ಸುದ್ದಿ

ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

239

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ  ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ  ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

2018ನೇ ಸಾಲಿನ  ಬಜೆಟ್’ನ ಪ್ರಮುಖ ಅಂಶಗಳು:-

  • ಕೃಷಿ ಉತ್ಪನ್ನಗಳಿಗೆ ಮೀಸಲು ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ) ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಹೆಚ್ಚಳ ಮಾಡುವುದಾಗಿ ಘೋಷಣೆ.
  • ಕೃಷಿ ಚಟುವಟಿಕೆಗಳಿಗೆ ಸಾಲ ನೀಡುವ ಸಲುವಾಗಿ, ಅನುದಾನದ ಮೊತ್ತವನ್ನು 11 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಳ.
  • ಕೃಷಿ ಮಾರುಕಟ್ಟೆ ಅಭಿವೃದ್ದಿಗಾಗಿ 22 ಸಾವಿರ ಕೋಟಿ ಅನುದಾನ.

  • ಈಗಿರುವ ಉಜ್ವಲ ಯೋಜನೆ ಅಡಿಯಲ್ಲಿ, ದೇಶದ ಸುಮಾರು ಎಂಟು ಕೋಟಿ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ.
  • ನಾಲ್ಕು ಕೋಟಿ ಬಡ ಕುಟುಂಬಗಳಿಗೆ ಸೌಭಾಗ್ಯ ಯೋಜನೆಯಡಿ ವಿದ್ಯುತ್‌ ಸಂಪರ್ಕ.
  • ಪರಿಶಿಷ್ಟ ಜಾತಿ ಕಲ್ಯಾಣಕ್ಕೆ 56,619 ಕೋಟಿ ರೂ.
  • ಪರಿಶಿಷ್ಟ ವರ್ಗದ ಕಲ್ಯಾಣಕ್ಕೆ 39,135 ಕೋಟಿ ರೂ.
  • ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ  3 ಲಕ್ಷ ಕೋಟಿ ಸಾಲ.
  • 70 ಎಪಿಎಂಸಿಗಳನ್ನು ಇ-ನ್ಯಾಮ್‌ ಮೂಲಕ ಸಂಪರ್ಕ
  • ಕೃಷಿ ಬೆಂಬಲ ಬೆಲೆ ನೆರೆ ರೈತರಿಗೆ ಸಿಗಲು ಕ್ರಮ.
  • ಬುಡಕಟ್ಟು ಜನರ ಶಿಕ್ಷಣಕ್ಕಾಗಿ ಏಕಲವ್ಯ ಶಾಲೆಗಳ ಆರಂಭ.
  • ರೈಲುಗಳಲ್ಲಿ  ವೈ-ಫೈ ಮತ್ತು ಸಿಸಿಟಿವಿ ವ್ಯವಸ್ತೆ.
  • ಹೊಸ ಉದ್ಯೋಗಿಗಳ ಇಪಿಎಫ್‌ ಖಾತೆಗಳಿಗೆ ಶೇ 12ರ ವೇತನ ಸರಕಾರದಿಂದ.
  • 9,000 ಕಿ.ಮೀ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ
  • ಶಾಲೆಗಳ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳಿಗೆ ಒಂದು ಲಕ್ಷ ಕೋಟಿ.
  • ಬಡ್ಡಿ ಆದಾಯದ ಮೇಲಿನ ತೆರಿಗೆ ಮಿತಿ ಹೆಚ್ಚಳ.
  • ಸ್ಮಾರ್ಟ್ ಸಿಟಿಗಳಿಗೆ 2.04 ಲಕ್ಷ ಕೋಟಿ ರೂ. ಅನುದಾನ
  • ರಾಷ್ಟ್ರಪತಿಗಳ ವೇತನವನ್ನು ಪ್ರತಿ ತಿಂಗಳಿಗೆ 5 ಲಕ್ಷ ರೂಪಾಯಿ, ಉಪರಾಷ್ಟ್ರಪತಿಗಳ ವೇತನವನ್ನು 4.5 ಲಕ್ಷ ರೂಪಾಯಿ ಮತ್ತು ರಾಜ್ಯಪಾಲರುಗಳ ವೇತನವನ್ನು 3.5 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ.
  • ಬಡವರಿಗೆ ಕಡಿಮೆ ವೆಚ್ಚದಲ್ಲಿ ಮನೆ.
  • 42 ಮೆಗಾ ಫುಡ್ ಪಾರ್ಕ್ಗಳ ಗೋಷಣೆ.

ಏರಿಕೆಯಾಗಲಿರುವ ವಸ್ತುಗಳು :-

ಮೊಬೈಲ್ ಫೋನ್, ಟಿ.ವಿ ಸೆಟ್, ಡಿಜಿಟಲ್ ಕ್ಯಾಮೆರಾಗಳು, ಮೈಕ್ರೋವೇವ್ ಓವೆನ್, ಎಲ್‍ಇಡಿ ಬಲ್ಬ್ ಗಳು ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಏರಿಕೆಯಾಗಲಿದೆ.

