ಸಿನಿಮಾ

ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

85

ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ.

ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ. 

ಜೂ. ಎನ್‍ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.

ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್‍ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • ಆರೋಗ್ಯ

    ಹುಳುಕು ಹಲ್ಲಿನ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು.

    ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….

  • ಸುದ್ದಿ, ಸ್ಪೂರ್ತಿ

    ಪ್ರಧಾನಮಂತ್ರಿ ಯೋಜನೆಯ ಲಾಭ ಪಡೆದು ಈ ಮಹಿಳೆ ಆಗಿದ್ದೇನು ಗೊತ್ತಾ?ಮರೆಯದೇ ಈ ಸುದ್ದಿ ನೋಡಿ

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್  ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…

  • ದೇವರು-ಧರ್ಮ

    ಶವದ ಕಾಲಿನ ಎರಡು ಹೆಬ್ಬೆರಳನ್ನು ಒಟ್ಟಿಗೆ ಸೇರಿಸಿ ಕಟ್ಟುತ್ತಾರೆ ಯಾಕೆ ಗೊತ್ತಾ…? ತಿಳಿಯಲು ಈ ಲೇಖನ ಓದಿ …

    ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.