ಜ್ಯೋತಿಷ್ಯ

150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣದಿಂದ ಯಾವ ರಾಶಿಗೆ ಏನು ಫಲ..?ತಿಳಿಯಲು ಈ ಲೇಖನ ಓದಿ..

5820

ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.

ಖಂಡಗ್ರಾಸ ಚಂದ್ರಗ್ರಹಣ ಜನವರಿ 31, 2018 ರಂದು | ಯಾವ ರಾಶಿಗೆ ಏನು ಫಲ:-

ಇದೇ ತಿಂಗಳು ಅಂದರೆ ಜನವರಿ 31ರ ಬುಧವಾರದಂದು ಖಂಡಗ್ರಾಸ ಚಂದ್ರಗ್ರಹಣ ಇದ್ದು, ಅಶ್ಲೇಷ ನಕ್ಷತ್ರದಲ್ಲಿ ಚಂದ್ರನಿಗೆ ಪೂರ್ಣ ರಾಹು ಗ್ರಹಣವು ಗ್ರಸ್ತೋದಯವಾಗಿ ಗೋಚರವಾಗುತ್ತದೆ. ಅಂದು ಸಂಜೆ 5.17ಕ್ಕೆ ಗ್ರಹಣದ ಸ್ಪರ್ಶ ಕಾಲ ಆಗಲಿದ್ದು, ರಾತ್ರಿ 7.19ಕ್ಕೆ ಗ್ರಹಣ ಮಧ್ಯಕಾಲವಾಗಲಿದ್ದು, ರಾತ್ರಿ 8.41ಕ್ಕೆ ಗ್ರಹಣ ಮೋಕ್ಷ ಆಗಲಿದೆ.

ಗ್ರಹಣ ಕಾಲದ ವಿಶೇಷ ಸೂಚನೆಗಳು:-

* ಗ್ರಹಣದ ಆರಂಭ ಹಾಗೂ ಬಿಟ್ಟ ನಂತರ ಉಟ್ಟ ಬಟ್ಟೆಯಲ್ಲಿ ಸ್ನಾನ ಮಾಡಬೇಕು

* ಗ್ರಹಣ ದೋಷ ಇರುವವರು ಚಂದ್ರ ಬಿಂಬ ಹಾಗೂ ಅಕ್ಕಿಯನ್ನು ದಾನ ಮಾಡಬೇಕು

ಮೇಷ:

ಮೇಷ ರಾಶಿಯವರಿಗೆ ಹಲವು ಬಗೆಯಲ್ಲಿ ಸಮಸ್ಯೆಗಳು ಕಾಣುತ್ತಿವೆ. ನೀವೇ ಹುಡುಕಿಕೊಂಡು ಹೋಗಿ, ಸಮಸ್ಯೆಗೆ ಸಿಲುಕುವ ಸಂಭವವೂ ಇದೆ. ಹೊಸ ಸಾಹಸಗಳಿಗೆ ಕೈ ಹಾಕಲೇ ಬೇಡಿ.

ಎಲ್ಲವೂ ಸಮಸ್ಯೆ ಎಂಬುದನ್ನೇ ಸೂಚಿಸುತ್ತಿದೆ ಆದ್ದರಿಂದ ಈ ಲೇಖನದಲ್ಲಿ ತಿಳಿಸಿರುವಂತೆ ಪರಿಹಾರವನ್ನು ಕಡ್ಡಾಯವಾಗಿ ಅನುಸರಿಸಿ.  ಅತಿ ಮುಖ್ಯವಾದ ಕೆಲಸಗಳಿಗೆ ಮಾತ್ರ ಪ್ರಾಮುಖ್ಯತೆ ಕೊಡಿರಿ. ದಿಢೀರ್‌ ಪ್ರಯಾಣ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವುದು.

