News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ಬಿಗ್ ಬಾಸ್-5ರ ಪಟ್ಟ ಯಾರಿಗೆ.?ಕಾಮಾನ್ ಮ್ಯಾನ್ Vs ಸೆಲೆಬ್ರೆಟಿಸ್!ಸೋಶಿಯಲ್ ಮೀಡಿಯಾದಲ್ಲಿ ಜನರ ಅಭಿಪ್ರಾಯ ಏನು ಗೊತ್ತಾ?ಇಲ್ಲಿದೆ ಪೂರ್ತಿ ವಿವರ,ತಿಳಿಯಲು ಮುಂದೆ ಓದಿ…

612

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.

ಹೌದು, ಮಧ್ಯರಾತ್ರಿ ಇದ್ದಕ್ಕಿದ್ದಂತೆ ಸಮೀರ್ ಆಚಾರ್ಯವರನ್ನು ಎಲಿಮಿನೇಟ್ ಮಾಡುವ ಮುಖಾಂತರ ಉಳಿದ 5 ಜನ ಸ್ಪರ್ಧಿಗಳು ಬಿಗ್ ಬಾಸ್ ಸಂಚಿಕೆ 5ರ ಫೈನಲ್ ತಲುಪಿದ್ದಾರೆ. ದಿವಾಕರ್,ನಿವೇದಿತಾ ಗೌಡ,ಶ್ರುತಿ ಪ್ರಕಾಶ್,ಜಯರಾಂ ಕಾರ್ತಿಕ್,ಮತ್ತು ಚಂದನ್ ಶೆಟ್ಟಿ ಈ 5 ಜನರ ಗ್ರಾಂಡ್ ಪಿನಾಲೆ ತಲುಪಿದ್ದಾರೆ.

ಬಿಗ್ ಬಾಸ್ ಸಂಚಿಕೆ 5ರ ಪಟ್ಟಕ್ಕೆ ನೆನ್ನೆಯಿಂದಲೇ ವೋಟಿಂಗ್ ಶುರುವಾಗಿದೆ.ಈ 5 ಜನರಲ್ಲಿ ದಿವಾಕರ್ ಉಳಿದಂತೆ 4 ಜನ ಸೇಲೆಬ್ರೆಟಿಗಳಾಗಿದ್ದು, ಕಾಮನ್ ಮ್ಯಾನ್ Vs ಸೇಲೆಬ್ರೆಟಿಸ್ ಇವರಲ್ಲಿ ಯಾರೂ ಗೆಲ್ಲುತ್ತಾರೆಂಬ ಕುತೂಹಲ ಜನರಲ್ಲಿ ಇಮ್ಮಡಿಗೊಂಡಿದೆ.ಹಾಗಾದ್ರೆ ವೀಕ್ಷಕರು ಹೇಳುವ ಪ್ರಕಾರ ಯಾರು ಗೆಲ್ಬೇಕು ಎಂಬ ವಿವರ ಇಲ್ಲಿದೆ ಮುಂದೆ ನೋಡಿ…

