News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಸುದ್ದಿ

ಅಂಬಾನಿ ಮನೆಯ ಒಂದು ತಿಂಗಳ ಕರೆಂಟ್ ಬಿಲ್ ಕೇಳಿದರೆ ಶಾಕ್, ನೋಡಿ ಭಾರತದ ಐಷಾರಾಮಿ ಮನೆ.

216

ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ ಬಗ್ಗೆ ಯಾರೂ ಕೂಡ ತಿಳಿದುಕೊಂಡಿರಲು ಸಾಧ್ಯವೇ ಇಲ್ಲ.!. ಅವರ ಮನೆ ಬರೋಬ್ಬರಿ 27 ಮಹಡಿಗಳನ್ನ ಹೊಂದಿದ್ದು, ಸುಮಾರು 4 ಲಕ್ಷ ಚದರ ಇದೆ, ಇನ್ನು ಈ ಮನೆಯನ್ನ ನಿರ್ಮಾಣ ಮಾಡಿರುವವರು ಚಿಕಾಗೋದ ವಿನ್ಯಾಸಗಾರರಾಗಿದ್ದಾರೆ.

ತಮಗೆ ಗೊತ್ತಿರುವುದಿಲ್ಲ ಮುಖೇಶ್ ಅಂಬಾನಿ ಅವರ ಮನೆ ಹೇಗೆ ನಿರ್ಮಾಣವಾಗಿದೆ ಎಂದರೆ ಈ ಮನೆ ಯಾವುದೇ ಪ್ರಕೃತಿ ವಿಕೋಪಕ್ಕೆ ತುತ್ತಾಗುವುದಿಲ್ಲ.! ಭೂಕಂಪ ಆದರೂ ಕೂಡ ಈ ಮನೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಇನ್ನು ಈ ಮನೆಯ 27 ಅಂತಸ್ತುಗಳಲ್ಲಿ ಎಲ್ಲಾ ಅಂತಸ್ತು ಕೂಡ ಬೇರೆ ಬೇರೆ ತರನಾಗಿಯೇ ಇದೆ ಮತ್ತು ಕೆಳಗಿನ ಆರು ಅಂತಸ್ತುಗಳನ್ನ ಕೇವಲ ಕಾರುಗಳ ಪಾರ್ಕಿಂಗ್ ಮಾಡಲು ಮಾಡಲಾಗಿದೆ. ಇನ್ನು ಇದರ ಜೊತೆಗೆ ಈ ಮನೆಯ ಒಳಗಡೆ ಜಿಮ್, ಐಸ್ ಕ್ರೀಮ್ ಪಾರ್ಲರ್, ಯೋಗ, ಈಜುಕೊಳ, ಚಿತ್ರಮಂದಿರ, ಸ್ಟುಡಿಯೋ ಹೀಗೆ ಹಲವು ರೀತಿಯ ಸಕಲ ಸೌಕರ್ಯಗಳು ಇರುವ ಮನೆ ಮುಖೇಶ್ ಅಂಬಾನಿಯವರದ್ದು ಆಗಿದೆ.

ಇನ್ನು ಈ ಶ್ರೀಮಂತನ ಮನೆಯಲ್ಲಿ ಬರೋಬ್ಬರಿ 600 ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಷ್ಟು ದೊಡ್ಡದಾದ ಮನೆಯಲ್ಲಿ ಕೇವಲ ಐದು ಜನ ಮಾತ್ರ ವಾಸ ಮಾಡುತ್ತಿದ್ದಾರೆ. ಮುಖೇಶ್ ಅಂಬಾನಿ ಸೇರಿದಂತೆ ಅವರ ಪತ್ನಿ ನೀತಾ ಅಂಬಾನಿ ಮತ್ತು ಮೂರು ಮಕ್ಕಳು ಮಾತ್ರ ಮನೆಯಲ್ಲಿ ನೆಲೆಸಿದ್ದಾರೆ ..ಇನ್ನು ಬೇಸಿಗೆಯ ಸಮಯದಲ್ಲಂತೂ ಮುಂಬೈನಲ್ಲಿ ಜೀವನ ಮಾಡುವುದು ಬಹಳ ಕಷ್ಟಕರವಾಗಿರುತ್ತದೆ. ಆ ಸಮಯದಲ್ಲಿ ಸಿಕ್ಕಾಪಟ್ಟೆ ಸೆಕೆ ಇದ್ದು, ಜನರೆಲ್ಲ ಬೆವರಿ ಬೆವರಿ ಬೇಸತ್ತು ಹೋಗುತ್ತಾರೆ..ಆದರೆ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಒಂದು ಕೋಣೆಯನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಸೆಕೆ ಎಂಬುದು ಆಗುವುದೇ ಇಲ್ಲ .. ಉರಿಯುವ ಬಿಸಿಲಿದ್ದರೂ ಕೂಡ ಆ ಕೋಣೆಗೆ ಹೋಗಿ ಬಿಟ್ಟರೆ ಚಳಿಗಾಲದ ವಾತಾವರಣ ಅನಾವರಣ ಗೊಂಡಿರುತ್ತದೆ.. ಇನ್ನು ಮನೆಯ ಸದಸ್ಯರು ದೇವರಿಗೆ ಪೂಜೆ ಮಾಡಲು ದೊಡ್ಡ ದೇವಸ್ಥಾನವನ್ನೇ ಮನೆಯಲ್ಲಿ ನಿರ್ಮಿಸಲಾಗಿದೆ..ಅಲ್ಲದೇ ಮನೆಯ ಮೇಲೆ ಮೂರೂ ಎಲಿಪ್ಯಾಡ್ ಕೂಡ ಇದೆ..

