ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ ಬಗ್ಗೆ ಯಾರೂ ಕೂಡ ತಿಳಿದುಕೊಂಡಿರಲು ಸಾಧ್ಯವೇ ಇಲ್ಲ.!. ಅವರ ಮನೆ ಬರೋಬ್ಬರಿ 27 ಮಹಡಿಗಳನ್ನ ಹೊಂದಿದ್ದು, ಸುಮಾರು 4 ಲಕ್ಷ ಚದರ ಇದೆ, ಇನ್ನು ಈ ಮನೆಯನ್ನ ನಿರ್ಮಾಣ ಮಾಡಿರುವವರು ಚಿಕಾಗೋದ ವಿನ್ಯಾಸಗಾರರಾಗಿದ್ದಾರೆ.
ತಮಗೆ ಗೊತ್ತಿರುವುದಿಲ್ಲ ಮುಖೇಶ್ ಅಂಬಾನಿ ಅವರ ಮನೆ ಹೇಗೆ ನಿರ್ಮಾಣವಾಗಿದೆ ಎಂದರೆ ಈ ಮನೆ ಯಾವುದೇ ಪ್ರಕೃತಿ ವಿಕೋಪಕ್ಕೆ ತುತ್ತಾಗುವುದಿಲ್ಲ.! ಭೂಕಂಪ ಆದರೂ ಕೂಡ ಈ ಮನೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಇನ್ನು ಈ ಮನೆಯ 27 ಅಂತಸ್ತುಗಳಲ್ಲಿ ಎಲ್ಲಾ ಅಂತಸ್ತು ಕೂಡ ಬೇರೆ ಬೇರೆ ತರನಾಗಿಯೇ ಇದೆ ಮತ್ತು ಕೆಳಗಿನ ಆರು ಅಂತಸ್ತುಗಳನ್ನ ಕೇವಲ ಕಾರುಗಳ ಪಾರ್ಕಿಂಗ್ ಮಾಡಲು ಮಾಡಲಾಗಿದೆ. ಇನ್ನು ಇದರ ಜೊತೆಗೆ ಈ ಮನೆಯ ಒಳಗಡೆ ಜಿಮ್, ಐಸ್ ಕ್ರೀಮ್ ಪಾರ್ಲರ್, ಯೋಗ, ಈಜುಕೊಳ, ಚಿತ್ರಮಂದಿರ, ಸ್ಟುಡಿಯೋ ಹೀಗೆ ಹಲವು ರೀತಿಯ ಸಕಲ ಸೌಕರ್ಯಗಳು ಇರುವ ಮನೆ ಮುಖೇಶ್ ಅಂಬಾನಿಯವರದ್ದು ಆಗಿದೆ.
ಇನ್ನು ಈ ಶ್ರೀಮಂತನ ಮನೆಯಲ್ಲಿ ಬರೋಬ್ಬರಿ 600 ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಷ್ಟು ದೊಡ್ಡದಾದ ಮನೆಯಲ್ಲಿ ಕೇವಲ ಐದು ಜನ ಮಾತ್ರ ವಾಸ ಮಾಡುತ್ತಿದ್ದಾರೆ. ಮುಖೇಶ್ ಅಂಬಾನಿ ಸೇರಿದಂತೆ ಅವರ ಪತ್ನಿ ನೀತಾ ಅಂಬಾನಿ ಮತ್ತು ಮೂರು ಮಕ್ಕಳು ಮಾತ್ರ ಮನೆಯಲ್ಲಿ ನೆಲೆಸಿದ್ದಾರೆ ..ಇನ್ನು ಬೇಸಿಗೆಯ ಸಮಯದಲ್ಲಂತೂ ಮುಂಬೈನಲ್ಲಿ ಜೀವನ ಮಾಡುವುದು ಬಹಳ ಕಷ್ಟಕರವಾಗಿರುತ್ತದೆ. ಆ ಸಮಯದಲ್ಲಿ ಸಿಕ್ಕಾಪಟ್ಟೆ ಸೆಕೆ ಇದ್ದು, ಜನರೆಲ್ಲ ಬೆವರಿ ಬೆವರಿ ಬೇಸತ್ತು ಹೋಗುತ್ತಾರೆ..ಆದರೆ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಒಂದು ಕೋಣೆಯನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಸೆಕೆ ಎಂಬುದು ಆಗುವುದೇ ಇಲ್ಲ .. ಉರಿಯುವ ಬಿಸಿಲಿದ್ದರೂ ಕೂಡ ಆ ಕೋಣೆಗೆ ಹೋಗಿ ಬಿಟ್ಟರೆ ಚಳಿಗಾಲದ ವಾತಾವರಣ ಅನಾವರಣ ಗೊಂಡಿರುತ್ತದೆ.. ಇನ್ನು ಮನೆಯ ಸದಸ್ಯರು ದೇವರಿಗೆ ಪೂಜೆ ಮಾಡಲು ದೊಡ್ಡ ದೇವಸ್ಥಾನವನ್ನೇ ಮನೆಯಲ್ಲಿ ನಿರ್ಮಿಸಲಾಗಿದೆ..ಅಲ್ಲದೇ ಮನೆಯ ಮೇಲೆ ಮೂರೂ ಎಲಿಪ್ಯಾಡ್ ಕೂಡ ಇದೆ..
ಈ ರೀತಿಯಾದ ವಿಶೇಷತೆಗಳು ಪ್ರತಿಯೊಂದು ಮಹಡಿಯಲ್ಲೂ ತುಂಬಿದ್ದು,ಅಲ್ಲಿನ ಸಾರ್ವಜನಿಕರಿಗೆ ಒಂದು ಯಕ್ಷ ಪ್ರಶ್ನೆ ಕಾಡುತ್ತಲೇ ಇದೆ.. ಅದೇನೆಂದರೆ ಇಷ್ಟು ದೊಡ್ಡ ಮನೆಗೆ ಪ್ರತಿ ತಿಂಗಳು ಎಷ್ಟು ಕರೆಂಟ್ ಬಿಲ್ ಬರಬಹುದು ಎಂಬುದು..ಪ್ರತಿ ತಿಂಗಳು ಅಂಬಾನಿಯವರು ವಿದ್ಯುತ್ ಸಂಸ್ಥೆಗೆ ಎಷ್ಟು ಹಣವನ್ನು ಪಾವತಿಸುತ್ತಾರೆ ಎಂದು ತಿಳಿದರೆ ಒಂದು ಕ್ಷಣ ಶಾಕ್ ಆಗುತ್ತೀರಾ..
ಈ ಮನೆಯ ಕರೆಂಟ್ ಬಿಲ್ ಒಂದು ತಿಂಗಳಿಗೆ ಸುಮಾರು 71 ಲಕ್ಷ ರೂಪಾಯಿ ಆಗಿದೆ, ಇಷ್ಟು ಸವಲತ್ತುಗಳನ್ನ ಹೊಂದಿರುವ ಈ ಮನೆ ಪ್ರಪಂಚದಲ್ಲೇ ಅತೀ ದುಬಾರಿಯಾದ ಮನೆ ಆಗಿದೆ. ..ಈ ಶ್ರೀಮಂತ ಒಂದು ತಿಂಗಳು ಪಾವಿತಿಸುವ ಮನೆಯ ಕರೆಂಟ್ ಬಿಲ್ ಏನಾದರೂ ಮಧ್ಯಮವರ್ಗದ ವ್ಯಕ್ತಿಗೆ ಸಿಕ್ಕರೆ ಅವರ ಜೀವನವೇ ಸೆಟ್ಟಲ್ ಆಗಿ ಬಿಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…