ನಿವೇದಿತಾ ಗೌಡ:-  

ನಿವೇದಿತಾ ಗೌಡ ಹುಟ್ಟಿದ್ದು ಮತ್ತು ಬೆಳೆದಿದ್ದು ಮೈಸೂರಿನಲ್ಲಿಯೇ. ಆದರೂ ಆಕೆಗೆ ಸರಿಯಾಗಿ ಕನ್ನಡ ಮಾತನಾಡಲು ಬರುವುದಿಲ್ಲ. ಏಕೆಂದರೆ ಆಕೆ ಓದಿದ ಶಾಲೆ ಅಟಾಮಿಕ್ ಎನರ್ಜಿ ಸ್ಕೂಲಿನಲ್ಲಿ. ಶಾಲೆಯಲ್ಲಿ ಕನ್ನಡ ಇಲ್ಲದ ಕಾರಣ ಕನ್ನಡ ಬರೆಯಲು ಗೊತ್ತಿಲ್ಲ, ಶಾಲೆಯಲ್ಲಿ ಮಾತಾಡಲು ಸಹ ಇಲ್ಲದಿರುವುದರಿಂದ ಕನ್ನಡ ಆಕೆಗೆ ಮಾತಾಡಲು ತುಂಬ ಕಷ್ಟ. ಮನೆಯಲ್ಲಿ ಕನ್ನಡ, ಶಾಲಾ ಕಾಲೇಜ್ನಲ್ಲಿ ಇಂಗ್ಲಿಷ್, ಇವೆರಡು ಮಿಶ್ರಣವಾಗಿ ಇಂಗ್ಲಿಷ್ ಸ್ಟೈಲಿನ ಕನ್ನಡ ಮಾತನಾಡುತ್ತಾರೆ. ನಿವೇದಿತಾ ಈಗ ಮೈಸೂರಿನ ಮಹಾಜನ್ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಾರೆ. ಆಕೆಯ ವಯಸ್ಸು 18. ಬಿಗ್ಬಾಸ್ ಇತಿಹಾಸದಲ್ಲಿ ಅತೀ ಕಡಿಮೆ ವಯಸ್ಸಿನ ಸ್ಪರ್ಧಿಯಾಗಿದ್ದಾರೆ.ತಂದೆ ರಮೇಶ್ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ಗೃಹಿಣಿ. ಒಬ್ಬ ಕಿರಿಯ ಸಹೋದರ ಇದ್ದಾನೆ.

ಡಬ್ ಸ್ಮ್ಯಾಶ್ ಮಾಡುವುದರಲ್ಲಿ ನಿವೇದಿತಾ ಗೌಡ ಎತ್ತಿದ ಕೈ. ನಿಜ ಹೇಳಬೇಕು ಅಂದ್ರೆ, ಡಬ್ ಸ್ಮ್ಯಾಶ್ ಜಗತ್ತಿನಲ್ಲಿ ನಿವೇದಿತಾ ಸೂಪರ್ ಸ್ಟಾರ್. ಕನ್ನಡದ ಸೂಪರ್ ಹಿಟ್ ಡೈಲಾಗ್ ಗಳನ್ನು ತಮ್ಮದೇ ಶೈಲಿಯಲ್ಲಿ ನಿವೇದಿತಾ ಹೇಳಿದ್ದಾರೆ. ಡಬ್ ಸ್ಮ್ಯಾಶ್ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿರುವ ಈಕೆ ಈಗ ಅದರಿಂದಲೇ ‘ಬಿಗ್ ಬಾಸ್’ ಎಂಬ ದೊಡ್ಡ ಕಾರ್ಯಕ್ರಮಕ್ಕೆ ಬಂದು, ಟಾಪ್ 5ರಲ್ಲಿ ತಮ್ಮ ಸ್ಥಾನ ಗಳಿಸುವ ಮೂಲಕ ಮೋಡಿ ಮಾಡಿದ್ದಾರೆ.

ಜಯರಾಂ ಕಾರ್ತಿಕ್:-

ಜಯರಾಂ ಕಾರ್ತಿಕ್ ಒಬ್ಬ ನಟನಾಗಿದ್ದು, ಕನ್ನಡ ಕಿರುತೆರೆ ಹಾಗೂ ಚಿತ್ರರಂಗಗಳಲ್ಲಿ ಪ್ರಸಿದ್ಧಿಪಡೆದಿದ್ದಾರೆ. ಇವರು ಕಲರ್ಸ್ ವಾಹಿನಿಯಲ್ಲಿ 2012-15ರಲ್ಲಿ ಪ್ರಸಾರಗೊಂಡ ಧಾರಾವಾಹಿಯಾದ ಅಶ್ವಿನಿ ನಕ್ಷತ್ರದಲ್ಲಿನ ಜೆ. ಕೃಷ್ಣ ಎಂಬ “ಸೂಪರ್‍ಸ್ಟಾರ್” ಪಾತ್ರದ ಮೂಲಕ ಪ್ರೇಕ್ಷಕರಿಗೆ ಪರಿಚಿತರಾದರು. ಇದೇ ಸಮಯದಲ್ಲಿ ಇವರು ಹಲವು ಚಲನಚಿತ್ರಗಳಲ್ಲಿ ಸಹನಟರಾಗಿ ಕೂಡ ಕಾಣಿಸಿಕೊಂಡರು.2014 ರಲ್ಲಿ ತೆರೆಕಂಡ  ಜಸ್ಟ್ ಲವ್ ಚಿತ್ರದ ಮೂಲಕ ನಾಯಕ ನಟರಾದರು. ನಟನೆಯ ಜೊತೆಜೊತೆಗೆ ಇವರು ಇಂಜಿನಿಯರ್ ಆಗಿಯೂ ಕೆಲಸ ಮಾಡಿದ್ದಾರೆ.

