ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ.
‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ.

ಭಾನುವಾರದ ಸಂಚಿಕೆಯಲ್ಲಿ ದಿವಂಗತ ಅಂಬರೀಶ್ ಅವರಿಗೆ ಬಿಗ್ಬಾಸ್ ಸ್ಪರ್ಧಿಗಳು ಹಾಡುಗಳನ್ನು ಹೇಳುವ ಮೂಲಕ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದರು. ಈ ವೇಳೆ ಸ್ಪರ್ಧಿಗಳು ಅಂಬರೀಶ್ ಬಗ್ಗೆ ತನ್ನ ಅನಿಸಿಕೆಗಳನ್ನು ಹೇಳಿಕೊಂಡಿದ್ದರು.
ಸೋನು ಪಾಟೀಲ್ ಮಾತನಾಡಿ, ಈಗಾಗಲೇ ನಾನು ಬೆಂಗಳೂರಿಗೆ ಬಂದು ತುಂಬಾ ಕಷ್ಟ ಪಟ್ಟಿದ್ದೀನಿ ಅಂತ ನಿಮೆಲ್ಲರಿಗೂ ಗೊತ್ತಿದೆ. ನಾನು ಬೆಂಗಳೂರಿಗೆ ಬಂದು ಅಂಬರೀಶ್ ಅವರ ಮನೆಯಲ್ಲಿ ಹೊಟ್ಟೆ ತುಂಬಾ ಊಟ ಮಾಡಿದ್ದೇನೆ. ನಾನು ನಗರಕ್ಕೆ ಬಂದಾಗ ಹಣ ಮತ್ತು ತಿನ್ನಲೂ ಊಟವೂ ಇರಲಿಲ್ಲ. ಕೆಲಸಕ್ಕಾಗಿ ಅಲೆದಾಡುತ್ತಿದ್ದೆ. ಆಗ ಜೆ.ಪಿ ನಗರದಲ್ಲಿ ಯಾವುದೋ ಕೆಲಸ ಇದೆ ಎಂದು ಹೇಳಿದಾಗ ನಾನು ಅಲ್ಲಿಗೆ ಹೋದೆ.

ನಮ್ಮ ತಾಯಿ ಅಂಬರೀಶ್ ಅವರ ಅಭಿಮಾನಿ. ಆದ್ದರಿಂದ ನಾನು ಒಮ್ಮೆ ಅಂಬರೀಶ್ ಅವರನ್ನು ಭೇಟಿ ಮಾಡಬೇಕು ಎಂದು ಅವರ ಮನೆಗೆ ಹೋಗಿದ್ದೆ. ನಾವು ಉತ್ತರ ಕರ್ನಾಟಕದವರು, ನಮ್ಮ ತಂದೆ ಒಬ್ಬ ರೈತರು, ಈಗ ಅವರಿಗೆ ಹೃದಯ ಕಸಿಮಾಡಿಸಬೇಕು ಎಂದು ಹೇಳಿಕೊಂಡೆ. ನಾನು ಉತ್ತರ ಕರ್ನಾಟಕ ಎಂದಾಕ್ಷಣ, ಅವರು ನೀವು ಕಲಾವಿದರಿಗೆ ಬಹಳ ಗೌರವ ಕೊಡುತ್ತೀರಿ. ನಿಮ್ಮನ್ನು ಗೌರವಿಸಬೇಕಾದುದ್ದು ನಮ್ಮ ಕರ್ತವ್ಯ ಎಂದು ಕೂರಿಸಿಕೊಂಡು ಮಾತನಾಡಿಸಿದರು ಅಂತ ಸೋನು ಹೇಳಿಕೊಂಡಿದ್ದಾರೆ.

ಅವರು ನೀನು ಊಟ ಮಾಡಿ ಬಹಳ ದಿನವಾಗಿದೆ ಅನ್ನಿಸುತ್ತಿದೆ, ಊಟ ಮಾಡು ಎಂದು ಹೇಳಿದರು. ನಿಜ ಹೇಳಬೇಕು ಅಂದರೆ ನನಗೆ ತುಂಬಾ ಹೊಟ್ಟೆ ಹಸಿವಾಗುತ್ತಿತ್ತು. ಕೊನೆಗೆ ಅವರ ಪಕ್ಕದಲ್ಲಿಯೇ ಕೂರಿಸಿಕೊಂಡು ಊಟ ಹಾಕಿದರು. ಅದನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಯಾಕೆಂದರೆ ತುಂಬಾ ಹೊಟ್ಟೆ ಹಸಿವಾದಾಗ ನನಗೆ ಊಟ ಹಾಕಿದ ಮೊದಲ ವ್ಯಕ್ತಿ ಅವರಾಗಿದ್ದಾರೆ.

ಇಂದು ಅವರು ನಮ್ಮ ಮಧ್ಯೆ ಇಲ್ಲ. ಆದರೆ ನಮ್ಮ ಮನಸ್ಸಿನಲ್ಲಿ ಸದಾ ಇರುತ್ತಾರೆ. ಮತ್ತೆ ಈ ಕನ್ನಡನಾಡಿನಲ್ಲಿ ಹುಟ್ಟಿ ಬರಬೇಕು ಎಂದು ಅಂಬಿ ಜೊತೆಗಿನ ಕ್ಷಣವನ್ನು ಹೇಳಿಕೊಂಡು ಸೋನು ಪಾಟೀಲ್ ಕಣ್ಣೀರು ಹಾಕಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ…
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.