ಸುದ್ದಿ

ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಶಿಕ್ಷಣ ಇಲಾಖೆ ನಿರ್ದೇಶಕ ಅಮಾನತು..!

46

ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್‌.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ.

ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್‌.ಅಂಬೇಡ್ಕರ್‌ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು.

ಈ ಮಾರ್ಗಸೂಚಿಗಳನ್ನು ಇಲಾಖೆಯ ತಜ್ಞರ ಸಮಿತಿಯಲ್ಲಿಟ್ಟು ಪರಿಶೀಲಿಸಿ, ನಂತರ ಇಲಾಖೆಯ ಆಯುಕ್ತರ ಅನುಮೋದನೆ ಪಡೆದು ಸುತ್ತೋಲೆ ಹೊರಡಿಸಬೇಕಿತ್ತು. ಆದರೆ, ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೂ ತಾರದೆ ಕೆ.ಎಸ್‌.ಮಣಿ ಅವರು, ಖಾಸಗಿ ಸಂಸ್ಥೆಯ ಮಾರ್ಗದರ್ಶಿಗಳನ್ನು 2019ರ ಅ.28ರಂದು ಯಥಾವತ್‌ ಅನುಮೋದನೆ ನೀಡಿ, ನ.6ರಂದು ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಿದ್ದರು.

‘ಅಂಬೇಡ್ಕರ್‌ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ಸುತ್ತೋಲೆ ಹೊರಡಿಸಿ ಸಂವಿಧಾನ ಕರ್ತೃಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌.ಉಮಾಶಂಕರ್‌ ಸೇರಿ ನಾಲ್ವರು ಅಧಿಕಾರಿಗಳ ವಿರುದ್ಧ ನಗರ ಪೊಲೀಸ್‌ ಕಮಿಷನರ್‌ ಅವರಿಗೆ ಭಾರತೀಯ ಸಂವಿಧಾನ ರಕ್ಷಣಾ ಸಮಿತಿ ದೂರು ನೀಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ನೀವೂ ನಂಬಲೇಬೇಕು..ಇಲ್ಲಿ ಜನ ಪ್ರತೀದಿನ ಸ್ನಾನ ಮಾಡೋದು ಗೋವಿನ ಮೂತ್ರದಲ್ಲಿ!

    ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು  ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…

  • ಆರೋಗ್ಯ

    ಸಕ್ಕರೆ(ಶುಗರ್) ಕಾಯಿಲೆಗೆ ಉತ್ತಮ ಔಷದಿಯಾಗಿರುವ ಮೆಂತೆ …! ಬಗ್ಗೆ ತಿಳಿಯಲು ಈ ಲೇಖನ ಓದಿ..

    ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…

  • ಜೀವನಶೈಲಿ

    ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮೊದಲು ಮಾಡಿದ್ರೆ, ಅದೃಷ್ಟ ತಾನಾಗೇ ನಿಮ್ಮ ಬಳಿ ಬರುವುದು..!

    ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….