ಸಿನಿಮಾ

ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

349

ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ.

ಇದರ ನಡುವೆ ಮಾಜಿ ಸಂಸದೆ ಮತ್ತು ನಟಿ ರಮ್ಯಾ ಬಾರದಿರುವುದು ಅಂಬಿ ಅಭಿಮಾನಿಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.ತಮ್ಮ ಆಕ್ರೋಶವನ್ನು ಸೋಶಿಯಲ್ ಮಿಡಿಯಾಗಳಲ್ಲಿ ತೋಡಿಕೊಂಡಿದ್ದಾರೆ.ಅಂಬರೀಶ್ ರವರು ರಮ್ಯಾರವರಿಗೆ ರಾಜಕೀಯ ಗುರು ಎಂದೇ ಹೇಳಬಹುದು.ಅವರು ರಮ್ಯಾಗೆ ರಾಜಕೀಯವಾಗಿ ದಾರಿ ತೋರಿಸಿದ್ದಾರೆ. ಹೀಗಾಗಿ ಅಂಬಿ ಅಂತಿಮ ದರ್ಶನಕ್ಕಾದರೂ ರಮ್ಯಾ ಮಂಡ್ಯಕ್ಕೆ ಬರಬೇಕಿತ್ತು.

ಅಲ್ಲದೇ ಓರ್ವ ಮಂಡ್ಯದ ಮಗಳಾಗಿ ರಮ್ಯಾ ಮಂಡ್ಯಕ್ಕೆ ಆಗಮಿಸಬೇಕಿತ್ತು. ಆದರೆ ತಮ್ಮನ್ನು ರಾಜಕೀಯವಾಗಿ ಬೆಳೆಸಿದ ಅಂಬರೀಶ್ ವಿರುದ್ಧವೇ ಇನ್ನೂ ದ್ವೇಷ ಸಾಧಿಸುತ್ತಿದ್ದಾರೆ ಅಂತ ಕಿಡಿಕಾರಿದ್ದಾರೆ.ಅಂಬಿ ನಿಧನರಾಗಿ ಒಂದು ದಿನಕಳೆದರೂ ಅಂತಿಮ ದರ್ಶನಕ್ಕೆ ರಮ್ಯಾ ಬಂದಿಲ್ಲ. ಘಟಾನುಘಟಿ ನಾಯಕರು, ಸಿನಿಮಾ ತಾರೆಯರು ಬಂದು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದ್ದಾರೆ. ರಮ್ಯಾ ಅವರೆಲ್ಲರಿಗಿಂತ ಬ್ಯುಸಿ ಇದ್ದಾರಾ ಎಂದು ಪ್ರಶ್ನಿಸುವ ಮೂಲಕ ಅಂಬಿ ಅಭಿಮಾನಿಗಳು ರಮ್ಯಾ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ.

ಅಂಬರೀಶ್ ಮತ್ತು ರಮ್ಯಾರವರು ಮಂಡ್ಯದವರಾಗಿದ್ದಾರೆ.ರಮ್ಯಾ ಚಿತ್ರ ರಂಗ ಮತ್ತು ರಾಜಕೀಯದಲ್ಲಿ ಅತೀ ಎತ್ತರಕ್ಕೆ ಬೆಳೆದಿದ್ದಾರೆ. ಅಸಲಿಗೆ ರಮ್ಯಾ ರಾಜಕೀಯದಲ್ಲಿ ಬೆಳೆಯಲು ಅಂಬರೀಶ್ ರವರೇ ಕಾರಣ. ಹೀಗಾಗಿ ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ತಂದಾಗ ರಮ್ಯಾ ಕೂಡ ತವರು ಜಿಲ್ಲೆಗೆ ಬಂದು ಅಂತಿಮ ದರ್ಶನ ಪಡೆಯುತ್ತಾರೆ ಅಂತ ಅಭಿಮಾನಿಗಳು ನಂಬಿದ್ದರು. ಆದರೆ ಅಲ್ಲಿಗೂ ರಮ್ಯಾ ಬರಲಿಲ್ಲ. ಈ ದಿನ ಕಂಠಿರವ ಸ್ಟುಡಿಯೋದಲ್ಲಿ ನಡೆಯಲಿರುವ ಅಂತ್ಯಕ್ರಿಯಗೆ ಬರುತ್ತಾರಯೇ ನೋಡಬೇಕಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…

  • ಸುದ್ದಿ

    170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

    ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…

  • ಸುದ್ದಿ

    30 ಕಿ ಮೀ ದೂರದಲ್ಲಿರುವಆಸ್ಪತ್ರೆಗೆ ಕೇವಲ 18 ನಿಮಿಷಗಳಲ್ಲಿ ರಕ್ತ ರವಾನೆ : ಯಶಶ್ವಿಯಾಗಿ ನಡೆದ ಡ್ರೋನ್ ಪ್ರಯೋಗ……..

    ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್‍ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…

  • ಉಪಯುಕ್ತ ಮಾಹಿತಿ

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ಬರಲಿದೆ ಎಂದ ವಿಜ್ಞಾನಿಗಳು..!ತಿಳಿಯಲು ಈ ಲೇಖನ ಓದಿ..

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ

  • ಸುದ್ದಿ

    ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

    ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…

  • ಸುದ್ದಿ

    ಬಿಗ್ ಬ್ರೇಕಿಂಗ್ ನ್ಯೂಸ್ : ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…