ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ.

1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು ಗೊತ್ತಿಲ್ಲ. ಸೇನೆಯವರು ಮೊದಲು ಉತ್ತಯ್ಯ ಮಿಸ್ಸಿಂಗ್ ಎಂದು, ನಂತರ ಅವರು ನಿಧನರಾಗಿದ್ದಾರೆ ಎಂದು ಹೇಳಿದ್ದರು. ಅದಕ್ಕೆ ಸಾಕ್ಷಿ ಕೊಡಿ ಎಂದು ಪಾರ್ವತಿ ಇದುವರೆಗೂ ಪತಿಗಾಗಿ ಕಾಯುತ್ತಿದ್ದಾರೆ.

ಆಗಸ್ಟ್ 1999ರಂದು, ಉತ್ತರಪ್ರದೇಶದಲ್ಲಿ ಸ್ನಿಗ್ನಲ್ ಬೆಟಾಲಿಯನ್ನಲ್ಲಿ ಲಾನ್ಸ್ ನಾಯಕ್ ಆಗಿದ್ದ ಉತ್ತಯ್ಯ ಮನೆಗೆ ಬಂದಿದ್ದರು. 20 ದಿನ ಇದ್ದು ಗರ್ಭಿಣಿ ಪತ್ನಿಗೆ ದೇಶ ಸೇವೆ ಮುಗಿಸಿ ಬೇಗ ಹಿಂದಿರುಗಿ ಬರುತ್ತೇನೆ ಎಂದು ಹೇಳಿ ಅಲಹಾಬಾದ್ನ ತನ್ನ ಯುನಿಟ್ಗೆ ವಾಪಾಸ್ ಹೋಗಿದ್ದರು. ಬಳಿಕ ನವೆಂಬರ್ 21ರಂದು ಪತ್ನಿಗೆ ಕರೆ ಮಾಡಿ ಹುಷಾರಿಲ್ಲ ಎಂದು ಹೇಳಿದ್ದರು. ಅದೇ ಕಡೆಯ ಕರೆ, ಆ ನಂತರ ಮತ್ತೆ ಕರೆಯೇ ಬರದಿರೋದ್ರಿಂದ ಆತಂಕಕ್ಕೀಡಾದ ಕುಟುಂಬಕ್ಕೆ ಡಿಸೆಂಬರ್ 4ಕ್ಕೆ ಒಂದು ಟೆಲಿಗ್ರಾಂ ಬಂತು. ಕಡೆಗೂ ಪತಿಯಿಂದ ಟೆಲಿಗ್ರಾಂ ಬಂತು ಎಂದುಕೊಂಡಿದ್ದ ಪತ್ನಿಗೆ ದೊಡ್ಡ ಆಘಾತವೇ ಕಾದಿತ್ತು.
ಆ ಟೆಲಿಗ್ರಾಂನಲ್ಲಿ ಉತ್ತಯ್ಯ ಸೈನ್ಯದ ಯುನಿಟ್ನಲ್ಲಿಲ್ಲ ಊರಲ್ಲಿದ್ರೆ ಕಳುಹಿಸಿಕೊಡಿ ಎಂದು ಬರೆಯಲಾಗಿತ್ತು. ಆ ಸುದ್ದಿ ಕೇಳಿ ಶಾಕ್ಗೆ ಒಳಗಾದ ಯೋಧ ಉತ್ತಯ್ಯನ ಗರ್ಭಿಣಿ ಪತ್ನಿಗೆ ಡೆಲಿವರಿಯಾಗಿ ಮಗು ಕೂಡ ಸಾವನ್ನಪ್ಪಿತ್ತು. ದಿನ ಕಳೆದಂತೆ ಸುಧಾರಿಸಿಕೊಂಡು ಪತಿಗಾಗಿ ಹುಡುಕಾಟ ನಡೆಸಿ ಸೈನ್ಯದ ಯುನಿಟ್ಗೂ ಹೋಗಿ ಬಂದರೂ ಪತಿಯ ಸುಳಿವೇ ಸಿಗಲಿಲ್ಲ. ಕಡೆಗೆ ಸೇನೆ ಜೂನ್ 14ಕ್ಕೆ ಉತ್ತಯ್ಯ ನಿಧನರಾಗಿದ್ದಾರೆ ಎಂದು ಪತ್ರ ಕಳುಹಿಸಿದ್ದರು.

ಪತ್ರ ಕಳುಹಿಸಿದ ನಂತರ 2010ರಿಂದ ಯೋಧನ ಪತ್ನಿಗೆ ಪಿಂಚಣಿ ಕೊಡುವುದಕ್ಕೆ ಶುರು ಮಾಡಿದ ಸರ್ಕಾರ ಮೃತದೇಹವಾಗಲಿ, ಎಲ್ಲಿ, ಹೇಗೆ ನಿಧನರಾದರು ಎಂದಾಗಲೀ ಯೋಧನ ಕುಟುಂಬಕ್ಕೆ ಮಾಹಿತಿಯೇ ಕೊಟ್ಟಿಲ್ಲ. ಹೀಗಾದರೆ ಹೇಗೆ ಸೈನ್ಯ ನಂಬಿ ಯೋಧರನ್ನಾಗಿ ದೇಶ ಸೇವೆಗೆ ನಮ್ಮವರನ್ನು ಕಳುಹಿಸೋದು ಎಂದು ಪಾರ್ವತಿ ಹಿತೈಷಿಗಳು ಪ್ರಶ್ನಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.
ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…