ಸಾಧನೆ

ಒಂದು ಸಾಮಾನ್ಯ ಪುಟ್ಟ ಹಳ್ಳಿಯಿಂದ ಬಂದು ಕನಸನ್ನು ಕನಸಾಗಿ ಬಿಡದೆ ಸಾಧನೆ ಮಾಡಿದ ಮಹಿಳೆ!

73

ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ.

ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ ಪೊಲೀಸ್ ಕಾನ್ಸಟೇಬಲ್ ಮಗಳು ಇವರು ಒಂದು ಬುಡಕಟ್ಟು ಸಮುದಾಯಕ್ಕೆ ಸೇರಿದವರು.

ಚಿಕ್ಕ ವಯಸ್ಸಿನಲ್ಲೇ ತಾನು ಆಕಾಶದ ಎತ್ತರಕ್ಕೆ ಹಾರುವ ಕನಸನ್ನು ಬೆನ್ನಿಗೆ ಕಟ್ಟಿಕೊಂಡು ಬೆಳೆದವಳು ಆದ್ರೆ ತನ್ನ ಕನಸನ್ನು ಕನಸಾಗಿಯೇ ಉಳಿಸಿಕೊಳ್ಳದೆ ಅದನ್ನು ನನಸಾಗಿಸಿಕೊಂಡು ಸಾಧನೆಯ ಹಾದಿಯನ್ನು ತುಳಿದಿರುವ ದಿಟ್ಟ ಮಹಿಳೆ ಈ ಅನುಪ್ರಿಯಾ.

ಓಡಿಶಾದ ಬುಡಕಟ್ಟು ಸಮುದಾಯದ ಯುವತಿ ತಾನು ಕಡೆಗೂ ಪೈಲಟ್ ಆಗುವುದನ್ನು ಸಾಧಿಸಿ ತೋರಿಸಿದ್ದಾರೆ. ಸರಿಯಾದ ರಸ್ತೆ ಸಂಪರ್ಕವೂ ಇಲ್ಲದ ನಕ್ಸಲ್ ಬಾಂಧಿತ ಪ್ರದೇಶವಾಗಿದ್ದ ಮಲ್ಕಂಗಿರಿ ಜಿಲ್ಲೆಯವರಾಗಿರುವ ಅನುಪ್ರಿಯಾ ಅವರೀಗ ವಾಣಿಜ್ಯ ವಿಮಾನವೊಂದರ ಪೈಲಟ್ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ಈ ಸಾಧನೆ ಮಾಡಿರುವ ಮೊದಲ ಬುಡಕಟ್ಟು ಮಹಿಳೆಯೆಂದು ಗುರುತಿಸಿಕೊಂಡಿದ್ದಾರೆ.

ಆರು ವರ್ಷಗಳ ಕಾಲ ಬೆಂಗಳೂರು, ಮುಂಬೈ ಮತ್ತು ದೆಹಲಿಯ ವಿವಿಧ ತರಬೇತಿ ಸಂಸ್ಥೆಗಳಲ್ಲಿ ವಾಣಿಜ್ಯ ಪೈಲಟ್ ತರಬೇತಿ ಕೋರ್ಸ್‌ಗೆ ಸೇರಿ ತರಬೇತಿ ಹೊಂದಿದರು.ಇದಾಗಿ ಸುಮಾರು 200 ವೈಮಾನಿಕ ಗಂಟೆಗಳ ತರಬೇತಿ ಬಳಿಕ ವರು ಅಂತಿಮವಾಗಿ ಕಳೆದ ತಿಂಗಳು ವಾಣಿಜ್ಯ ಪೈಲಟ್‌ನ ಪ್ರಮಾಣಪತ್ರವನ್ನು ಪಡೆದರು. ಶೀಘ್ರದಲ್ಲೇ ಇಂಡಿಗೊ ವಿಮಾನಯಾನ ಸಂಸ್ಥೆಯಲ್ಲಿ ಸಹ ಪೈಲಟ್ ಆಗಿ ಸೇರಲು ಆಕೆ ಸಿದ್ದವಾಗಿದ್ದಾರೆ. ಇನ್ನು ಅನುಪ್ರಿಯಾ ತನ್ನ ಪೈಲಟ್ ತರಬೇತಿಗಾಗಿ ಕೇಂದ್ರ ಸರ್ಕಾರದಿಂದ ನೆರವು ಪಡೆಇದ್ದರು.

ಇವರ ಸಾಧನೆಯ ಬಗ್ಗೆ ತಂದೆ ಹೇಳಿದ್ದು ಹೀಗೆ ನಮ್ಮ ಮಗಳು ಚಿಕ್ಕಂದಿನಿಂದಲೂ ಪೈಲಟ್ ಆಗ್ವ ಕನಸನ್ನು ಕಂಡವಳು ಆದರೆ ಇದನ್ನು ಬರಿ ಕನಸಾಗಿ ಬಿಡದೆ ಕಷ್ಟಪಟ್ಟು ಸಾಧನೆ ಅಂದಿದ್ದಾಳೆ ಹಾಗೂ ನಾನು ಸಾಮಾನ್ಯ ಪೊಲೀಸ್ ಪೇದೆ ಆದ್ರೆ ಈ ವಿಚಾರದಲ್ಲಿ ತುಂಬಾನೇ ಖುಷಿ ಇದೆ ಹಾಗೂ ನಮ್ಮ ಊರು ಹಾಗೂ ದೇಶವೇ ಖುಷಿ ಪಡೆಯುವ ವಿಚಾರ ಅನ್ನೋದನ್ನ ತಮ್ಮ ಮನೆಯವರು ಹೇಳಿದ್ದಾರೆ.

ಇದೀಗ ಅಂತರರಾಷ್ಟ್ರೀಯ ವಿಮಾನದ ಪ್ರಾಯೋಗಿಕ ತರಬೇತಿಗಾಗಿ ಅನುಪ್ರಿಯಾ ಸ್ಪೇನ್‌ಗೆ ಹೋಗಲು ಯೋಜಿಸಿದ್ದು ಇದಕ್ಕಾಗಿ ಸುಮಾರು 20 ಲಕ್ಷ ರೂ. ಹಣ ಅಗತ್ಯವಿದೆ.ಆಕೆಯ ಕುಟುಂಬವು ಆಕೆಗಾಗಿ ಎಲ್ಲಾ ಉಳಿತಾಯಗಳನ್ನು ಉಪಯೋಗಿಸಿರುವ ಕಾರಣ , ರಾಜ್ಯದಲ್ಲಿ ಮಹಿಳೆಯರ ಸಬಲೀಕರಣವನ್ನು ಖಾತ್ರಿಪಡಿಸಿಕೊಳ್ಳುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಸಹಾಯ ಹಸ್ತ ನೀಡಬೇಕೆಂದು ಅನುಪ್ರಿಯಾ ಪೋಷಕರು ಮನವಿ ಸಲ್ಲಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ನೀರೊಳಗಿರುವ ಟೈಟಾನಿಕ್ ಹಡಗನ್ನು ಮೇಲೆತ್ತುವ ಪ್ರಯತ್ನವನ್ನು ಯಾರು ಮಾಡುತ್ತಿಲ್ಲ ಏಕೆ? ರೋಚಕ ಸತ್ಯವನ್ನು ತಿಳಿಯಿರಿ.

    ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….

  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…

  • ಉದ್ಯೋಗ

    ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21:

    ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.