್ದು ಕೆ ಹರೀಶ್ ಗೌಡ…

ಜೆಡಿಎಸ್ ಪಕ್ಷ ನಿಂತಿರುವುದು ದೇವೇಗೌಡ್ರು ಹಾಗೂ ಕುಮಾರಣ್ಣರಿಂದ ಹಾಗೂ ಎರಡನೇ ಹಂತದ ನಾಯಕರು ಹಾಗೂ ಸಾವಿರಾರು ನಿಷ್ಟಾವಂತ ಕಾರ್ಯಕರ್ತರಿಂದ, ಪಕ್ಷ ಕಟ್ಟಲು ವರಿಷ್ಠರ ಶ್ರಮದ ಜೊತೆ ಎರಡನೇ ಹಂತದ ನಾಯಕರ ಶ್ರಮವೂ ಸಹಾ ಇರತ್ತೆ ಎಂಬುದನ್ನು ಮರೆಯಬಾರದು, ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂಬುದಾದರೆ ಮೂವತ್ತೆರಡು ವರ್ಷದಿಂದ ಯಾಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ಪ್ರಶ್ನೆ ಮೂಡತ್ತೆ?? ಒಂದು ವರ್ಷದ ಹಿಂದಿನಿಂದಲೂ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲತ್ತೆ ಎಂಬ ಪ್ರಬಲವಾದ ಮಾತಿತ್ತು ಕಾರಣ ಕೆ ಹರೀಶ್ ಗೌಡ ಅಭ್ಯರ್ಥಿಯಾಗುತ್ತಾರೆ ಹರೀಶ್ ಗೌಡ ಪಕ್ಷ ಸಂಘಟನೆ ಮಾಡಿದ್ದಾರೆ ಜನರ ಸೇವೆ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಹಾಗೂ ಕೆ ಹರೀಶ್ ಗೌಡ ಸ್ಥಳೀಯ ಅಭ್ಯರ್ಥಿ ಜನರ ನಾಡಿಮಿಡಿತ ಅರಿತಿದ್ದಾರೆ ಸಾವಿರಾರು ಜನ ಅಭಿಮಾನಿಗಳು ಬೆಂಬಲಿಗರು ಹೊಂದಿದ್ದಾರೆ.

ಈ ಕಾರಣಕ್ಕಾಗಿ ಜೆಡಿಎಸ್ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಚಲವಾದ ನಂಬಿಕೆ ಇತ್ತು ಆದರೆ ಈಗ ನಂಬಿಕೆ ಹುಸಿಯಾಗಿದೆ ಜೆಡಿಎಸ್ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಲ್ಲಿ ಎಡವಿದೆ, ಅಂಗೈಯಲ್ಲಿ ಗೆಲ್ಲುವ ಅಭ್ಯರ್ಥಿ ಇಟ್ಟುಕೊಂಡು ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ರಾಜಕೀಯ ಗಂಧ ತಿಳಿಯದವರನ್ನು ಅಭ್ಯರ್ಥಿ ಮಾಡಲು ಹೊರಟಿದೆ ಆ ಮೂಲಕ ಜೆಡಿಎಸ್ ಪಕ್ಷ ಹಾಗೂ ನಿಷ್ಠಾವಂತ ಕಾರ್ಯಕರ್ತರ ನಡುವಿನ ಅವಿನಾಭಾವ ಸಂಬಂಧಕ್ಕೆ ಎಳ್ಳುನೀರು ಬಿಟ್ಟಿದೆ, ನಿಷ್ಠಾವಂತ ನಾಯಕ ಕೆ ಹರೀಶ್ ಗೌಡರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ನಿಷ್ಠಾವಂತರು ಪಕ್ಷದಿಂದ ದೂರ ಉಳಿದಿದ್ದಾರೆ ಹಾಗೂ ಕ್ಷೇತ್ರಾದ್ಯಂತ ಕೆ ಹರೀಶ್ ಗೌಡರ ಬೆಂಬಲಿಗರು ಹಿತೈಷಿಗಳು ಅಭಿಮಾನಿಗಳು ಕೆ ಹರೀಶ್ ಗೌಡರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಈ ಭಾರಿ ಶಾಸಕರನ್ನಾಗಿ ಮಾಡಿಯೇ ತಿರುತ್ತೇವೆ ಎಂಬ ದೃಡಸಂಕಲ್ಪ ಮಾಡಿದ್ದಾರೆ.

