ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ.

ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ ಬಿಎಸ್ಎನ್ಎಲ್ ಹೊರತುಪಡಿಸಿ ಬೇರೆ ಕಂಪೆನಿಗಳು ಪೈಪೋಟಿಯಲ್ಲಿಲ್ಲ.

ನಷ್ಟವನ್ನು ಸರಿದೂಗಿಸಲು ದರ ಏರಿಕೆಯ ಅನಿವಾರ್ಯತೆಗೆ ಈ ಕಂಪೆನಿಗಳು ಮುಂದಾಗಿವೆ. ವಿವಿಧ ಸೇವೆಗಳನ್ನು ಉಚಿತವಾಗಿ ನೀಡುತ್ತಿದ್ದ ಕಂಪೆನಿಗಳು ಅವುಗಳಿಗೆ ಶುಲ್ಕ ವಿಧಿಸಲು ಮುಂದಾಗಿವೆ ಹಾಗೂ ಇತರೆ ಸೇವಾ ಶುಲ್ಕಗಳ ಮೇಲೆಯೂ ಹೆಚ್ಚುವರಿ ಹೊರೆ ನೀಡಿವೆ.

ಡಿಸೆಂಬರ್ 1ರಿಂದ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಕಂಪೆನಿಗಳ ಸೇವೆಗಳ ದರ ಏರಿಕೆಯಾಗಲಿದೆ. ಪೋಸ್ಟ್ ಪೇಯ್ಡ್ ಮತ್ತು ಪ್ರೀಪೇಯ್ಡ್ ಎರಡೂ ಗ್ರಾಹಕರಿಗೆ ಈ ದರ ಹೆಚ್ಚಳದ ಬಿಸಿ ತಟ್ಟಲಿದೆ. ಸೇವೆಗಳ ಮೇಲೆ ಸ್ವಲ್ಪ ಮಟ್ಟಿನ ಹೆಚ್ಚಳ ಮಾಡುವುದಾಗಿ ಸಂಸ್ಥೆಗಳು ತಿಳಿಸಿವೆ. ಜಿಯೋ ಇತರೆ ಸೇವಾದಾರರ ಗ್ರಾಹಕರಿಗೆ ಮಾಡುವ ಕರೆಗಳ ಮೇಲೆ ನಿಮಿಷಕ್ಕೆ ಆರು ಪೈಸೆಗಳ ದರ ವಿಧಿಸುವ ನಿರ್ಧಾರವನ್ನು ಇತ್ತೀಚೆಗೆ ತೆಗೆದುಕೊಂಡಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್ನ ಸಂಗ್ರೂರ್ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…
ಸುಟ್ಟಗಾಯಗಳೇ ಇಷ್ಟು, ಗಾಯ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…
ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…
ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ…
ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್ಪಿಎಫ್ ನ 130ನೇ ಬೆಟಾಲಿನ್ನ 55 ರಾಷ್ಟ್ರೀಯ ರೈಫಲ್(ಆರ್ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್ಓಜಿ) ಜಂಟಿ…