ಮನರಂಜನೆ

ಮ್ಯೂಸಿಕ್ ಮಾಂತ್ರಿಕ ಎರ್.ಆರ್ ರೆಹಮಾನ್ ರವರನ್ನು ಭೇಟಿ ಮಾಡಿದ ಹಳ್ಳಿ ಪ್ರತಿಭೆ ಗಂಗಮ್ಮ..!

By admin

December 11, 2018

ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ.

ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ.

ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ ಶುಭ ಹಾರೈಸಿರುವ ಎ.ಆರ್ ರೆಹಮಾನ್, ಇದೇ ತಿಂಗಳು 22ಕ್ಕೆ ಬೆಂಗಳೂರಿನಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಅದರ ಸಿದ್ಧತೆಗಾಗಿ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಗಂಗಮ್ಮರನ್ನು ಭೇಟಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಾಕಿದ ವಿಡಿಯೋದಿಂದಾಗಿ ಎಲ್ಲೆಡೆ ಫೇಮಸ್ ಆಗಿದ್ದ ಗಂಗಮ್ಮ 20 ವರ್ಷದಿಂದಲೂ ಹಾಡುತ್ತಿದ್ದಾರೆ.ಇವರು ಫೇಸ್‍ಬುಕ್ ಹಾಡಿದ ಒಂದು ಹಾಡಿನ ವಿಡಿಯೋ 24 ಗಂಟೆಯಲ್ಲಿ ಬರೋಬ್ಬರಿ 5 ಲಕ್ಷಕ್ಕೂ ಹೆಚ್ಚು ಜನ ವೀಕ್ಷಣೆ ಮಾಡಿದ್ದು, ವಿಡಿಯೋವನ್ನು ಸ್ಟುಡಿಯೋ ಮಾಲೀಕ ಶಿವಪ್ರಸಾದ್ ಲೈವ್ ಮಾಡಿದ್ದರು.

ನಾನು ಆರ್ಕೆಸ್ಟ್ರಾ ಕಾಲದಿಂದಲೂ ಹಾಡುತ್ತಿದ್ದೇನೆ.ನಂತರ ಕೊಪ್ಪಳದಲ್ಲಿ ಆರ್ಕೆಸ್ಟ್ರಾ ಶುರುವಾದಾಗ 20 ವರ್ಷದಿಂದ ಹಾಡಲು ಶುರು ಮಾಡಿದ್ದೇನೆ. ಈಗ ನಾನು ಗುರುತಿಸಿಕೊಳ್ಳುತ್ತಿದ್ದೇನೆ. ವಿಡಿಯೋ ವೈರಲ್ ಆಗಿದ್ದಕ್ಕೆ ನನ್ನ ಕುಟುಂಬದವರು ಸಂತೋಷವಾಗಿದ್ದಾರೆ ಎಂದು ಗಂಗಮ್ಮ ತಿಳಿಸಿದ್ದಾರೆ..