ಈ ರೀತಿಯಾದ ವಿಶೇಷತೆಗಳು ಪ್ರತಿಯೊಂದು ಮಹಡಿಯಲ್ಲೂ ತುಂಬಿದ್ದು,ಅಲ್ಲಿನ ಸಾರ್ವಜನಿಕರಿಗೆ ಒಂದು ಯಕ್ಷ ಪ್ರಶ್ನೆ ಕಾಡುತ್ತಲೇ ಇದೆ.. ಅದೇನೆಂದರೆ ಇಷ್ಟು ದೊಡ್ಡ ಮನೆಗೆ ಪ್ರತಿ ತಿಂಗಳು ಎಷ್ಟು ಕರೆಂಟ್ ಬಿಲ್ ಬರಬಹುದು ಎಂಬುದು..ಪ್ರತಿ ತಿಂಗಳು ಅಂಬಾನಿಯವರು ವಿದ್ಯುತ್ ಸಂಸ್ಥೆಗೆ ಎಷ್ಟು ಹಣವನ್ನು ಪಾವತಿಸುತ್ತಾರೆ ಎಂದು ತಿಳಿದರೆ ಒಂದು ಕ್ಷಣ ಶಾಕ್ ಆಗುತ್ತೀರಾ..

ಈ ಮನೆಯ ಕರೆಂಟ್ ಬಿಲ್ ಒಂದು ತಿಂಗಳಿಗೆ ಸುಮಾರು 71 ಲಕ್ಷ ರೂಪಾಯಿ ಆಗಿದೆ, ಇಷ್ಟು ಸವಲತ್ತುಗಳನ್ನ ಹೊಂದಿರುವ ಈ ಮನೆ ಪ್ರಪಂಚದಲ್ಲೇ ಅತೀ ದುಬಾರಿಯಾದ ಮನೆ ಆಗಿದೆ. ..ಈ ಶ್ರೀಮಂತ ಒಂದು ತಿಂಗಳು ಪಾವಿತಿಸುವ ಮನೆಯ ಕರೆಂಟ್ ಬಿಲ್ ಏನಾದರೂ ಮಧ್ಯಮವರ್ಗದ ವ್ಯಕ್ತಿಗೆ ಸಿಕ್ಕರೆ ಅವರ ಜೀವನವೇ ಸೆಟ್ಟಲ್ ಆಗಿ ಬಿಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಶಾಕಿಂಗ್ ನ್ಯೂಸ್!ಚಾಲೆಂಜಿಂಗ್ ಸ್ಟಾರ್ ಮನೆ ಮೇಲೆ ಕಲ್ಲು ತೂರಾಟ!ಮಾಡಿದ್ದು ಯಾರು?

    ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…

  • ಆರೋಗ್ಯ

    ಅರಿಶಿನದಲ್ಲಿದೆ ಆ್ಯಂಟಿಬಯೋಟಿಕ್ ನಿಮಗೆಗೊತ್ತಾ..?ತಿಳಿಯಲು ಓದಿ…

    ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.

  • ಸರ್ಕಾರದ ಯೋಜನೆಗಳು

    ಈ ವರ್ಷದ ಕೊನೆಯೊಳಗೆ 5 ಸಾವಿರ ಸೈಟ್ ಹಂಚಿಕೆ ..!ತಿಳಿಯಲು ಈ ಲೇಖನ ಓದಿ..

    ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್‌ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.

  • ಆರೋಗ್ಯ

    ಕ್ಯಾರೆಟ್ ನಲ್ಲಿದೆ ಅದ್ಬುತ ಅರೋಗ್ಯಕರ ಅಂಶಗಳು.

    ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…

  • ಮನರಂಜನೆ

    ಬಿಗ್ ಬಾಸ್ 5 ಸಂಚಿಕೆಯ ಎಲ್ಲಾ ಸ್ಪರ್ಧಿಗಳು ವಾರಕ್ಕೆ ಗಳಿಸುತ್ತಿದ್ದ ಸಂಭಾವನೆ ಎಷ್ಟು ಗೊತ್ತಾ..?ಯಾರಿಗೆ ಹೆಚ್ಚು, ಯಾರಿಗೆ ಅತೀ ಕಡಿಮೆ..ತಿಳಿಯಲು ಇದನ್ನು ಓದಿ…

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…