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 5ರ ಸಂಚಿಕೆಯಲ್ಲಿ ಸ್ಪರ್ದಿಸಿದ್ದ ಇವರು, ಈಗ ಟಾಪ್ 5 ತಲುಪುವ ಮೂಲಕ ಬಿಗ್ ಬಾಸ್ ಪಟ್ಟ ಗೆಲ್ಲುವಲ್ಲಿ ಮುನ್ನುಗ್ಗುತ್ತಿದ್ದಾರೆ.

ಚಂದನ್ ಶೆಟ್ಟಿ:-

ಚಂದನ್ ಶೆಟ್ಟಿ, ಇದು 2012ರಿಂದಲೇ ಕನ್ನಡ ಸಿನಿಮಾಗಳಲ್ಲಿ ಕೇಳುತ್ತಿದ್ದ, ಕಾಣುತ್ತಿದ್ದ ಹೆಸರು. ಹಾಡುಗಳನ್ನು ಬರೆಯುವ, ಹಾಡುವ ಮತ್ತು ಸಂಗೀತ ಸಂಯೋಜಿಸುವ ಚಂದನ್ ಶೆಟ್ಟಿ ಸಾಕಷ್ಟು ಸಿನಿಮಾಗಳಿಗೆ ಕೆಲಸ ಮಾಡಿದ್ದರೂ ಒಂದು ಐಡೆಂಟಿಟಿ ಎಂದು ಕೊಟ್ಟಿದ್ದು ‘ಧಮ್ ಪವರ್ರೇ…’ ಪುನೀತ್ ರಾಜಕುಮಾರ್ ಅಭಿನಯದ ‘ಪವರ್’ ಚಿತ್ರದ ಈ ಶೀರ್ಷಿಕೆ ಗೀತೆ ಬರೆದು, ಹಾಡಿದ ಚಂದನ್ ಒಮ್ಮೆಲೇ ಲೈಮ್‌ಲೈಟ್‌ಗೆ ಬಂದರು.
ಹಾಸನ ಚಂದನ್ ಹುಟ್ಟೂರಾದರೂ ಬೆಳೆದಿದ್ದು ಸಕಲೇಶಪುರದಲ್ಲಿ. ಅಲ್ಲಿ ಹೈಸ್ಕೂಲ್ ಮುಗಿಸಿ ಪುತ್ತೂರಲ್ಲಿ ಪಿಯು ಓದಿ, ಮೈಸೂರಿಗೆ ಬಂದು ಬಿಬಿಎಂ ಮುಗಿಸಿದರು. ಉದ್ಯೋಗದ ಬೆನ್ನು ಹತ್ತಿ ಕಾಲ್‌ಸೆಂಟರ್‌ನಲ್ಲಿ ಒಂದು ವರ್ಷ ಕೆಲಸವನ್ನೂ ಮಾಡಿದರು.

