ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕರು ರಸ್ತೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾಗ ವೇಗವಾಗಿ ಬಂದ ಅಪರಿಚಿತ ವಾಹನ ಇವರ ಮೇಲೆ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ನಾಲ್ವರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಆರಂಭಿಸಿದ್ದಾರೆ.ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…