News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಹಿಮ್ಮಡಿಗಳ ಬಿರುಕಿನ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

3513

ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ನಿಮ್ಮ ನೆಚ್ಚಿನ ಪಾದರಕ್ಷೆ ಯನ್ನು ತೊಡಲು ಹಿಂದೇಟು ಹಾಕುತ್ತಿದ್ದೀರಾ? ಒಡೆದ ಹಿಮ್ಮಡಿಗಳೇ ಇದಕ್ಕೆ ಕಾರಣವೇ? ಇದು ಕಾಣಿಸಬಾರದೆಂದು ಎಷ್ಟೇ ಪ್ರಯತ್ನ ಪಟ್ಟರೂ ಯಾವುದೋ ಸಂದ ರ್ಭದಲ್ಲಿ ಕಾಣಿಸಿಕೊಂಡು ಮುಜುಗರ ಅನುಭವಿಸಿದ್ದೀರಾ?

ಹಿಮ್ಮಡಿಗಳ ಬಿರುಕಿನ ಕಾರಣ ಎದುರಾಗುವ ನೋವಿನಿಂದ ಕೆಲವು ಪಾದ ರಕ್ಷೆಗಳನ್ನು ತೊಡಲೂ ಸಾಧ್ಯವಾಗುತ್ತಿಲ್ಲವೇ? ಬಿರುಕು ಮುಚ್ಚಿಕೊಳ್ಳಲು ಕಾಲುಚೀಲ ಧರಿಸುತ್ತಿದ್ದೀರಾ? ಈ ಬಿರುಕು ಗಳನ್ನು ತುಂಬುವ ವಿಧಾನಗಳೆಲ್ಲವೂ ಕೈ ಕೊಟ್ಟಿವೆಯೇ? ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಪಾದಗಳು ಇಡಿಯ ಶರೀರದ ಭಾರವನ್ನು ಹೊರಬೇಕಾದುದರಿಂದ ಇಲ್ಲಿಯ ಚರ್ಮ ಅತ್ಯಂತ ದಪ್ಪನಾಗಿರುತ್ತದೆ.

ಅದರಲ್ಲಿಯೂ ಅಂಚುಗಳಲ್ಲಿ ಹೆಚ್ಚು ದಪ್ಪನಾಗಿರುತ್ತದೆ. ಈ ದಪ್ಪನಾದ ಪಡೆ ಜೀವಕೋಶಗಳು ಸತ್ತರೂ ಸುಲಭವಾಗಿ ನಿವಾರಣೆಯಾಗದೇ ಅಂಟಿಕೊಂಡೇ ಇರುತ್ತವೆ.

ಕ್ರಮೇಣ  ಇವು ಒಣಗಿ ಸೆಳೆತ ಹೆಚ್ಚಾಗುವ ಕಾರಣ ಚಿಕ್ಕ ಬಿರುಕು ಉಂಟಾಗುತ್ತದೆ. ಒಣಗುವ ಪ್ರಮಾಣ ಹೆಚ್ಚಾದಂತೆ ಬಿರುಕು ಆಳವಾಗುತ್ತಾ ಹೋಗುತ್ತದೆ. ಆದ್ದರಿಂದ ಈ ಭಾಗವನ್ನು ಆಗಾಗ ಉಜ್ಜಿಕೊಂಡು ಈ ಸತ್ತ ಜೀವಕೋಶಗಳನ್ನು ನಿವಾರಿಸುತ್ತಾ ಇರಬೇಕು. ಒಣಚರ್ಮ, ದೇಹದ ಭಾರ ವನ್ನು ಸಮರ್ಪಕವಾಗಿ ಹರಡದ ವಿನ್ಯಾಸದ ಪಾದ ರಕ್ಷೆಗಳು, ಶಿಲೀಂಧ್ರದ ಸೋಂಕು, ಸ್ಥೂಲ ಕಾಯ, ಸ್ವಚ್ಛತೆಯಲ್ಲಿ ಕೊರತೆ ಮೊದಲಾದ ಕಾರಣ ಗಳಿಂದ ಈ ಬಿರುಕುಗಳು ಇನ್ನಷ್ಟು ಆಳಕ್ಕೆ ಇಳಿದು ಜವಾದ ಚರ್ಮವನ್ನು ಹರಿದು ರಕ್ತಬರಿಸಬಹುದು.

