ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.

ಇದೇ ತಿಂಗಳು ಅಂದರೆ ಜನವರಿ 31ರ ಬುಧವಾರದಂದು ಖಂಡಗ್ರಾಸ ಚಂದ್ರಗ್ರಹಣ ಇದ್ದು, ಅಶ್ಲೇಷ ನಕ್ಷತ್ರದಲ್ಲಿ ಚಂದ್ರನಿಗೆ ಪೂರ್ಣ ರಾಹು ಗ್ರಹಣವು ಗ್ರಸ್ತೋದಯವಾಗಿ ಗೋಚರವಾಗುತ್ತದೆ. ಅಂದು ಸಂಜೆ 5.17ಕ್ಕೆ ಗ್ರಹಣದ ಸ್ಪರ್ಶ ಕಾಲ ಆಗಲಿದ್ದು, ರಾತ್ರಿ 7.19ಕ್ಕೆ ಗ್ರಹಣ ಮಧ್ಯಕಾಲವಾಗಲಿದ್ದು, ರಾತ್ರಿ 8.41ಕ್ಕೆ ಗ್ರಹಣ ಮೋಕ್ಷ ಆಗಲಿದೆ.

* ಗ್ರಹಣದ ಆರಂಭ ಹಾಗೂ ಬಿಟ್ಟ ನಂತರ ಉಟ್ಟ ಬಟ್ಟೆಯಲ್ಲಿ ಸ್ನಾನ ಮಾಡಬೇಕು
* ಗ್ರಹಣ ದೋಷ ಇರುವವರು ಚಂದ್ರ ಬಿಂಬ ಹಾಗೂ ಅಕ್ಕಿಯನ್ನು ದಾನ ಮಾಡಬೇಕು
ಮೇಷ ರಾಶಿಯವರಿಗೆ ಹಲವು ಬಗೆಯಲ್ಲಿ ಸಮಸ್ಯೆಗಳು ಕಾಣುತ್ತಿವೆ. ನೀವೇ ಹುಡುಕಿಕೊಂಡು ಹೋಗಿ, ಸಮಸ್ಯೆಗೆ ಸಿಲುಕುವ ಸಂಭವವೂ ಇದೆ. ಹೊಸ ಸಾಹಸಗಳಿಗೆ ಕೈ ಹಾಕಲೇ ಬೇಡಿ.

ಎಲ್ಲವೂ ಸಮಸ್ಯೆ ಎಂಬುದನ್ನೇ ಸೂಚಿಸುತ್ತಿದೆ ಆದ್ದರಿಂದ ಈ ಲೇಖನದಲ್ಲಿ ತಿಳಿಸಿರುವಂತೆ ಪರಿಹಾರವನ್ನು ಕಡ್ಡಾಯವಾಗಿ ಅನುಸರಿಸಿ. ಅತಿ ಮುಖ್ಯವಾದ ಕೆಲಸಗಳಿಗೆ ಮಾತ್ರ ಪ್ರಾಮುಖ್ಯತೆ ಕೊಡಿರಿ. ದಿಢೀರ್ ಪ್ರಯಾಣ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವುದು.
ಈ ಗ್ರಹಣದಿಂದ ವೃಷಭ ರಾಶಿಯವರಿಗೆ ಕೆಲ ಶುಭ ಫಲಗಳನ್ನು ಹೇಳಬಹುದಾಗಿದೆ. ಅದರಲ್ಲೂ ಹಣಕಾಸಿನ ಅನುಕೂಲಗಳು ಗೋಚರಿಸುತ್ತಿವೆ. ಅಚ್ಚರಿಯ ಧನಾಗಮಗಳಿಗೆ ಸಿದ್ಧವಾಗಿರಿ. ಅನಿರೀಕ್ಷೆತ ಧನಪ್ರಾಪ್ತಿ.

ಅದು ಕೂಡ ನಿಮ್ಮ ಎಂದಿನ ಆದಾಯ ಮೂಲವಲ್ಲ. ಇದು ಹೊಸದಾದ ಆದಾಯ ಮೂಲದಿಂದ ಸಿಗುವ ಧನಲಾಭ.
ಈ ರಾಶಿಯವರಿಗೆ ಚಂದ್ರಗ್ರಹಣದ ಫಲಿತಾಂಶ ದಿಂದ ಒಳ್ಳೆಯದು ಮತ್ತು ಕೆಟ್ಟದ್ದು ಎರಡು ಸಹ ಲಭಿಸುತ್ತವೆ. ತುಂಬ ಸಾಮಾನ್ಯವಾಗಿ ಕಂಡುಬರುವುದು ಆರ್ಥಿಕ ನಷ್ಟ. ಯಾರಿಗಾದರೂ ಸಾಲ ಕೊಡಲಿಕ್ಕೆ ಹೋಗಬೇಡಿ.

ರಿಸ್ಕ್ ಇರುವಂಥ ಹೂಡಿಕೆಯಂತೂ ಮಾಡಲೇಬೇಡಿ. ಒಟ್ಟಾರೆ ಹಣಕಾಸಿನ ವ್ಯವಹಾರದಲ್ಲಿ ಬಹಳ ಎಚ್ಚರವಾಗಿರಬೇಕು.
ಎಲ್ಲದಕ್ಕೂ ಹಿರಿಯರ ಮಾರ್ಗದರ್ಶನ ಪಡೆಯುವುದರಿಂದ ಬಲಬರಲಿದೆ.ಏನಾಗುತ್ತಿದೆ ಅಂತಲೇ ಗೊತ್ತಾಗದಂಥ ಸನ್ನಿವೇಶ ನಿಮ್ಮದು.

ಏಕೆ ತೊಂದರೆ ಆಗುತ್ತಿದೆ, ಇಂಥ ಸನ್ನಿವೇಶದಲ್ಲಿ ಸಿಕ್ಕಿಬಿದ್ದಿದ್ದು ಹೇಗೆ ಎಂದು ಗೊತ್ತಾಗುವಷ್ಟರಲ್ಲಿ ತಲೆ ಹಾರಿ ಹೋಗಿರುತ್ತದೆ.
ಈ ದಿನ ವೈಯಕ್ತಿಕ ಸಮಸ್ಯೆಗಳ ನಿರ್ವಹಣೆಗೆ ಅಧಿಕ ಪ್ರಯತ್ನ ಬೇಡ ತಾನಾಗಿಯೇ ಪರಿಹಾರಗೊಳ್ಳಲಿದೆ. ಹಣಕಾಸಿನ ವಿಚಾರವಾಗಿ ಎಷ್ಟು ಹುಷಾರಾಗಿರುತ್ತೀರೋ ಅಷ್ಟು ಒಳ್ಳೆಯದು.

ದಿಢೀರ್ ನಷ್ಟ ತಂದೊಡ್ಡುವ ಗ್ರಹಣ ಇದು. ತುರ್ತು ಯೋಜನೆಗೆ ಕೈ ಹಾಕಲು ಹೋಗಬೇಡಿ. ಹಣ ಕಾಸಿನ ವಿಷಯಕ್ಕೆ ಸಂಬಂಧಿಸಿದ್ದು ಅನ್ನೋವಾಗ ಒಂದಕ್ಕೆ ಎರಡು ಸಲ ಪರಿಶೀಲಿಸಿ, ಸಹಿ ಮಾಡಿ. ಇನ್ನೊಬ್ಬರನ್ನು ಕುರುಡಾಗಿ ನಂಬಬೇಡಿ.
ಹಣ ತರುವ ಅವಕಾಶಗಳು ಬರುವಾಗ ನೀವಾಗಿಯೇ ಅದನ್ನು ನಿರಾಕರಿಸಬೇಡಿ. ಮುಖ್ಯವಾಗಿ ನಿಮ್ಮ ಪ್ರತಿಭೆ ಯಾವುದರಲ್ಲಿದೆ ಆ ವಿಚಾರವಾಗಿಯೇ ಕೆಲ ಅವಕಾಶಗಳು ಹುಡುಕಿಕೊಂಡು ಬಂದು ಬಾಗಿಲು ತಟ್ಟುತ್ತವೆ.

ಈ ಗ್ರಹಣದಿಂದ ನಿಮಗೆ ಶುಭ ಫಲಗಳು ಇವೆ. ಅದರ ಸದುಪಯೋಗ ಮಾಡಿಕೊಳ್ಳಬೇಕಷ್ಟೇ.
ಚಂದ್ರ ಗ್ರಹಣದ ಫಲಿತಾಂಶ ಶುಭವಾಗಿದೆ. ಕುಟುಂಬದಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಲಿದೆ. ಕುಟುಂಬದಲ್ಲಿನ ಹಿರಿಯರ ಸಹಕಾರ ಮತ್ತು ಸ್ನೇಹಿತರಿಂದ ದೈಹಿಕ ಬಲ, ಆರ್ಥಿಕ ಬಲ ಹೆಚ್ಚಲಿದೆ.

ಸಹಾಯ ಅನ್ನೋದರ ಜತೆಗೆ ನಿಮಗೆ ಬೇಕಾದ ಸಹಕಾರ ದೊರೆಯುತ್ತದೆ.
ವೃಶ್ಚಿಕ ರಾಶಿಯವರು ತಮ್ಮ ವರ್ಚಸ್ಸು ಹಾಗೂ ಸಮಾಜದಲ್ಲಿನ ಗೌರವದ ಬಗ್ಗೆ ಎಚ್ಚರ ವಹಿಸಬೇಕು. ಏಕೆಂದರೆ ಈ ಗ್ರಹಣವು ನಷ್ಟ ಮತ್ತು ಅವಮಾನವನ್ನು ಸೂಚಿಸುತ್ತಿದೆ. ದುಷ್ಟ ಆಲೋಚನೆ ಇರುವ ಜನರಿಂದ ದೂರ ಇರಿ.ನಿಮ್ಮ ಹೆಸರು ಹಾಳು ಮಾಡಬಹುದಾದ ಚಟುವಟಿಕೆಯಿಂದ ದೂರ ಇರಿ.

ಈ ಗ್ರಹಣವು ಅತ್ಯಂತ ಕೆಡಕು ತರುವುದು ನಿಮ್ಮ ರಾಶಿಗೆ ಎಚ್ಚರ ಎಚ್ಚರ!. ಆದ್ದರಿಂದ ಈ ತಿಂಗಳಿಡೀ ದೂರ ಪ್ರಯಾಣ ಮಾಡಲೇಬೇಡಿ.

ಮನೆಯಲ್ಲಿ ಕೂಡ ವಿದ್ಯುತ್ ಉಪಕರಣ, ಗ್ಯಾಸ್ ಸ್ಟೌ ಇತ್ಯಾದಿಗಳ ಬಗ್ಗೆ ಎಚ್ಚರವಿರಲಿ. ಯಾವುದೇ ಅಪಾಯಕ್ಕೆ ನೀವಾಗಿಯೇ ಕೈ ಹಾಕದಿರುವುದು ಉತ್ತಮ. ತಾಳ್ಮೆಯ ವರ್ತನೆಗೆ ನಿಧಾನ ಶುಭ ವೆನಿಸಲಿದೆ.
ನಿಮ್ಮ ರಾಶಿಯಿಂದ ಏಳನೇ ಮನೆಯಲ್ಲಿ ಗ್ರಹಣ ಸಂಭವಿಸುತ್ತಿದೆ. ಅಂದರೆ ಅದು ಕಳತ್ರ ಸ್ಥಾನ. ಆದ್ದರಿಂದ ಬಾಳ ಸಂಗಾತಿಯೊಂದಿಗೆ ಯಾವುದೇ ವಿಚಾರದಲ್ಲಿ ಜಗಳ ಮಾಡಿಕೊಳ್ಳುವುದಕ್ಕೆ ಹೋಗಬೇಡಿ. ಅವರನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುವುದಕ್ಕೆ ಪ್ರಯತ್ನಿಸಿ.ಆ ಮೂಲಕ ಯಾವುದೇ ಬಿಕ್ಕಟ್ಟು ಎದುರಾಗದಂತೆ ಎಚ್ಚರ ವಹಿಸಿ.

ನಿಮ್ಮ ರಾಶಿಗೆ ಸಂತೋಷದ ಫಲಿತಾಂಶ ಕೊಡುತ್ತದೆ ಚಂದ್ರ ಗ್ರಹಣ. ಹೊಸ ಉದ್ಯೋಗಿಗಳಿಗೆ ಔದ್ಯೋಗಿಕ ರಂಗದಲ್ಲಿ ಅನುಕೂಲ, ಪ್ರಗತಿ ಇದೆ. ನಿಮ್ಮ ವಯಕ್ತಿಕ ಸಂಬಂಧಗಳು ವೃದ್ಧಿಯಾಗುತ್ತವೆ. ಎಲ್ಲದರಲ್ಲೂ ಗೌರವ-ಮನ್ನಣೆಗಳು ಹೆಚ್ಚಾಗುತ್ತವೆ.

ಸಾಮಾಜಿಕ ಬದುಕಿನಲ್ಲಿ ಮಿಂಚುತ್ತೀರಿ. ಒಟ್ಟಿನಲ್ಲಿ ಈ ಗ್ರಹಣದಿಂದ ನಿಮಗೆ ಶುಭ ಫಲಗಳೇ ಜಾಸ್ತಿ.
ಮೀನ ರಾಶಿಯವರಿಗೆ ಈ ಬಾರಿಯ ಗ್ರಹಣ ಅಂಥ ಶುಭವಲ್ಲ. ಇದರಿಂದ ಆಗುವ ಮುಖ್ಯ ಸಮಸ್ಯೆ ಅಂದರೆ, ಮಾನಸಿಕ ಒತ್ತಡ.

ಅದರಲ್ಲೂ ನಾನಾ ಬಗೆಯ ಸಮಸ್ಯೆ ಹಾಗೂ ಸವಾಲುಗಳು ಎದುರಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…