ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ.
ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ ಪೊಲೀಸ್ ಕಾನ್ಸಟೇಬಲ್ ಮಗಳು ಇವರು ಒಂದು ಬುಡಕಟ್ಟು ಸಮುದಾಯಕ್ಕೆ ಸೇರಿದವರು.

ಚಿಕ್ಕ ವಯಸ್ಸಿನಲ್ಲೇ ತಾನು ಆಕಾಶದ ಎತ್ತರಕ್ಕೆ ಹಾರುವ ಕನಸನ್ನು ಬೆನ್ನಿಗೆ ಕಟ್ಟಿಕೊಂಡು ಬೆಳೆದವಳು ಆದ್ರೆ ತನ್ನ ಕನಸನ್ನು ಕನಸಾಗಿಯೇ ಉಳಿಸಿಕೊಳ್ಳದೆ ಅದನ್ನು ನನಸಾಗಿಸಿಕೊಂಡು ಸಾಧನೆಯ ಹಾದಿಯನ್ನು ತುಳಿದಿರುವ ದಿಟ್ಟ ಮಹಿಳೆ ಈ ಅನುಪ್ರಿಯಾ.
ಓಡಿಶಾದ ಬುಡಕಟ್ಟು ಸಮುದಾಯದ ಯುವತಿ ತಾನು ಕಡೆಗೂ ಪೈಲಟ್ ಆಗುವುದನ್ನು ಸಾಧಿಸಿ ತೋರಿಸಿದ್ದಾರೆ. ಸರಿಯಾದ ರಸ್ತೆ ಸಂಪರ್ಕವೂ ಇಲ್ಲದ ನಕ್ಸಲ್ ಬಾಂಧಿತ ಪ್ರದೇಶವಾಗಿದ್ದ ಮಲ್ಕಂಗಿರಿ ಜಿಲ್ಲೆಯವರಾಗಿರುವ ಅನುಪ್ರಿಯಾ ಅವರೀಗ ವಾಣಿಜ್ಯ ವಿಮಾನವೊಂದರ ಪೈಲಟ್ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ಈ ಸಾಧನೆ ಮಾಡಿರುವ ಮೊದಲ ಬುಡಕಟ್ಟು ಮಹಿಳೆಯೆಂದು ಗುರುತಿಸಿಕೊಂಡಿದ್ದಾರೆ.

ಆರು ವರ್ಷಗಳ ಕಾಲ ಬೆಂಗಳೂರು, ಮುಂಬೈ ಮತ್ತು ದೆಹಲಿಯ ವಿವಿಧ ತರಬೇತಿ ಸಂಸ್ಥೆಗಳಲ್ಲಿ ವಾಣಿಜ್ಯ ಪೈಲಟ್ ತರಬೇತಿ ಕೋರ್ಸ್ಗೆ ಸೇರಿ ತರಬೇತಿ ಹೊಂದಿದರು.ಇದಾಗಿ ಸುಮಾರು 200 ವೈಮಾನಿಕ ಗಂಟೆಗಳ ತರಬೇತಿ ಬಳಿಕ ವರು ಅಂತಿಮವಾಗಿ ಕಳೆದ ತಿಂಗಳು ವಾಣಿಜ್ಯ ಪೈಲಟ್ನ ಪ್ರಮಾಣಪತ್ರವನ್ನು ಪಡೆದರು. ಶೀಘ್ರದಲ್ಲೇ ಇಂಡಿಗೊ ವಿಮಾನಯಾನ ಸಂಸ್ಥೆಯಲ್ಲಿ ಸಹ ಪೈಲಟ್ ಆಗಿ ಸೇರಲು ಆಕೆ ಸಿದ್ದವಾಗಿದ್ದಾರೆ. ಇನ್ನು ಅನುಪ್ರಿಯಾ ತನ್ನ ಪೈಲಟ್ ತರಬೇತಿಗಾಗಿ ಕೇಂದ್ರ ಸರ್ಕಾರದಿಂದ ನೆರವು ಪಡೆಇದ್ದರು.
ಇವರ ಸಾಧನೆಯ ಬಗ್ಗೆ ತಂದೆ ಹೇಳಿದ್ದು ಹೀಗೆ ನಮ್ಮ ಮಗಳು ಚಿಕ್ಕಂದಿನಿಂದಲೂ ಪೈಲಟ್ ಆಗ್ವ ಕನಸನ್ನು ಕಂಡವಳು ಆದರೆ ಇದನ್ನು ಬರಿ ಕನಸಾಗಿ ಬಿಡದೆ ಕಷ್ಟಪಟ್ಟು ಸಾಧನೆ ಅಂದಿದ್ದಾಳೆ ಹಾಗೂ ನಾನು ಸಾಮಾನ್ಯ ಪೊಲೀಸ್ ಪೇದೆ ಆದ್ರೆ ಈ ವಿಚಾರದಲ್ಲಿ ತುಂಬಾನೇ ಖುಷಿ ಇದೆ ಹಾಗೂ ನಮ್ಮ ಊರು ಹಾಗೂ ದೇಶವೇ ಖುಷಿ ಪಡೆಯುವ ವಿಚಾರ ಅನ್ನೋದನ್ನ ತಮ್ಮ ಮನೆಯವರು ಹೇಳಿದ್ದಾರೆ.

ಇದೀಗ ಅಂತರರಾಷ್ಟ್ರೀಯ ವಿಮಾನದ ಪ್ರಾಯೋಗಿಕ ತರಬೇತಿಗಾಗಿ ಅನುಪ್ರಿಯಾ ಸ್ಪೇನ್ಗೆ ಹೋಗಲು ಯೋಜಿಸಿದ್ದು ಇದಕ್ಕಾಗಿ ಸುಮಾರು 20 ಲಕ್ಷ ರೂ. ಹಣ ಅಗತ್ಯವಿದೆ.ಆಕೆಯ ಕುಟುಂಬವು ಆಕೆಗಾಗಿ ಎಲ್ಲಾ ಉಳಿತಾಯಗಳನ್ನು ಉಪಯೋಗಿಸಿರುವ ಕಾರಣ , ರಾಜ್ಯದಲ್ಲಿ ಮಹಿಳೆಯರ ಸಬಲೀಕರಣವನ್ನು ಖಾತ್ರಿಪಡಿಸಿಕೊಳ್ಳುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಸಹಾಯ ಹಸ್ತ ನೀಡಬೇಕೆಂದು ಅನುಪ್ರಿಯಾ ಪೋಷಕರು ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…