ಸಾಮಾನ್ಯವಾಗಿ ಬಿರುಕುಗಳು ಕಾಣಿಸಿಕೊಂಡ ಬಳಿಕವೂ ಇದರಲ್ಲಿ ತಕ್ಷಣಕ್ಕೆ ಯಾವುದೇ ನೋವು ಇರದ ಕಾರಣ ನಾವೆಲ್ಲರೂ ಇದನ್ನು ಅಲಕ್ಷಿಸಿಬಿಡುತ್ತೇವೆ.

ಅಯ್ಯೋ ನಾಳೆ ಸ್ನಾನ ಮಾಡಿಕೊಂಡಾಗ ಉಜ್ಜಿಕೊಂಡರಾಯಿತು ಎಂಬ ಅಸಡ್ಡೆಯಿಂದಲೇ ಹೆಚ್ಚಿನವರಿಗೆ ಈ ತೊಂದರೆ ಉಲ್ಬಣಾವಸ್ಥೆಗೆ ಅಂದರೆ ಸೋರಿಯಾಸಿಸ್ (psoriasis) ಎಂಬ ಸ್ಥಿತಿಗೆ ತಲುಪಲೂ ಕಾರಣವಾಗಬಹುದು.

ಆದ್ದರಿಂದ ಈ ಬಿರುಕುಗಳನ್ನು ಮುಚ್ಚುವತ್ತ ಎಷ್ಟು ಬೇಗನೇ ಮನಸ್ಸು ಮಾಡುತ್ತೀರೋ ಅಷ್ಟೇ ಉತ್ತಮ.

ಬನ್ನಿ, ಈ ನಿಟ್ಟಿನಲ್ಲಿ ಅತ್ಯಂತ ಸಮರ್ಥವಾದಮನೆಮದ್ದು ತಯಾರಿಸುವುದು ಹೇಗೆ ಎಂಬುದನ್ನು ನೋಡೋಣ:-

ಅಗತ್ಯವಿರುವ ಸಾಮಾಗ್ರಿಗಳು:-

* ಓಟ್ಸ್ ಅಥವಾ ಓಟ್ ಮೀಲ್ – ಎರಡು ದೊಡ್ಡ ಚಮಚ

* ಲಿಂಬೆ ರಸ – ಒಂದು ದೊಡ್ಡ ಚಮಚ

* ಉಪ್ಪು- ಎರಡು ಚಿಕ್ಕ ಚಮಚ

ಈ ಮೂರೂ ಪರಿಕರಗಳು ಸತ್ತ ಜೀವಕೋಶಗಳನ್ನು ಸಡಿಲಗೊಳಿಸಿ ನಿವಾರಿಸುವಲ್ಲಿ ಸಮರ್ಥವಾಗಿವೆ. ಲಿಂಬೆರಸ ಚರ್ಮದ ಜೀವಕೋಶಗಳನ್ನು ತೇವಗೊಳಿಸಿ ಪ್ರತಿ ಜೀವ ಕೋಶವನ್ನು ಬೇರೆ ಬೇರೆ ಯಾಗಿಸಲು ನೆರವಾಗುತ್ತದೆ ಹಾಗೂ ಬಿರುಕುಗಳಲ್ಲಿ ಆಶ್ರಯ ಪಡೆದಿದ್ದ ಕ್ರಿಮಿ, ಧೂಳು, ಕೀಟಾಣುಗಳನ್ನು ನಿವಾರಿಸಲು ನೆರವಾಗುತ್ತದೆ.

ಉಪ್ಪು ಮತ್ತು ಓಟ್ಸ್ ಸಡಿಲವಾದ ಈ ಜೀವಕೋಶ ಗಳನ್ನು ತಮ್ಮೊಂದಿಗೆ ಅಂಟಿಸಿ ಕೊಂಡು ಹೊರ ಹೋಗಲು ನೆರವಾಗುತ್ತವೆ. ಇದರಿಂದ ಬಿರುಕಿನ ಅಕ್ಕಪಕ್ಕದಲ್ಲಿದ್ದ ದಪ್ಪನೆಯ ಚರ್ಮದ ಭಾಗ ನಿಧಾನವಾಗಿ ನಿವಾರಣೆಯಾಗುತ್ತದೆ ಹಾಗೂ ಬಿರುಕಿನ ಆಳ ದಲ್ಲಿ ಹೊಸ ಚರ್ಮ ಬೆಳೆಯಲು ಸಾಧ್ಯವಾಗುತ್ತದೆ. ಕೆಲವೇ ದಿನಗಳಲ್ಲಿ ಈ ಬಿರುಕುಗಳು ಕಾಣದಂತೆ ಮಾಯವಾಗುತ್ತವೆ.