ಕಳೆದ ಒಂದು ತಿಂಗಳಿನಿಂದಲೂ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲೂ ಹರೀಶ್ ಗೌಡರ ಹಿತೈಷಿಗಳ ಸಭೆ ನಡೆದಿದ್ದು ಎಲ್ಲಾ ಭಾಗದಲ್ಲೂ ಕೆ ಹರೀಶ್ ಗೌಡರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.. ಹನ್ನೆರಡು ವರ್ಷಗಳಿಂದ ಕ್ಷೇತ್ರದ ಜನರ ಜೊತೆ ನಿಕಟ ಸಂಬಂಧ ಹೊಂದಿರುವ ಹರೀಶ್ ಗೌಡರಿಗೆ ಪಕ್ಷೇತರವಾಗಿ ಚುನಾವಣೆ ಎದುರಿಸುವುದು ಕಷ್ಟವೇನಲ್ಲ ಎಂಬುದು ಸಾರ್ವಜನಿಕರ ಮಾತು.. ಯಾವ ಪಕ್ಷದಲ್ಲಿ ಯಾರು ಅಭ್ಯರ್ಥಿಯಾದರೂ ನಿಷ್ಠಾವಂತ ನಾಯಕ ಜನಾನುರಾಗಿ ಕೆ ಹರೀಶ್ ಗೌಡರನ್ನು ಗೆಲ್ಲಿಸಿಕೊಳ್ಳಬೇಕು ಅವರು ಜನರ ಕೆಲಸ ಮಾಡುತ್ತಾರೆ ಕೆ ಹರೀಶ್ ಗೌಡರಿಂದ ಚಾಮರಾಜ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಜನ ತಿರ್ಮಾನಿಸಿದ್ದಾರೆ.

ಚುನಾವಣೆ ಇನ್ನೂ ನೂರು ದಿನ ಇದೆ ಹನ್ನೆರಡು ವರ್ಷಗಳ ಕೆ ಹರೀಶ್ ಗೌಡರ ದುಡಿಮೆಗೆ ಬೆಲೆ ಕೊಡಬೇಕು, ಕೆ ಹರೀಶ್ ಗೌಡರ ವ್ಯಕ್ತಿತ್ವಕ್ಕೆ ಬೆಲ ಕೊಡಬೇಕು ಎಂದು ಮತದಾರ ಮನಸ್ಸು ಮಾಡಿದ್ದಾನೆ ಈ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಜನತೆ ಜಾತಿ ಧರ್ಮ ಪಕ್ಷ ಮರೆತು ನಿಷ್ಠಾವಂತ ನಾಯಕನ ಉಳಿಸುತ್ತಾರೆ ಎಂಬ ಭರವಸೆ ನಮಗೂ ಇದೆ.. ಈಗಲೂ ಜೆಡಿಎಸ್ ಪಕ್ಷದಿಂದ ಕೆ ಹರೀಶ್ ಗೌಡರಿಗೆ ಟಿಕೆಟ್ ನೀಡಿದ್ದಲ್ಲಿ ಜೆಡಿಎಸ್ ಪಕ್ಷ ಮೂವತ್ತೆರಡು ವರ್ಷಗಳ ನಂತರ ಈ ಕ್ಷೇತ್ರದಲ್ಲಿ ಗದ್ದುಗೇರುವುದು ಖಚಿತ, ಈಗಲೂ ಕಾಲ ಮಿಂಚಿಲ್ಲ ವರಿಷ್ಠರು ಮತ್ತೊಮ್ಮೆ ಯೋಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿ.. ಕಾದು ನೋಡೋಣಾ. ಧನ್ಯವಾದಗಳು

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್ರೈಸರ್ಸ್ ಹೈದರಾಬಾದ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….
ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್, ಸಿಂಗಲ್ ಜಾರ್ಜ್ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್ಶಿಪ್ ಸ್ಕೂಟರ್ 72 ವಿ 22ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ. ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ…