ಆರೋಗ್ಯ

ಈ ಜ್ಯೂಸ್‌ ಅನ್ನು ಕುಡಿದರೆ ಸಾಕು ಕೆಮ್ಮು ಮಂಗಮಾಯ! ಈ ಉಪಯುಕ್ತ ಮಾಹಿತಿ ನೋಡಿ.

276

ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು ಆಫೀಸಿನ ಕಡೆ ಮುಖ ಮಾಡುತ್ತಿದ್ದವರು ಹಠಾತ್ತನೆ ಆಸ್ಪತ್ರೆಯ ಕಡೆಗೆ ಓಡುವಂತೆ ಮಾಡುತ್ತವೆ. ಆದರೆ ಮುಂಜಾಗೃತಾ ಕ್ರಮವಾಗಿ ಕಾಯಿಲೆ ಬಂದ ಮೇಲೆ ಅದರ ಜೊತೆ ಹೆಣಗಾಡುವುದಕ್ಕಿಂತ ಬರದ ಹಾಗೆ ತಡೆಯುವುದು ಒಳಿತಲ್ಲವೇ? ಆ ಸಮಯದಲ್ಲಿ ಮಾತ್ರೆ ಅಥವಾ ಔಷಧಿಗಳು ನಮ್ಮ ಬಳಿ ಇಲ್ಲದೆ ಹೋದರೂ, ಕನಿಷ್ಠ ಪಕ್ಷ ಮನೆ ಮದ್ದು ಎಂದು ಪ್ರಸಿದ್ಧವಾಗಿರುವ ನಮ್ಮ ಅಡುಗೆ ಮನೆಯ ಹಲವಾರು ಆಹಾರ ಪದಾರ್ಥಗಳು ನಮಗೆ ಬಹಳ ಉಪಯೋಗವಾಗುತ್ತವೆ. ಇದರಲ್ಲಿ ಕೆಲವೊಂದು ಹಣ್ಣು-ತರಕಾರಿಗಳು ಸಹ ಸೇರಿವೆ.

ಇಂತಹ ಚಳಿಗಾಲಕ್ಕೆ ಎಂದೇ ಔಷಧಿಯಾಗಿ ಮಾರ್ಪಾಡಾಗುವ ಒಂದು ಹಣ್ಣು ಮತ್ತು ಅದರ ಹುಳಿ ಸಿಹಿ ಮಿಶ್ರಿತ ರಸ ನಮಗೆ ಆ ಕ್ಷಣದಲ್ಲಿ ತ್ವರಿತಗತಿಯಲ್ಲಿ ಕೆಮ್ಮನ್ನು ಉಪಶಮನ ಮಾಡುವ ಅದ್ಭುತ ಶಕ್ತಿಯನ್ನು ಹೊಂದಿದೆ. ಈ ಹಣ್ಣು ಮಿಕ್ಕ ಎಲ್ಲಾ ಸಮಯದಲ್ಲಿ ಕೇವಲ ರುಚಿಗಾಗಿ ಅದರ ಹಳದಿ ಬಣ್ಣದ ಹೋಳುಗಳ ಮೇಲೆ ಉಪ್ಪು ಖಾರ ಸವರಿಕೊಂಡು ತಿನ್ನಲು ಮಾತ್ರ ಯೋಗ್ಯ ಎಂದು ನೀವು ಅಂದುಕೊಂಡರೆ ಅದು ನಿಮ್ಮ ತಪ್ಪು ಕಲ್ಪನೆ. ಸಾಮಾನ್ಯವಾಗಿ ಇದರ ಅದ್ಭುತ ಆರೋಗ್ಯ ಪ್ರಯೋಜನಗಳು ಇದುವರೆಗೂ ನಿಮಗೆ ತಿಳಿದಿರುವುದಿಲ್ಲ ಎಂದುಕೊಳ್ಳುತ್ತೇವೆ. ವಿಶೇಷವಾಗಿ ಕೆಮ್ಮಿನ ಸಮಸ್ಯೆಗೆ ಈ ಹಣ್ಣು ಮತ್ತು ಅದರ ರಸ ಉಪಯೋಗಿಸಲ್ಪಡುತ್ತದೆ. ಇಷ್ಟೊಂದು ಈ ಹಣ್ಣಿನ ಬಗ್ಗೆ ಹೇಳಬೇಕಾದರೆ ಇದು ಯಾವುದೋ ಒಂದು ವಿಶೇಷವಾದ ಹಣ್ಣೇ ಆಗಿರಬೇಕು ಎಂದು ನಿಮ್ಮ ಮನಸ್ಸಿನಲ್ಲಿ ಬಂದಿದೆ ಎಂಬುದು ನಮಗೆ ಗೊತ್ತು

