News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮಾರಕ ಕಾಯಿಲೆಯಾದ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿಯನ್ನು ಕಂಡುಹಿಡಿದು ಎಲ್ಲರ ಮೆಚ್ಚುಗೆ ಪಡೆದ ರೈತ…!

143

ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ.

ಎಷ್ಟೋ ಮಂದಿ ಮಾರಣಾಂತಿಕ ಕಾಯಿಲೆಗೆ ಬಲಿಯಾಗುವ ಬದಲು ಕಾಯಿಲೆ ಬಂದಿದೆ ಎಂದು ತಿಳಿದಾಗಲೇ ಕೊರಗಿ ಮೃತಪಡುವಂತಹ ಕಾಯಿಲೆಗಳಲ್ಲಿ ಒಂದು ಎಚ್ಐವಿ ಏಡ್ಸ್. ವಿಜ್ಞಾನಿಗಳೂ ಕೂಡ ಏಡ್ಸ್ನನ್ನು ಸಂಪೂರ್ಣವಾಗಿ ಗುಣಪಡಿಸುವಲ್ಲಿ ಇನ್ನೂ ಸಫಲವಾಗದಿರುವುದು ಕಣ್ಮುಂದೆಯೇ ಇರುವಾಗಲೇ ನಮ್ಮ ರೈತ ಮುಖಂಡ ಮಹೇಶ್ ಕುಮಾರ್ ಅದಕ್ಕೊಂದು ರಾಮಬಾಣವನ್ನು ಕಂಡುಹಿಡಿದಿದ್ದಾರೆ. ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ಹೆಗ್ಗವಾಡಿಪುರದ ಸಾವಯವ ರೈತ ಮತ್ತು ಚಳವಳಿಗಾರ ಹನುಮಫಲದ ಮೂಲಕ ಎಚ್ಐವಿ ಸೋಂಕಿಗೆ ರಾಮಬಾಣ ಆವಿಷ್ಕರಿಸಿದ್ದಾರೆ.

ಈಗಾಗಲೇ ಕ್ಯಾನ್ಸರ್ ರೋಗಕ್ಕೆ ಹನುಮಫಲದ ಮೂಲಕ ಹಲವರನ್ನು ಗುಣಪಡಿಸಿರುವ ಮಹೇಶ್ ಕುಮಾರ್ ಎಚ್ಐವಿ ಸೋಂಕಿಗೂ ಕೂಡ ಹನುಮಫಲದ ಮೂಲಕವೇ ಮದ್ದು ಕಂಡುಹಿಡಿದಿದ್ದು ಈಗಾಗಲೇ ಗೌಪ್ಯವಾಗಿ ನೂರಾರು ಮಂದಿ ಇದರ ಲಾಭ ಪಡೆದಿದ್ದಾರೆ. ಬಿಳಿರಕ್ತ ಕಣಗಳ ಸಂಖ್ಯೆ ಹೆಚ್ಚಿಸಿಕೊಂಡು ಸೋಂಕಿನ ಬಾಧೆಯಿಂದ ಬಿಡುಗಡೆಯಾಗುತ್ತಿದ್ದಾರೆ. 16 ಹನುಮಫಲದ ಎಲೆ ಮತ್ತು ಕೆಲವು ಬೇರುಗಳನ್ನು 4 ಲೀಟರ್ ನೀರಿನಲ್ಲಿ ಕುದಿಸುತ್ತಾ 1 ಲೀಟರ್ ಮಾಡಿಕೊಳ್ಳಬೇಕು ಅದನ್ನು ಬೆಳಗ್ಗೆ ಸಂಜೆ ನಿಯಮಿತವಾಗಿ 50 ml. ಯಂತೆ 80 ದಿನ ಸೇವಿಸುತ್ತಾ ಬಂದರೇ ಕ್ಯಾನ್ಸರ್ ಕೋಶಗಳೇ ಇಲ್ಲದಂತಾಗುತ್ತದೆ‌. ಶೇ.99 ಮಂದಿಗೆ ಗುಣಮುಖವಾಗಿದೆ, ಯಾವುದೇ ಹಣದಾಸೆಯಿಲ್ಲದೇ ಹಿಮಾಲಯದ ಗುರುಗಳ ಮಾತಿನಂತೆ ಈ ಸೇವೆ ಮಾಡುತ್ತಿದ್ದು ಕೊನೇ ಹಂತದ ಕ್ಯಾನ್ಸರ್ ರೋಗಿಗಳೂ ಚೇತರಿಕೆ ಕಂಡಿದ್ದಾರೆ ಎಂಬುದು ರೈತ ಮಹೇಶ್ ಕುಮಾರ್ ಮಾತು.

35 ಸಾವಿರ ಮಂದಿಗೆ ಔಷಧಿ ವಿತರಣೆ! : ಕಳೆದ 8 ವರ್ಷಗಳಿಂದ ಕ್ಯಾನ್ಸರ್ ರೋಗಿಗಳಿಗೆ ದೇಶದ ನಾನಾ ಭಾಗಗಳಲ್ಲಿನ 35 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳಿಗೆ ಹನುಮಫಲದ ಔಷದಿ ನೀಡಿದ್ದು ಕೆಲವು ದಿನಗಳಿಂದೀಚೆಗೆ ನೂರಾರು ಎಚ್ಐವಿ ಪೀಡಿತರಿಗೂ ಕೂಡ ಔಷದಿ ನೀಡುತ್ತಾ ಬಂದಿದ್ದಾರೆ. ಇವರ ಸೇವೆಯು ಸಂಪೂರ್ಣ ಉಚಿತವಾಗಿದ್ದು ಆತ್ಮತೃಪ್ತಿ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣ ಇವರ ಕನಸಾಗಿದೆ.
ದೂರದ ಬಾಂಬೆ, ದೆಹಲಿಯಿಂದಲೂ ಪ್ರತಿನಿತ್ಯ ಒಂದಿಲ್ಲೊಬ್ಬರು ಇಲ್ಲಿಗೆ ಬಂದು ಚಿಕಿತ್ಸೆ ಪಡೆದು ಹೋಗುತ್ತಿದ್ದಾರೆ. ಜೊತೆಗೆ ಇಲ್ಲಿಂದ ಹೋದ ನಂತರ ಮತ್ತೆ ಅವರ ಆರೋಗ್ಯದಲ್ಲಿ ಚೇತರಿಕೆಯೂ ಕೂಡ ಆಗಿರುವ ರಿಪೋರ್ಟ್ ಕಾರ್ಡ್ ಕಳಿಸಿಕೊಟ್ಟು,ಕೆಲವರು ತಮ್ಮ ಆರೋಗ್ಯದಲ್ಲಾದ ಬದಲಾವಣೆಯನ್ನು ಕಂಡುಕೊಂಡಿದ್ದಾರೆ.

ಒಟ್ನಲ್ಲಿ ಡಾಕ್ಟರ್ ಅಂತ ಹೇಳಿಕೊಂಡು ಅದೆಷ್ಟೋ ಮಂದಿ ಜನರ ಬಳಿ ಹಣ ಲಪಟಾಯಿಸುವ ಈ ಕಾಲದಲ್ಲಿ ಯಾವ ಫಲಾಪೇಕ್ಷೇ ಇಲ್ಲದೆ ಕಷ್ಟ ಹೇಳಿಕೊಂಡು ಬರುವ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ಕೊಡುವ ಈ ಅನ್ನದಾತನಿಗೆ ಒಂದು ಸಲಾಂ ಹೇಳಲೇಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…

  • Sports

    ಭಾರತ 6 – ಪಾಕಿಸ್ತಾನ ಸೊನ್ನೆ, 1996ರಲ್ಲಿ ಬೆಂಗಳೂರಲ್ಲೂ ಸೋಲನ್ನಪ್ಪಿತ್ತು ಪಾಕಿಸ್ತಾನ….!

    ಈ ಬಾರಿಯ ವಿಶ್ವಕಪ್‍ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…

  • inspirational

    ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026

    ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…

  • ದೇವರು

    ಈ ದೇವಾಲಯಕ್ಕೆ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತೆ..!ನಿಮಗೆ ಗೊತ್ತಾ..?ತಿಳಿಯಲು ಇದನ್ನುಓದಿ…

    ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.