News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

53

ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕರು ರಸ್ತೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾಗ ವೇಗವಾಗಿ ಬಂದ ಅಪರಿಚಿತ ವಾಹನ ಇವರ ಮೇಲೆ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ನಾಲ್ವರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಆರಂಭಿಸಿದ್ದಾರೆ.ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಕಣ್ಣಿನಿಂದಲೇ ಹುಲಿಯನ್ನು ದಿಟ್ಟಿಸಿ ನೋಡಿ ಓಡಿಸಿದ ಮಹಿಳಾ ಅಧಿಕಾರಿ..!

    ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್‌ಗಳ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…

  • ಸುದ್ದಿ

    ತನ್ನ ಗಂಡನಿಗೆ ಬುರ್ಖಾ ಹಾಕಿಸಿ ಉಟಕ್ಕೆ ಕರೆದುಕೊಂಡು ಹೋದ ಯುವತಿ!

    ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…

  • ಮನರಂಜನೆ

    ಕೊನೆಗೂ ಗಾಯಕ ಚಂದನ್ ಶೆಟ್ಟಿಗೆ ತನ್ನ ಮನದ ಮಾತು ತಿಳಿಸಿದ ನಿವೇದಿತಾ ಗೌಡ..!

    ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ‍್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್‍ಗೆ…