ಸಂಗೀತದ ಕಡೆಗೆ ಸೆಳೆಯುತ್ತಿದ್ದ ಮನಸು ಕಾಲ್‌ಸೆಂಟರ್ ಬಿಡಿಸಿತು. ಬೆಂಗಳೂರಲ್ಲಿ ಯಾವುದಾದರೂ ನೌಕರಿ ಹಿಡಿದರೆ ಸಂಗೀತವನ್ನೂ ಜೊತೆಯಲ್ಲೇ ತೂಗಿಸಿಕೊಂಡು ಹೋಗಬಹುದು ಎಂದುಕೊಂಡು ಬೆಂಗಳೂರಿಗೆ ಬಂದರು.ಕಂಡ ಕನಸು ಕೈಗೂಡಿದಂತೆ ಅರ್ಜುನ್ ಜನ್ಯ ಅವರ ಶಿಷ್ಯತ್ವವೂ ಸಿಕ್ಕಿತು. ಅವರ ಜೊತೆ ಚಂದನ್ ಈವರೆಗೆ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಸಹಾಯಕರಾಗಿ ಕೆಲಸ ಮಾಡಿದ್ದಾರೆ. ‘ಅಲೆಮಾರಿ’ ಚಿತ್ರದಲ್ಲಿ ಹಾಡುವ ಮೂಲಕ ಚಂದನ್ ಹಾಡಿನ ಬಂಡಿಯೂ ಆರಂಭವಾಯಿತು.ಹೀಗೆ ತಮ್ಮ ವಿಶಿಷ್ಟ ಗಾಯನದ ಮೂಲಕ ಹೆಸರು ಮಾಡಿರುವ ಇವರು ಬಿಗ್ ಬಾಸ್’ನಲ್ಲಿ ಸ್ಪರ್ದಿಸಿ ಟಾಪ್ 5ರ ಹಂತಕ್ಕೆ ತಲುಪಿ, ಇವರು ಕೂಡ ಬಿಗ್ ಬಾಸ್ ಸಂಚಿಕೆ 5ರ ಗೆಲ್ಲುವ ಕುದುರೆ ಎಂದು ಹೇಳಲಾಗುತ್ತಿದೆ.

ಶ್ರುತಿ ಪ್ರಕಾಶ್ :-

ಗಾಯಕಿ ಹಾಗೂ ನಟಿ ಆಗಿರುವ ಶ್ರುತಿ ಪ್ರಕಾಶ್, ಬೆಳಗಾವಿಯಲ್ಲಿ ಹುಟ್ಟಿದ, ಮುಂಬೈನಲ್ಲಿ ನೆಲೆ ಕಂಡುಕೊಂಡಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಮಿಂಚುವ ಆಸೆ ಶ್ರುತಿ ಪ್ರಕಾಶ್ ರವರಿಗಿದೆ. ಹೀಗಾಗಿ ಅವರಿಗೆ ‘ಬಿಗ್ ಬಾಸ್’ ಒಂದು ಒಳ್ಳೆಯ ವೇದಿಕೆಯಾಗಿದ್ದು, ಸಮರ್ಥವಾಗಿ ಉಪಯೋಗಿಸಿಕೊಂಡಿದ್ದಾರೆ ಕೂಡ.ಜಯರಾಂ ಕಾರ್ತಿಕ್ ಜೊತೆ ತುಂಬಾ ಸ್ನೇಹದಿಂದ ಇವರ ಮೇಲೆ, ಜಯರಾಂರವರನ್ನು ಪ್ರೀತಿಸುತ್ತಿದ್ದಾರೆಯೇ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.ಇವರೂ ಕೂಡ ‘ಬಿಗ್ ಬಾಸ್ ಕನ್ನಡ-5’ ಕಾರ್ಯಕ್ರಮದ ಟಪ್ 5ರ ಸ್ಪರ್ದಿಯಾಗಿದ್ದು ಬಿಗ್ ಬಾಸ್ ಪಟ್ಟ ಇವರಿಗೆ ಒಲಿಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