.ಹಾಗಾದರೆ ಈ ಹಣ್ಣು ಯಾವುದು? ಅದೇ ನಿಮ್ಮ ನೆಚ್ಚಿನ ಪೈನಾಪಲ್ ಹಣ್ಣು. ಹೌದು ನಾವು ಇದುವರೆಗೂ ಹೇಳಿದ್ದು ಇದರ ಬಗ್ಗೆಯೇ. ಪೈನಾಪಲ್ ಹಣ್ಣು ನಮ್ಮ ಎಂತಹದೇ ಕೆಮ್ಮಿಗೂ ಸಹ ಪೂರ್ಣ ವಿರಾಮ ವನ್ನು ಹಾಕಬಲ್ಲ ಶಕ್ತಿಯನ್ನು ಹೊಂದಿದೆ. ಕೆಮ್ಮಿಗೆ ಇದೊಂದು ಮನೆಮದ್ದು ಎಂದರೂತಪ್ಪಾಗುವುದಿಲ್ಲ. ಕೇವಲ ಪೈನಾಪಲ್ ಹಣ್ಣನ್ನು ತಿಂದರೆ ಕೆಮ್ಮು ದೂರಾಗುತ್ತದೆ ಅಥವಾ ಈ ಹಣ್ಣಿನ ಜೊತೆ ಬೇರೆ ಇನ್ಯಾವುದೇ ಆಹಾರ ಪದಾರ್ಥವನ್ನು ಬಳಸಬೇಕೇ ಎಂಬುದರ ಬಗ್ಗೆ ಈ ಲೇಖನದಲ್ಲಿ ಸ್ಪಷ್ಟತೆಯನ್ನು ಕೊಡಲಾಗಿದೆ.

ಪೈನಾಪಲ್ ಹಣ್ಣಿನ ರುಚಿ ಪ್ರತಿಯೊಬ್ಬರಿಗೂ ಇಷ್ಟವಾಗುತ್ತದೆ.ಅದರ ಹುಳಿ ಸಿಹಿ ಮಿಶ್ರಣದ ಜ್ಯೂಸು ಸಹ ಎಂತಹವರ ಬಾಯಲ್ಲೂ ನೀರು ತರಿಸುತ್ತದೆ. ಮನುಷ್ಯನ ದೇಹಕ್ಕೆ ಉಂಟಾಗುವ ಯಾವುದೇ ಬಗೆಯ ಸಣ್ಣ ಪುಟ್ಟ ಕಾಯಿಲೆಗಳನ್ನು ನಿಯಂತ್ರಣ ಮಾಡುವುದರಲ್ಲಿ ಪೈನಾಪಲ್ ನಲ್ಲಿರುವ ಆಂಟಿ – ಆಕ್ಸಿಡೆಂಟ್ ಗಳು ಸಹಾಯ ಮಾಡುತ್ತವೆ. ನಮ್ಮ ಜೀರ್ಣಾಂಗದ ಉತ್ತಮ ಕಾರ್ಯ ಚಟುವಟಿಕೆಗೆ ಪೈನಾಪಲ್ ಹಣ್ಣು ಸಹಕಾರಿ. ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ನಮಗೆ ಎದುರಾಗುವ ಕೆಮ್ಮು ಮತ್ತು ಶೀತದಂತಹ ಕಾಯಿಲೆಗಳಿಗೆ ಪೂರ್ಣವಿರಾಮ ಹಾಕುತ್ತದೆ.

ಪೈನಾಪಲ್ ಜ್ಯೂಸ್ ಅನ್ನು ಕೆಮ್ಮಿಗೆ ಒಂದು ಔಷಧಿಯಾಗಿ ಉಪಯೋಗಿಸಬಹುದು. ಏಕೆಂದರೆ ಪೈನಾಪಲ್ ಹಣ್ಣಿನ ರಸದಲ್ಲಿ ಬ್ರೊಮೆಲೈನ್ ಎಂಬ ಎಂಜೈಮ್ ಇದ್ದು ಇದರ ಆಂಟಿ – ಇಂಪ್ಲಾಮೇಟರಿ ಗುಣ ಲಕ್ಷಣಗಳು ಕೆಮ್ಮು ಮತ್ತು ಶೀತದಿಂದ ಉಂಟಾಗುವ ಯಾವುದೇ ಬಗೆಯ ಸೋಂಕುಗಳನ್ನು ಮತ್ತು ಅಲರ್ಜಿಗಳನ್ನು ಕಡಿಮೆ ಮಾಡುತ್ತದೆ. ಫೈನಾಪಲ್ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ನೆಗಡಿ ಕೆಮ್ಮಿನಂತಹ ಲಕ್ಷಣಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಇದರ ಬಗ್ಗೆ ಹಲವಾರು ಅಧ್ಯಯನಗಳು ಕೂಡ ತಮ್ಮ ಸಂಶೋಧನೆಯಲ್ಲಿ ತಿಳಿಸಿವೆ.

ಆರೋಗ್ಯ ತಜ್ಞರ ಪ್ರಕಾರ ” ಯಾವುದೇ ಒಬ್ಬ ಮನುಷ್ಯ ತನ್ನ ದೇಹಕ್ಕೆ ಯೋಗ, ವ್ಯಾಯಾಮದಂತಹ ಹವ್ಯಾಸಗಳನ್ನು ರೂಡಿಸಿ ಆಗಾಗ ಜೇನು ತುಪ್ಪದ ಜೊತೆಗೆ ಸ್ವಲ್ಪ ಬಿಸಿ ನೀರಿನ ಆವಿಯನ್ನು ತೆಗೆದುಕೊಂಡು ಪೈನಾಪಲ್ ಹಣ್ಣಿನ ರಸವನ್ನು ಸೇವಿಸುತ್ತಿದ್ದರೆ ಅದರಲ್ಲಿರುವ ಬ್ರೊಮೆಲೈನ್ ಎಂಜೈಮ್ ತನ್ನ ಆಂಟಿ – ಇನ್ಫಾಮೇಟರಿ ಗುಣ ಲಕ್ಷಣಗಳಿಂದ ಕೆಮ್ಮು ಮತ್ತು ಅದಕ್ಕೆ ಸಂಬಂಧಿಸಿದ ಇನ್ನಿತರ ಲಕ್ಷಣಗಳನ್ನು ನಿಗ್ರಹಿಸುತ್ತದೆ ಎಂದು ಹಲವಾರು ಸಂಶೋಧನಾ ಅಧ್ಯಯನಗಳು ದೃಢಪಡಿಸಿವೆ ” ಎಂದು ಹೇಳುತ್ತಾರೆ.

ಪೈನಾಪಲ್ ಅಥವಾ ಅನಾನಸ್‌ ಹಣ್ಣಿನ ರಸವನ್ನು ಕೆಮ್ಮಿಗೆ ಹೇಗೆ ಉಪಯೋಗಿಸಬೇಕು?

ನಾವು ಮೇಲೆ ಹೇಳಿದ ರೀತಿಯಲ್ಲಿ ಕೇವಲ ಪೈನಾಪಲ್ ಹಣ್ಣಿನ ರಸ ಕೆಮ್ಮಿನ ನಿವಾರಣೆಗೆ ಮಾಡುವ ಪ್ರಯೋಗಕ್ಕಿಂತ ಅದರ ಜೊತೆ ಇನ್ನಿತರೆ ಪ್ರಾಚೀನ ಕಾಲದಿಂದ ಪ್ರಸಿದ್ಧವಾದ ಮನೆ ಮದ್ದುಗಳನ್ನು ಬಳಸಿ ಉಪಯೋಗಿಸುವುದರಿಂದ ಹೆಚ್ಚಿನ ಪ್ರಯೋಜನ ಉಂಟಾಗುತ್ತದೆ. ಹಾಗಾದರೆ ಪೈನಾಪಲ್ ಹಣ್ಣಿನ ರಸದ ಜೊತೆಯಲ್ಲಿ ಉಪಯೋಗಿಸಲ್ಪಡುವ ಮನೆ ಮದ್ದುಗಳು ಯಾವುವು ಮತ್ತು ಅವುಗಳಿಂದ ಉಂಟಾಗುವ ಪ್ರಯೋಜನಗಳು ಏನೇನು ಎಂದು ಈಗ ನೋಡೋಣ ಬನ್ನಿ.