ವೃಷಭ:-

ಈ ಗ್ರಹಣದಿಂದ ವೃಷಭ ರಾಶಿಯವರಿಗೆ ಕೆಲ ಶುಭ ಫಲಗಳನ್ನು ಹೇಳಬಹುದಾಗಿದೆ. ಅದರಲ್ಲೂ ಹಣಕಾಸಿನ ಅನುಕೂಲಗಳು ಗೋಚರಿಸುತ್ತಿವೆ. ಅಚ್ಚರಿಯ ಧನಾಗಮಗಳಿಗೆ ಸಿದ್ಧವಾಗಿರಿ. ಅನಿರೀಕ್ಷೆತ ಧನಪ್ರಾಪ್ತಿ.

ಅದು ಕೂಡ ನಿಮ್ಮ ಎಂದಿನ ಆದಾಯ ಮೂಲವಲ್ಲ. ಇದು ಹೊಸದಾದ ಆದಾಯ ಮೂಲದಿಂದ ಸಿಗುವ ಧನಲಾಭ.

ಮಿಥುನ:

ಈ ರಾಶಿಯವರಿಗೆ ಚಂದ್ರಗ್ರಹಣದ ಫಲಿತಾಂಶ ದಿಂದ ಒಳ್ಳೆಯದು ಮತ್ತು ಕೆಟ್ಟದ್ದು ಎರಡು ಸಹ ಲಭಿಸುತ್ತವೆ. ತುಂಬ ಸಾಮಾನ್ಯವಾಗಿ ಕಂಡುಬರುವುದು ಆರ್ಥಿಕ ನಷ್ಟ. ಯಾರಿಗಾದರೂ ಸಾಲ ಕೊಡಲಿಕ್ಕೆ ಹೋಗಬೇಡಿ.

ರಿಸ್ಕ್ ಇರುವಂಥ ಹೂಡಿಕೆಯಂತೂ ಮಾಡಲೇಬೇಡಿ. ಒಟ್ಟಾರೆ ಹಣಕಾಸಿನ ವ್ಯವಹಾರದಲ್ಲಿ ಬಹಳ ಎಚ್ಚರವಾಗಿರಬೇಕು.

ಕರ್ಕಾಟಕ :-

ಎಲ್ಲದಕ್ಕೂ ಹಿರಿಯರ ಮಾರ್ಗದರ್ಶನ ಪಡೆಯುವುದರಿಂದ ಬಲಬರಲಿದೆ.ಏನಾಗುತ್ತಿದೆ ಅಂತಲೇ ಗೊತ್ತಾಗದಂಥ ಸನ್ನಿವೇಶ ನಿಮ್ಮದು.

ಏಕೆ ತೊಂದರೆ ಆಗುತ್ತಿದೆ, ಇಂಥ ಸನ್ನಿವೇಶದಲ್ಲಿ ಸಿಕ್ಕಿಬಿದ್ದಿದ್ದು ಹೇಗೆ ಎಂದು ಗೊತ್ತಾಗುವಷ್ಟರಲ್ಲಿ ತಲೆ ಹಾರಿ ಹೋಗಿರುತ್ತದೆ.

 ಸಿಂಹ:

ಈ ದಿನ ವೈಯಕ್ತಿಕ ಸಮಸ್ಯೆಗಳ ನಿರ್ವಹಣೆಗೆ ಅಧಿಕ ಪ್ರಯತ್ನ ಬೇಡ ತಾನಾಗಿಯೇ ಪರಿಹಾರಗೊಳ್ಳಲಿದೆ. ಹಣಕಾಸಿನ ವಿಚಾರವಾಗಿ ಎಷ್ಟು ಹುಷಾರಾಗಿರುತ್ತೀರೋ ಅಷ್ಟು ಒಳ್ಳೆಯದು.

ದಿಢೀರ್ ನಷ್ಟ ತಂದೊಡ್ಡುವ ಗ್ರಹಣ ಇದು. ತುರ್ತು ಯೋಜನೆಗೆ ಕೈ ಹಾಕಲು ಹೋಗಬೇಡಿ. ಹಣ ಕಾಸಿನ ವಿಷಯಕ್ಕೆ ಸಂಬಂಧಿಸಿದ್ದು ಅನ್ನೋವಾಗ ಒಂದಕ್ಕೆ ಎರಡು ಸಲ ಪರಿಶೀಲಿಸಿ, ಸಹಿ ಮಾಡಿ. ಇನ್ನೊಬ್ಬರನ್ನು ಕುರುಡಾಗಿ ನಂಬಬೇಡಿ.

ಕನ್ಯಾ :-

ಹಣ ತರುವ ಅವಕಾಶಗಳು ಬರುವಾಗ ನೀವಾಗಿಯೇ ಅದನ್ನು ನಿರಾಕರಿಸಬೇಡಿ. ಮುಖ್ಯವಾಗಿ ನಿಮ್ಮ ಪ್ರತಿಭೆ ಯಾವುದರಲ್ಲಿದೆ ಆ ವಿಚಾರವಾಗಿಯೇ ಕೆಲ ಅವಕಾಶಗಳು ಹುಡುಕಿಕೊಂಡು ಬಂದು ಬಾಗಿಲು ತಟ್ಟುತ್ತವೆ.

ಈ ಗ್ರಹಣದಿಂದ ನಿಮಗೆ ಶುಭ ಫಲಗಳು ಇವೆ. ಅದರ ಸದುಪಯೋಗ ಮಾಡಿಕೊಳ್ಳಬೇಕಷ್ಟೇ.

ತುಲಾ:

ಚಂದ್ರ ಗ್ರಹಣದ ಫಲಿತಾಂಶ ಶುಭವಾಗಿದೆ. ಕುಟುಂಬದಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಲಿದೆ. ಕುಟುಂಬದಲ್ಲಿನ ಹಿರಿಯರ ಸಹಕಾರ ಮತ್ತು ಸ್ನೇಹಿತರಿಂದ ದೈಹಿಕ ಬಲ, ಆರ್ಥಿಕ ಬಲ ಹೆಚ್ಚಲಿದೆ.

ಸಹಾಯ ಅನ್ನೋದರ ಜತೆಗೆ ನಿಮಗೆ ಬೇಕಾದ ಸಹಕಾರ ದೊರೆಯುತ್ತದೆ.

ವೃಶ್ಚಿಕ :-

ವೃಶ್ಚಿಕ ರಾಶಿಯವರು ತಮ್ಮ ವರ್ಚಸ್ಸು ಹಾಗೂ ಸಮಾಜದಲ್ಲಿನ ಗೌರವದ ಬಗ್ಗೆ ಎಚ್ಚರ ವಹಿಸಬೇಕು. ಏಕೆಂದರೆ ಈ ಗ್ರಹಣವು ನಷ್ಟ ಮತ್ತು ಅವಮಾನವನ್ನು ಸೂಚಿಸುತ್ತಿದೆ. ದುಷ್ಟ ಆಲೋಚನೆ ಇರುವ ಜನರಿಂದ ದೂರ ಇರಿ.ನಿಮ್ಮ ಹೆಸರು ಹಾಳು ಮಾಡಬಹುದಾದ ಚಟುವಟಿಕೆಯಿಂದ ದೂರ ಇರಿ.

ಧನಸ್ಸು:

ಈ ಗ್ರಹಣವು ಅತ್ಯಂತ ಕೆಡಕು ತರುವುದು ನಿಮ್ಮ ರಾಶಿಗೆ ಎಚ್ಚರ ಎಚ್ಚರ!. ಆದ್ದರಿಂದ ಈ ತಿಂಗಳಿಡೀ ದೂರ ಪ್ರಯಾಣ ಮಾಡಲೇಬೇಡಿ.

ಮನೆಯಲ್ಲಿ ಕೂಡ ವಿದ್ಯುತ್ ಉಪಕರಣ, ಗ್ಯಾಸ್ ಸ್ಟೌ ಇತ್ಯಾದಿಗಳ ಬಗ್ಗೆ ಎಚ್ಚರವಿರಲಿ. ಯಾವುದೇ ಅಪಾಯಕ್ಕೆ ನೀವಾಗಿಯೇ ಕೈ ಹಾಕದಿರುವುದು ಉತ್ತಮ. ತಾಳ್ಮೆಯ ವರ್ತನೆಗೆ ನಿಧಾನ ಶುಭ ವೆನಿಸಲಿದೆ.

ಮಕರ :-

ನಿಮ್ಮ ರಾಶಿಯಿಂದ ಏಳನೇ ಮನೆಯಲ್ಲಿ ಗ್ರಹಣ ಸಂಭವಿಸುತ್ತಿದೆ. ಅಂದರೆ ಅದು ಕಳತ್ರ ಸ್ಥಾನ. ಆದ್ದರಿಂದ ಬಾಳ ಸಂಗಾತಿಯೊಂದಿಗೆ ಯಾವುದೇ ವಿಚಾರದಲ್ಲಿ ಜಗಳ ಮಾಡಿಕೊಳ್ಳುವುದಕ್ಕೆ ಹೋಗಬೇಡಿ. ಅವರನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುವುದಕ್ಕೆ ಪ್ರಯತ್ನಿಸಿ.ಆ ಮೂಲಕ ಯಾವುದೇ ಬಿಕ್ಕಟ್ಟು ಎದುರಾಗದಂತೆ ಎಚ್ಚರ ವಹಿಸಿ.

ಕುಂಭ:-

ನಿಮ್ಮ ರಾಶಿಗೆ ಸಂತೋಷದ ಫಲಿತಾಂಶ ಕೊಡುತ್ತದೆ ಚಂದ್ರ ಗ್ರಹಣ. ಹೊಸ ಉದ್ಯೋಗಿಗಳಿಗೆ ಔದ್ಯೋಗಿಕ ರಂಗದಲ್ಲಿ ಅನುಕೂಲ, ಪ್ರಗತಿ ಇದೆ. ನಿಮ್ಮ ವಯಕ್ತಿಕ ಸಂಬಂಧಗಳು ವೃದ್ಧಿಯಾಗುತ್ತವೆ. ಎಲ್ಲದರಲ್ಲೂ ಗೌರವ-ಮನ್ನಣೆಗಳು ಹೆಚ್ಚಾಗುತ್ತವೆ.

ಸಾಮಾಜಿಕ ಬದುಕಿನಲ್ಲಿ ಮಿಂಚುತ್ತೀರಿ. ಒಟ್ಟಿನಲ್ಲಿ ಈ ಗ್ರಹಣದಿಂದ ನಿಮಗೆ ಶುಭ ಫಲಗಳೇ ಜಾಸ್ತಿ.

ಮೀನ:-

ಮೀನ ರಾಶಿಯವರಿಗೆ ಈ ಬಾರಿಯ ಗ್ರಹಣ ಅಂಥ ಶುಭವಲ್ಲ. ಇದರಿಂದ ಆಗುವ ಮುಖ್ಯ ಸಮಸ್ಯೆ ಅಂದರೆ, ಮಾನಸಿಕ ಒತ್ತಡ.

ಅದರಲ್ಲೂ ನಾನಾ ಬಗೆಯ ಸಮಸ್ಯೆ ಹಾಗೂ ಸವಾಲುಗಳು ಎದುರಾಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಸಂಕಷ್ಟದಲ್ಲಿದ್ದಗಲೇ ಕೈ ಬಿಟ್ಟ ಸಿ ಎಂ ಧೋಸ್ತಿ….!

    ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…

  • ಸುದ್ದಿ

    ನೀವೆಂದಾದರೂ ಸಮುದ್ರದ ತೀರದಲ್ಲಿ ಈ ತರಹದ ಮೊಟ್ಟೆಗಳನ್ನು ಕಂಡಿದ್ದೀರಾ..? ಏನಿದು ಗೊತ್ತೇ..?

    ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್‌ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….

  • inspirational

    ದೀರ್ಘಾಯುಷ್ಯಕ್ಕಾಗಿ ಉತ್ತಮವಾಗಿ ಉಸಿರಾಡಿ

    ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

    ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…