ತಯಾರಿಕಾ ವಿಧಾನ:-

* ಒಂದು ಚಿಕ್ಕ ಬೋಗುಣಿಯಲ್ಲಿ ಎಲ್ಲಾ ಸಾಮಾಗ್ರಿಗಳನ್ನು ಚೆನ್ನಾಗಿ ಮಿಶ್ರಣ ಮಾಡಿ.

* ಒಂದು ಅಗಲವಾದ ಬಕೆಟ್ ಅಥವಾ ಪಾತ್ರೆಯಲ್ಲಿ ಕೊಂಚವೇ ಬಿಸಿ ನೀರಿನಲ್ಲಿ ಕೊಂಚ ಉಪ್ಪು ಹಾಕಿ (ನಿಮ್ಮ ಪಾದಗಳು ಸಹಿಸುವಷ್ಟು) ಹಾಕಿ ಕೊಂಚ ಕಾಲ ಈ ನೀರಿನಲ್ಲಿ ಎರಡೂ ಪಾದಗಳನ್ನು ಮುಳುಗಿಸಿಡಿ.

* ಬಳಿಕ ಪಾದಗಳನ್ನು ನೀರಿನಿಂದ ಹೊರ ತೆಗೆದು ಟವೆಲ್‌ನಿಂದ ಒರೆಸಿಕೊಳ್ಳಿ.

* ಕಾಲುಗಳ ಕೆಳಗೆ ದಿಂಬೊಂದನ್ನು ಇಟ್ಟು ಪಾದಗಳಿಗೆ ಈ ಲೇಪನವನ್ನು ದಪ್ಪನಾಗಿ ಹಚ್ಚಿ. ಬಿರುಕುಗಳಿರುವಲ್ಲಿ ಕೆಲ ನಿಮಿಷಗಳ ಕಾಲ ಮಸಾಜ್ ಮಾಡಿ.

* ಈ ಲೇಪನವನ್ನು ಸುಮಾರು ಹದಿನೈದು ನಿಮಿಷಗಳ ಕಾಲ ಹಾಗೇ ಬಿಡಿ.

* ಬಳಿಕ ಉಗುರು ಬೆಚ್ಚನೆಯ ನೀರಿನಿಂದ ತೊಳೆದು ಕೊಳ್ಳಿ.

* ನಂತರವೂ ಪಾದಗಳನ್ನು ಸುಮಾರು ಹತ್ತು ನಿಮಿಷಗಳು ಬಿಸಿ ನೀರಿನಲ್ಲಿ ಮುಳುಗಿಸಿಡಿ.

* ಬಳಿಕ ಸ್ಕ್ರಬರ್ ಉಪಯೋಗಿಸಿ ಅಂಚಿನ ಭಾಗಗಳನ್ನು ಕೆರೆದು ತೆಗೆಯಿಸಿ. ಸ್ಕ್ರಬರ್ ಇಲ್ಲದಿದ್ದರೆ ಒರಟಾದ ಕಲ್ಲಿಗೆ ಉಜ್ಜಿಕೊಳ್ಳಲೂಬಹುದು.

* ಒಂದು ವಾರದ ಕಾಲ ಸತತವಾಗಿ ಈ ವಿಧಾನ ಅನುಸರಿಸಿದರೆ ಬಿರುಕುಗಳು ಇಲ್ಲವಾಗುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಉಪ್ಪಿ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ..!ತಿಳಿಯಲು ಇದನ್ನು ಓದಿ ..

    ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.

  • ದೇಗುಲ ದರ್ಶನ, ದೇವರು, ದೇವರು-ಧರ್ಮ

    ಪರಮಪೂಜ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ.

    ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…

  • ಸುದ್ದಿ

    ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ…..!

    ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…

  • modi, ಮನೆ

    ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

    ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸುದ್ದಿ

    ಬಿಗ್ಬಾಸ್ ಪ್ರಥಮ್, ಸಚಿವ ಯು.ಟಿ.ಖಾದರ್’ಗೆ ಕೊಟ್ಟ ಟಾಂಗ್ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

    ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.