ಪೈನಾಪಲ್ ಜ್ಯೂಸ್ ಮತ್ತು ಜೇನುತುಪ್ಪ :ಇದೊಂದು ಸರಳ ವಿಧಾನವಾಗಿದ್ದು ಕೆಮ್ಮಿನ ಉಪಶಮನಕ್ಕೆ ಬಳಸುವ ಸಾಧಾರಣ ಮನೆ ಮದ್ದಾಗಿದೆ. ಆದರೂ ಕೂಡ ಇದು ಬಹಳ ಪ್ರಸಿದ್ದಿಯನ್ನು ಪಡೆದ ಕೇವಲ ಎರಡು ವಸ್ತುಗಳನ್ನು ಒಳಗೊಂಡ ಮತ್ತು ಅದ್ಭುತ ಪ್ರಯೋಜನಗಳನ್ನು ಹೊಂದಿರುವ ಒಂದು ಮನೆ ಔಷಧಿಯಾಗಿದೆ. ನೀವು ಇಲ್ಲಿ ಮಾಡಬೇಕಾಗಿರುವುದು ಇಷ್ಟೇ. ಅರ್ಧ ಕಪ್ ನಷ್ಟು ಉಗುರು ಬೆಚ್ಚಗಿನ ಪೈನಾಪಲ್ ಜ್ಯೂಸ್ ಗೆ ಒಂದು ಟೇಬಲ್ ಚಮಚದಷ್ಟು ಶುದ್ಧವಾದ ಜೇನು ತುಪ್ಪವನ್ನು ಹಾಕಿ ಚೆನ್ನಾಗಿ ಕಲಸಿ. ಈ ಮಿಶ್ರಣವನ್ನು ಬಿಸಿ ಇರುವಾಗಲೇ ಕುಡಿಯಿರಿ. ಇಲ್ಲಿ ಜೇನು ತುಪ್ಪ ಮತ್ತು ಪೈನಾಪಲ್ ಎರಡೂ ಸಹ ಕೆಮ್ಮನ್ನು ಗುಣಪಡಿಸುವ ಅಂಶಗಳನ್ನು ತಮ್ಮಲ್ಲಿ ಹೊಂದಿದ್ದು ಕೆಮ್ಮಿಗೆ ಉತ್ತಮ ಚಿಕಿತ್ಸೆಯನ್ನು ಒದಗಿಸುತ್ತವೆ.

ಪೈನಾಪಲ್ ಜ್ಯೂಸ್ ನ ಜೊತೆಗೆ ಉಪ್ಪು, ಮೆಣಸು ಮತ್ತು ಜೇನು ತುಪ್ಪದ ಸಮ್ಮಿಶ್ರಣ : ಆಯುರ್ವೇದ ಪದ್ಧತಿಯಲ್ಲಿ ಈ ಎಲ್ಲಾ ಆಹಾರ ಪದಾರ್ಥಗಳು ಸಹ ಕೆಮ್ಮನ್ನು ಉಪಶಮನ ಮಾಡುವ ಅತ್ಯದ್ಭುತ ಶಕ್ತಿಶಾಲಿ ಗುಣ ಲಕ್ಷಣವನ್ನು ಹೊಂದಿರುವ ವಸ್ತುಗಳು. ಇನ್ನು ಇವುಗಳ ಮಿಶ್ರಣ ಮಾಡುವ ಚಮತ್ಕಾರ ಕೇಳಬೇಕೇ?

ಒಂದು ಕಪ್ ನಷ್ಟು ಪೈನಾಪಲ್ ಜ್ಯೂಸ್ ಗೆ ಸುಮಾರು ಮುಕ್ಕಾಲು ಟೇಬಲ್ ಚಮಚದಷ್ಟು ಜೇನು ತುಪ್ಪ, ಚಿಟಿಕೆ ಉಪ್ಪು ಮತ್ತು ಚಿಟಿಕೆಯಷ್ಟು ಕಪ್ಪು ಮೆಣಸಿನ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈ ಅಪರೂಪದ ಜ್ಯೂಸ್ ಅನ್ನು ಒಂದು ಸಲಕ್ಕೆ ಕಾಲು ಕಪ್ ನಂತೆ ದಿನಕ್ಕೆ ಮೂರು ಬಾರಿ ಸೇವಿಸಿ. ಆದರೆ ನೆನಪಿಡಿ, ಇದು ಶೀತ, ಕೆಮ್ಮು ಗಳಿಗೆ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಕಾರಣ ಇಲ್ಲಿರುವ ಎಲ್ಲಾ ಪದಾರ್ಥಗಳು ಉಷ್ಣ ಗುಣವನ್ನು ಹೊಂದಿರುವುದರಿಂದ. ಇದನ್ನು ಸೇವಿಸಿದ ಮೇಲೆ ನಿಮ್ಮ ದೇಹದ ನೀರಿನ ಅಂಶ ಕಡಿಮೆಯಾಗುವ ಸಂಭವ ಹೆಚ್ಚಿರುತ್ತದೆ. ಅದರಿಂದ ಇಡೀ ದಿನ ಸಾಕಷ್ಟು ನೀರನ್ನು ಕುಡಿಯಲು ಸೂಚಿಸಲಾಗಿದೆ.

ಕೆಲವೊಂದು ಎಚ್ಚರಿಕೆಗಳು :ಇಲ್ಲಿ ನೀವು ಪೈನಾಪಲ್ ಜ್ಯೂಸ್ ನ ಸೇವಿಸುವ ಪ್ರಮಾಣದ ಬಗ್ಗೆ ಎಚ್ಚರಿಕೆ ವಹಿಸಿ. ಒಂದು ವೇಳೆ ಇದನ್ನು ಸೇವಿಸಿದ ನಂತರ ನಿಮ್ಮ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದರೂ ಇನ್ನೊಮ್ಮೆ ಕುಡಿಯಲು ಹೋಗಬೇಡಿ. ಅದೂ ಅಲ್ಲದೇ ಪೈನಾಪಲ್ ಜ್ಯೂಸ್ ಅನ್ನು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿಗೆ ಕುಡಿಯಬೇಡಿ. ಆಹಾರ ತಜ್ಞರು ಹೇಳುವ ಪ್ರಕಾರ ಪೈನಾಪಲ್ ಜ್ಯೂಸ್ ಮನುಷ್ಯನ ದೇಹದಲ್ಲಿ ಕರುಳಿನ ಭಾಗದಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಉಂಟು ಮಾಡುತ್ತದೆ. ಅಷ್ಟೇ ಅಲ್ಲದೆ ಕೆಲವರಿಗೆ ಅಲರ್ಜಿಯ ಪ್ರತಿಕ್ರಿಯೆ, ಹೃದಯ ಬಡಿತದ ಹೆಚ್ಚುವಿಕೆ ಮತ್ತು ಹೆಂಗಸರಲ್ಲಿ ಮುಟ್ಟಿಗೆ ಸಂಬಂಧಪಟ್ಟ ತೊಂದರೆಗಳು ಎದುರಾಗುತ್ತವೆ. ಆದ್ದರಿಂದ ಪೈನಾಪಲ್ ಜ್ಯೂಸ್ ನ ಪ್ರಮಾಣದ ಬಗ್ಗೆ ವಿಪರೀತ ಗಮನ ವಹಿಸುವುದು ಒಳ್ಳೆಯದು ಮತ್ತು ಇದನ್ನು ಸೇವಿಸುವ ಮುಂಚೆ ಎಷ್ಟು ಪ್ರಮಾಣ ಸೇವಿಸಬೇಕೆಂದು ನಿಮಗೆ ನೀವೇ ತೀರ್ಮಾನ ಮಾಡುವುದನ್ನು ಬಿಟ್ಟು ವೈದ್ಯರನ್ನು ಸಂಪರ್ಕಿಸಿ ಸೂಕ್ತ ಸಲಹೆಯನ್ನು ಪಡೆಯುವುದು ಉತ್ತಮ.ಶುಂಠಿ ಚಹಾವನ್ನು ಒಮ್ಮೆ ಪ್ರಯತ್ನಿಸಿ. ಏಕೆಂದರೆ ಶುಂಠಿಯಲ್ಲಿ ಕೆಮ್ಮನ್ನು ಹೋಗಲಾಡಿಸುವ ವಿಶೇಷ ಗುಣ ಲಕ್ಷಣವಿದೆ.