ಈ ಸಲದ ಬಜೆಟ್’ನಲ್ಲಿ ಮೊಬೈಲ್ ಫೋನ್ ಮೇಲಿನ ಅಬಕಾರಿ ಸುಂಕವನ್ನು 15% ನಿಂದ 20% ಗೆ ಏರಿಸಲಾಗಿದೆ. ಅಲ್ಲಿಗೆ ಆ್ಯಪಲ್ ಐಫೋನ್‍ಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದ್ದು, ಭಾರತದಲ್ಲೇ ಉತ್ಪಾದಿಸುವ ಮೊಬೈಲ್ ಫೋನ್‍ಗಳ ಬೆಲೆಗೆ ಅಂತರ ಹೆಚ್ಚಲಿದೆ.

ಏರಿಕೆಯಾಗಲಿದೆ ಐಫೋನ್

ತಜ್ಞರ ಪ್ರಕಾರ ಐಫೋನ್ ದರದ ಮೇಲೆ 2ರಿಂದ 3 ಸಾವಿರ ರೂ. ಹೆಚ್ಚಾಗಲಿದೆ. ಉದಾಹರಣೆಗೆ ಐಫೋನ್ ಎಕ್ಸ್ ಮಾಡಲ್‍ನ ಫೋನ್ ಈಗ 89 ಸಾವಿರ ರೂ. ಇದ್ದು, ಕಂಪೆನಿ ತೆರಿಗೆ ಏರಿಕೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಿದ್ರೆ ಫೋನ್ ಬೆಲೆ 92 ಸಾವಿರ ರೂ. ಗೆ ಏರಿಕೆಯಾಗುವ ಸಾಧ್ಯತೆಯಿದೆ.

ಟಿ.ವಿಗಳ ಬೆಲೆ ಏರಿಕೆ :-

ಟಿ.ವಿ  ಬೆಲೆಗಳೂ ಕೂಡ ಏರಿಕೆಯಾಗಲಿದ್ದು, ಸ್ಕ್ರೀನ್ ಗಾತ್ರಕ್ಕೆ ಅನುಗುಣವಾಗಿ ಈಗಿರುವ ಬೆಲೆಗಿಂತ ಹೆಚ್ಚಾಗಲಿದೆ. 10 ಸಾವಿರ ರೂ. ಬೆಲೆಯ 20 ಲೀಟರ್ ಮೈಕ್ರೋವೇವ್ ಓವೆನ್ ಬೆಲೆ ಮೇಲೆ 500 ರೂ. ಹೆಚ್ಚಾಗುವ ಸಾಧ್ಯತೆಯಿದೆ.

ಪೆಟ್ರೋಲ್,ಡೀಸೆಲ್

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮೂಲ ಅಬಕಾರಿ ಸುಂಕವನ್ನು ಲೀಟರ್‌ಗೆ 2 ರು. ಹಾಗೂ ಹೆಚ್ಚುವರಿ ಅಬಕಾರಿ ಸುಂಕವನ್ನು 6 ರುಪಾಯಿ ಇಳಿಸುವುದಾಗಿ ಜೇಟ್ಲಿ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದರು.ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಇಳಿಕೆ ಮಾಡಿದ್ದರೂ. ರಸ್ತೆ ಮತ್ತು ಮೂಲ ಸೌಕರ್ಯ ಹೆಸರಲ್ಲಿ 8 ರೂ. ಹೊಸ ಸೆಸ್ ಹಾಕುವ ಮೂಲಕ ದರವನ್ನು ಯಥಾಸ್ಥಿತಿಯಲ್ಲಿ ಇಡಲಾಗಿದೆ.

ಶಿಕ್ಷಣ ಕ್ಷೇತ್ರಕ್ಕೆ ಏನು ಕೊಡುಗೆ….

ಶಿಕ್ಷಣ ಕೇತ್ರದಲ್ಲಿ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಮೂಲಸೌಕರ್ಯ ಹಾಗೂ ತಂತ್ರಜ್ಞಾನ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.

  • ಹೊಸ 24 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆ
  • 2012ರ ವೇಳೆಗೆ ಶಿಕ್ಷಣದಲ್ಲಿ ಮೂಲಸೌಕರ್ಯ ಹಾಗೂ ವ್ಯವಸ್ಥೆ ಪುನಶ್ಚೇತನ (RISE) ಮರು ಜಾರಿ
  • ಕಪ್ಪು ಹಲಗೆಗಳ ಬದಲು ಡಿಜಿಟಲ್‌ ಬೋರ್ಡ್‌ಗಳ ಬಳಕೆ
  • ಶಿಕ್ಷಕರಿಗೆ ಕೇಂದ್ರ ಸರ್ಕಾರದಿಂದ ತರಬೇತಿ
  • ಬುಡಕಟ್ಟು ಹಾಗೂ ಆದಿವಾಸಿ ಮಕ್ಕಳಿಗಾಗಿ ಶಾಲೆಗಳ ಸಂಖ್ಯೆಯಲ್ಲಿ ಹೆಚ್ಚಳ
  • ಬುಡಕಟ್ಟು ವಿದ್ಯಾರ್ಥಿಗಳಿಗಾಗಿ ನವೋದಯ ಮಾದರಿಯಲ್ಲಿ ಏಕಲವ್ಯ ಶಾಲೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

    ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…

  • ಜ್ಯೋತಿಷ್ಯ

    ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೇಕೆ ಗೊತ್ತಾ?

    ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…