ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

1) ಭಾರತದ ಬುಲೆಟ್ ಟ್ರೈನ್ ಯೋಜನೆಗೆ ಸುಮಾರು 1.10 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ. ಈ ಯೋಜನೆಯ ಒಟ್ಟು ವೆಚ್ಚದಲ್ಲಿ 88 ಸಾವಿರ ಕೋಟಿ(ಶೇ.81)ಹಣವನ್ನು ಜಪಾನ್ ಸಾಲ ರೂಪದಲ್ಲಿ ಭಾರತಕ್ಕೆ ಒದಗಿಸುತ್ತಿದೆ. ಜಪಾನ್ ಸಾಲವನ್ನು 50 ವರ್ಷದ ಒಳಗಡೆ ಮರು ಪಾವತಿ ಮಾಡಬೇಕಾಗಿದ್ದು, ಈ ಸಾಲಕ್ಕೆ ಶೇ.0.1 ರಷ್ಟು ಬಡ್ಡಿಯನ್ನು ವಿಧಿಸಿದೆ.
2) ಹೊಸ ಬುಲೆಟ್ ಟ್ರೈನ್ ಗುಜರಾತ್ನಿಂದ ಮುಂಬೈಗೆ ಸಂಚಾರವನ್ನು ನಡೆಸಲಿದ್ದು, ಒಮ್ಮೆ 750 ಪ್ರಯಾಣಿಕರನ್ನು ಹೊತ್ತು ಸಾಗಲಿದೆ. ಪ್ರತಿ ದಿನ 70 ಬಾರಿ ಅಹಮದಾಬಾದ್ – ಮುಂಬೈ ನಡುವೆ ಈ ರೈಲು ಸಂಚರಿಸಲಿದೆ.
3) ಬುಲೆಟ್ ಟ್ರೈನ್ ಸರಾಸರಿ ಘಂಟೆಗೆ 320 ಕಿ.ಮೀ ವೇಗದಲ್ಲಿ ಸಂಚರಿಸಲಿದ್ದು, ಗರಿಷ್ಟ 350 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದೆ.

4) ಬುಲೆಟ್ ಟ್ರೈನ್ 508 ಕಿ.ಮೀ ಉದ್ದದ ಮಾರ್ಗವನ್ನು ಹೊಂದಿದ್ದು, ಶೇ.92 ರಷ್ಟು ಮೇಲ್ಸೇತುವೆ, ಶೇ.6 ರಷ್ಟು ಸುರಂಗ ಹಾಗೂ ಇನ್ನುಳಿದ ಶೇ.2 ರಷ್ಟು ನೆಲದಲ್ಲಿ ಹಾದು ಹೋಗಲಿದೆ. ಅಂದರೆ ಸುಮಾರು 460 ಕಿ.ಮೀ ಮೇಲ್ಸೇತುವೆ ಮಾರ್ಗದಲ್ಲೂ, 27 ಕಿಮೀ ಸುರಂಗ ಮಾರ್ಗದಲ್ಲೂ, ಉಳಿದ 13 ಕಿ.ಮೀ ನೆಲದಲ್ಲಿ ಸಂಚರಿಸಲಿದೆ.
5) ದೇಶದ ಅತೀ ದೊಡ್ಡ ಸುರಂಗ ಮಾರ್ಗವನ್ನು (21 ಕಿ.ಮೀ) ಹೊಂದಿರಲಿದ್ದು, 7 ಕಿ.ಮೀ ಸಮುದ್ರ ಅಡಿಯ ಸುರಂಗದಲ್ಲಿ ಸಂಚರಿಸುವುದು ವಿಶೇಷ. ಒಟ್ಟು 508 ಕಿ.ಮೀ ಮಾರ್ಗದಲ್ಲಿ 351 ಕಿ.ಮೀ ಗುಜರಾತ್ ರಾಜ್ಯದಲ್ಲಿ ಹಾಗೂ 156 ಕಿ.ಮೀ ಮಹಾರಾಷ್ಟ್ರ ರಾಜ್ಯದಲ್ಲಿ ಬುಲೆಟ್ ರೈಲು ಸಂಚರಿಸಲಿದೆ.
6) ಬುಲೆಟ್ ರೈಲು ಮೊದಲ ಸಂಚಾರವನ್ನು 2022ರ ಆಗಸ್ಟ್ 15 ರಂದು ಆರಂಭಿಸಬೇಕೆಂಬ ಗುರಿಯನ್ನು ರೈಲ್ವೇ ಸಚಿವಾಲಯ ಹಾಕಿಕೊಂಡಿದೆ. ಆರಂಭದಲ್ಲಿ 2023ಕ್ಕೆ ಈ ಯೋಜನೆ ಪೂರ್ಣಗೊಳಿಸಲು ಡೆಡ್ಲೈನ್ ನಿಗದಿಗೊಳಿಸಲಾಗಿತ್ತು. ಆದರೆ 2022ರಲ್ಲಿ ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಆಚರಿಸುವ ಕಾರಣ ಜನರಿಗೆ ಉಡುಗೊರೆ ಎಂಬಂತೆ ಅವಧಿಗೂ ಮುನ್ನವೇ ಈ ಯೋಜನೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.

7) ಜಪಾನ್ ಶಿಕಾನ್ಸೆನ್ ಬುಲೆಟ್ ರೈಲು 1964ರಲ್ಲಿ ಆರಂಭವಾಗಿದ್ದು, ಈವರೆಗೂ ಒಂದೇ ಒಂದು ಅಪಘಾತವಾಗಿಲ್ಲ. ಈ ರೈಲಿನಲ್ಲಿ ಸೆನ್ಸರ್ ಅಳವಡಿಸಲಾಗಿದ್ದು ಹಳಿಯಲ್ಲಿ ಏನಾದರೂ ಇದ್ದರೆ ಅಥವಾ ಹಳಿ ತುಂಡಾಗಿದ್ದರೆ ಅದರ ಮಾಹಿತಿ ತಿಳಿದು ಸ್ವಯಂ ಚಾಲಿತವಾಗಿ ನಿಲ್ಲುವ ವ್ಯವಸ್ಥೆಯನ್ನು ರೈಲು ಹೊಂದಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ. ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…
ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.
ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…