ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

1) ಭಾರತದ ಬುಲೆಟ್ ಟ್ರೈನ್ ಯೋಜನೆಗೆ ಸುಮಾರು 1.10 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ. ಈ ಯೋಜನೆಯ ಒಟ್ಟು ವೆಚ್ಚದಲ್ಲಿ 88 ಸಾವಿರ ಕೋಟಿ(ಶೇ.81)ಹಣವನ್ನು ಜಪಾನ್ ಸಾಲ ರೂಪದಲ್ಲಿ ಭಾರತಕ್ಕೆ ಒದಗಿಸುತ್ತಿದೆ. ಜಪಾನ್ ಸಾಲವನ್ನು 50 ವರ್ಷದ ಒಳಗಡೆ ಮರು ಪಾವತಿ ಮಾಡಬೇಕಾಗಿದ್ದು, ಈ ಸಾಲಕ್ಕೆ ಶೇ.0.1 ರಷ್ಟು ಬಡ್ಡಿಯನ್ನು ವಿಧಿಸಿದೆ.
2) ಹೊಸ ಬುಲೆಟ್ ಟ್ರೈನ್ ಗುಜರಾತ್ನಿಂದ ಮುಂಬೈಗೆ ಸಂಚಾರವನ್ನು ನಡೆಸಲಿದ್ದು, ಒಮ್ಮೆ 750 ಪ್ರಯಾಣಿಕರನ್ನು ಹೊತ್ತು ಸಾಗಲಿದೆ. ಪ್ರತಿ ದಿನ 70 ಬಾರಿ ಅಹಮದಾಬಾದ್ – ಮುಂಬೈ ನಡುವೆ ಈ ರೈಲು ಸಂಚರಿಸಲಿದೆ.
3) ಬುಲೆಟ್ ಟ್ರೈನ್ ಸರಾಸರಿ ಘಂಟೆಗೆ 320 ಕಿ.ಮೀ ವೇಗದಲ್ಲಿ ಸಂಚರಿಸಲಿದ್ದು, ಗರಿಷ್ಟ 350 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದೆ.

4) ಬುಲೆಟ್ ಟ್ರೈನ್ 508 ಕಿ.ಮೀ ಉದ್ದದ ಮಾರ್ಗವನ್ನು ಹೊಂದಿದ್ದು, ಶೇ.92 ರಷ್ಟು ಮೇಲ್ಸೇತುವೆ, ಶೇ.6 ರಷ್ಟು ಸುರಂಗ ಹಾಗೂ ಇನ್ನುಳಿದ ಶೇ.2 ರಷ್ಟು ನೆಲದಲ್ಲಿ ಹಾದು ಹೋಗಲಿದೆ. ಅಂದರೆ ಸುಮಾರು 460 ಕಿ.ಮೀ ಮೇಲ್ಸೇತುವೆ ಮಾರ್ಗದಲ್ಲೂ, 27 ಕಿಮೀ ಸುರಂಗ ಮಾರ್ಗದಲ್ಲೂ, ಉಳಿದ 13 ಕಿ.ಮೀ ನೆಲದಲ್ಲಿ ಸಂಚರಿಸಲಿದೆ.
5) ದೇಶದ ಅತೀ ದೊಡ್ಡ ಸುರಂಗ ಮಾರ್ಗವನ್ನು (21 ಕಿ.ಮೀ) ಹೊಂದಿರಲಿದ್ದು, 7 ಕಿ.ಮೀ ಸಮುದ್ರ ಅಡಿಯ ಸುರಂಗದಲ್ಲಿ ಸಂಚರಿಸುವುದು ವಿಶೇಷ. ಒಟ್ಟು 508 ಕಿ.ಮೀ ಮಾರ್ಗದಲ್ಲಿ 351 ಕಿ.ಮೀ ಗುಜರಾತ್ ರಾಜ್ಯದಲ್ಲಿ ಹಾಗೂ 156 ಕಿ.ಮೀ ಮಹಾರಾಷ್ಟ್ರ ರಾಜ್ಯದಲ್ಲಿ ಬುಲೆಟ್ ರೈಲು ಸಂಚರಿಸಲಿದೆ.
6) ಬುಲೆಟ್ ರೈಲು ಮೊದಲ ಸಂಚಾರವನ್ನು 2022ರ ಆಗಸ್ಟ್ 15 ರಂದು ಆರಂಭಿಸಬೇಕೆಂಬ ಗುರಿಯನ್ನು ರೈಲ್ವೇ ಸಚಿವಾಲಯ ಹಾಕಿಕೊಂಡಿದೆ. ಆರಂಭದಲ್ಲಿ 2023ಕ್ಕೆ ಈ ಯೋಜನೆ ಪೂರ್ಣಗೊಳಿಸಲು ಡೆಡ್ಲೈನ್ ನಿಗದಿಗೊಳಿಸಲಾಗಿತ್ತು. ಆದರೆ 2022ರಲ್ಲಿ ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಆಚರಿಸುವ ಕಾರಣ ಜನರಿಗೆ ಉಡುಗೊರೆ ಎಂಬಂತೆ ಅವಧಿಗೂ ಮುನ್ನವೇ ಈ ಯೋಜನೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.

7) ಜಪಾನ್ ಶಿಕಾನ್ಸೆನ್ ಬುಲೆಟ್ ರೈಲು 1964ರಲ್ಲಿ ಆರಂಭವಾಗಿದ್ದು, ಈವರೆಗೂ ಒಂದೇ ಒಂದು ಅಪಘಾತವಾಗಿಲ್ಲ. ಈ ರೈಲಿನಲ್ಲಿ ಸೆನ್ಸರ್ ಅಳವಡಿಸಲಾಗಿದ್ದು ಹಳಿಯಲ್ಲಿ ಏನಾದರೂ ಇದ್ದರೆ ಅಥವಾ ಹಳಿ ತುಂಡಾಗಿದ್ದರೆ ಅದರ ಮಾಹಿತಿ ತಿಳಿದು ಸ್ವಯಂ ಚಾಲಿತವಾಗಿ ನಿಲ್ಲುವ ವ್ಯವಸ್ಥೆಯನ್ನು ರೈಲು ಹೊಂದಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…
ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…
ದೇಶಾದ್ಯಂತ ಮೊಬೈಲ್ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…