‘ಸೇಲ್ಸ್ ಮ್ಯಾನ್’ ದಿವಾಕರ್ “:-

ಸೊಂಟ ನೋವು, ತಲೆನೋವು… ದೇಹದ ಯಾವುದೇ ನೋವಿರಲಿ… ನೆಗಡಿ, ಶೀತ, ಕೆಮ್ಮು.. ನಿಮಗೆ ಏನೇ ಆದರೂ… ಇವರ ಹತ್ತಿರ ಇದೆ ಔಷಧಿ. ಇವರೇ ಆಯುರ್ವೇದ ಪ್ರಾಡೆಕ್ಟ್ ಸೇಲ್ಸ್ ಮ್ಯಾನ್ ದಿವಾಕರ್. ನರಸೀಪುರದಲ್ಲಿ ಹುಟ್ಟಿ ಮಡಿಕೇರಿಯಲ್ಲಿ ಬೆಳೆದಿರುವ ದಿವಾಕರ್ ಹೊಟ್ಟೆ ಪಾಡಿಗಾಗಿ ಮಾಡದ ಕೆಲಸ ಇಲ್ಲ. ಎಮ್ಮೆ ಮೇಯಿಸುವುದರಿಂದ ಹಿಡಿದು ಹೋಟೆಲ್ ನಲ್ಲಿ ಕೆಲಸ, ಕೂಲಿ ಕೆಲಸ, ಗಾರೆ ಕೆಲಸ ಕೂಡ ಮಾಡಿರುವ ದಿವಾಕರ್ ಹೊಟ್ಟೆ ಹಸಿವಾದಾಗ ಭಿಕ್ಷೆ ಕೂಡ ಬೇಡಿದ್ದಾರಂತೆ.

ಇಷ್ಟೊಂದು ಕಷ್ಟಗಳಲ್ಲಿಯೇ ಬೆಳೆದು ಬಂದಿರುವ ಕಾಮಾನ್ ಮ್ಯಾನ್ ದಿವಾಕರ್ ಬಿಗ್ ಬಾಸ್ 5ರ ಸಂಚಿಕೆಯಲ್ಲಿ ಭಾಗವಹಿಸಿ, ಘಟಾನುಘಟಿ ಸೇಲೆಬ್ರೆಟಿಗಳ ಜೊತೆ ಸ್ಪರ್ದಿಸಿ ತಮ್ಮ ಪರಿಶ್ರಮದಿಂದ ಟಾಪ್ 5ರ ಹಂತ ತಲುಪಿದ್ದಾರೆ.ಬಿಗ್ ಬಾಸ್ ಪಟ್ಟ ಒಲಿಸಿಕೊಳ್ಳುವಲ್ಲಿ ಇವರು ಸೇಲೆಬ್ರೆಟಿಗಳಿಗಿಂತ ಮುಂದೆ ಇದ್ದು,ಗೆಲ್ಲುವ ನೆಚ್ಚಿನ ಸ್ಪರ್ದಿಯಾಗಿದ್ದಾರೆ.

ಜನರ ಅಭಿಪ್ರಾಯದ ಪ್ರಕಾರ ದಿವಾಕರ್’ರವರಿಗೆ ಹೆಚ್ಚಿಗೆ ವೋಟ್ ಮಾಡಿ ಗೆಲ್ಲಿಸಿ ಎಂದು ಸೋಶಿಯಲ್ ಮಿಡಿಯಾದಲ್ಲಿ ಅಭಿಯಾನ ಶುರುವಾಗಿದೆ.ನಮ್ಮ ಪ್ರಕಾರ ತುಂಬಾ ಕಷ್ಟದಿಂದಲೇ ಬಂದಿರುವ ಕಾಮನ್ ಮ್ಯಾನ್ ದಿವಾಕರ್ ಗೆದ್ದರೆ, ಅದು ಕಾಮನ್ ಮ್ಯಾನ್ ಸಿಕ್ಕ ಗೆಲುವಾಗುತ್ತದೆ.

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…

  • ದೇವರು, ದೇವರು-ಧರ್ಮ

    ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ

    ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
    ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…

  • ಸುದ್ದಿ

    ಅಧಿಕಾರಿಗಳಿಗೆ ತಲೆನೋವು ತಂದ ಯಡಿಯೂರಪ್ಪನ ಆದೇಶ, ಇಷ್ಟಕ್ಕೂ ಆ ಆದೇಶವಾದರೂ ಏನು? ತಿಳಿಯಿರಿ,.!

    ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್‌ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….

  • ಸಿನಿಮಾ, ಸುದ್ದಿ

    ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

    ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…