ಬಿಸಿ ನೀರಿನ ಆವಿಯನ್ನು ನಿಯಮಿತವಾದ ರೀತಿಯಲ್ಲಿ ಆಗಾಗ ತೆಗೆದುಕೊಳ್ಳುತ್ತಿರಿ. ಕೆಮ್ಮು-ಶೀತ ಸಮಯದಲ್ಲಿ ನಮ್ಮ ದೇಹದಿಂದ ನಮಗೆ ಗೊತ್ತಿಲ್ಲದ ಹಾಗೆ ವಿಪರೀತ ನೀರಿನ ಅಂಶ ಬೆವರಿನ ಮುಖಾಂತರ ದೇಹದಿಂದ ಹೊರ ಹೋಗುತ್ತಿರುತ್ತದೆ. ಆದ್ದರಿಂದ ದೇಹದಲ್ಲಿ ನೀರಿನಂಶದ ಮಟ್ಟದ ಸಮತೋಲನವನ್ನು ಕಾಯ್ದುಕೊಳ್ಳಲು ಹೆಚ್ಚಿಗೆ ನೀರನ್ನು ಅಥವಾ ದ್ರವಾಹಾರಗಳನ್ನು ಸೇವಿಸಿ. ದಿನಕ್ಕೆರಡು 2 ಬಾರಿಯಂತೆ ಉಪ್ಪು ಮಿಶ್ರಿತ ನೀರನ್ನು ಬಾಯಿಗೆ ಹಾಕಿಕೊಂಡು ಬಾಯಿ ಮುಕ್ಕಳಿಸಿ. ಶೀತದ ಸಮಯದಲ್ಲಿ ಕೆಮ್ಮನ್ನು ಗುಣಪಡಿಸುವ ಕೆಲವೊಂದು ಸೂಪ್ ಗಳನ್ನು ಮಾಡಿಕೊಂಡು ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿ. ಮೇಲೆ ತಿಳಿಸಿದ ಮತ್ತು ಇದುವರೆಗೂ ಚರ್ಚಿಸಿದ ಎಲ್ಲಾ ವಿಷಯಗಳು ಕೇವಲ ನಿಮಗೆ ಶೀತದಿಂದ ಉಂಟಾದ ಕೆಮ್ಮಿಗೆ ಪರಿಹಾರಗಳು ಎಂದು ನೀವು ಭಾವಿಸಬೇಕು. ನಿಮಗೆ ಒಂದು ವೇಳೆ ದೀರ್ಘಕಾಲದಿಂದ ಇನ್ನಾವುದೇ ಕೆಮ್ಮಿನ ಸಮಸ್ಯೆ ಇದ್ದರೆ ದಯಮಾಡಿ ಈ ಮನೆ ಮದ್ದುಗಳ ಮೇಲೆ ಅವಲಂಬಿತ ರಾಗುವುದನ್ನು ನಿಲ್ಲಿಸಿ ವೈದ್ಯರ ಬಳಿ ಹೋಗಿ ಔಷಧಿಗಳನ್ನು ತೆಗೆದುಕೊಳ್ಳುವುದು ಉತ್ತಮ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಗೆ ಭೂಮಿಯ ಬಗ್ಗೆ ಗೊತ್ತಿರದ ಈ 5 ವಿಸ್ಮಯ ಸಂಗತಿಗಳು!ಗೊತ್ತಾಗ್ಬೇಕೆಂದ್ರೆ ಈ ಲೇಖನಿ ಓದಿ ಶೇರ್ ಮಾಡಿ….

    ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.

  • ಸಿನಿಮಾ

    “ಆಂಧ್ರ”ದಲ್ಲೂ “ಸುದೀಪ್‌ರ ಫ್ಯಾನ್ಸ್‌ ಕ್ಲಬ್‌” !!!

    ನಟ “ಸುದೀಪ್‌”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್‌. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್‌ರವರು ಟ್ವಿಟ್ಟರ್‌ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.

  • ಆರೋಗ್ಯ, ಸರ್ಕಾರಿ ಯೋಜನೆಗಳು

    ಇಂದಿರಾ ಕ್ಯಾಂಟೀನ್ ಆಯ್ತು. ಈಗ “ಇಂದಿರಾ ಕ್ಲಿನಿಕ್” ಶುರು!ಇಲ್ಲಿ ಏನೆಲ್ಲಾ ಉಚಿತ ಸೇವೆ ಸಿಗಲಿದೆ ಗೂತ್ತಾ..?

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

  • ಸಿನಿಮಾ

    ನುಡಿದಂತೆ ನಡೆದ “ಹಳ್ಳಿ ಹುಡುಗ ಪ್ರಥಮ್”.

    ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

  • ಜ್ಯೋತಿಷ್ಯ

    ಸಾಯಿ ಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…..!

    ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…