ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ.

1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು ಗೊತ್ತಿಲ್ಲ. ಸೇನೆಯವರು ಮೊದಲು ಉತ್ತಯ್ಯ ಮಿಸ್ಸಿಂಗ್ ಎಂದು, ನಂತರ ಅವರು ನಿಧನರಾಗಿದ್ದಾರೆ ಎಂದು ಹೇಳಿದ್ದರು. ಅದಕ್ಕೆ ಸಾಕ್ಷಿ ಕೊಡಿ ಎಂದು ಪಾರ್ವತಿ ಇದುವರೆಗೂ ಪತಿಗಾಗಿ ಕಾಯುತ್ತಿದ್ದಾರೆ.

ಆಗಸ್ಟ್ 1999ರಂದು, ಉತ್ತರಪ್ರದೇಶದಲ್ಲಿ ಸ್ನಿಗ್ನಲ್ ಬೆಟಾಲಿಯನ್ನಲ್ಲಿ ಲಾನ್ಸ್ ನಾಯಕ್ ಆಗಿದ್ದ ಉತ್ತಯ್ಯ ಮನೆಗೆ ಬಂದಿದ್ದರು. 20 ದಿನ ಇದ್ದು ಗರ್ಭಿಣಿ ಪತ್ನಿಗೆ ದೇಶ ಸೇವೆ ಮುಗಿಸಿ ಬೇಗ ಹಿಂದಿರುಗಿ ಬರುತ್ತೇನೆ ಎಂದು ಹೇಳಿ ಅಲಹಾಬಾದ್ನ ತನ್ನ ಯುನಿಟ್ಗೆ ವಾಪಾಸ್ ಹೋಗಿದ್ದರು. ಬಳಿಕ ನವೆಂಬರ್ 21ರಂದು ಪತ್ನಿಗೆ ಕರೆ ಮಾಡಿ ಹುಷಾರಿಲ್ಲ ಎಂದು ಹೇಳಿದ್ದರು. ಅದೇ ಕಡೆಯ ಕರೆ, ಆ ನಂತರ ಮತ್ತೆ ಕರೆಯೇ ಬರದಿರೋದ್ರಿಂದ ಆತಂಕಕ್ಕೀಡಾದ ಕುಟುಂಬಕ್ಕೆ ಡಿಸೆಂಬರ್ 4ಕ್ಕೆ ಒಂದು ಟೆಲಿಗ್ರಾಂ ಬಂತು. ಕಡೆಗೂ ಪತಿಯಿಂದ ಟೆಲಿಗ್ರಾಂ ಬಂತು ಎಂದುಕೊಂಡಿದ್ದ ಪತ್ನಿಗೆ ದೊಡ್ಡ ಆಘಾತವೇ ಕಾದಿತ್ತು.
ಆ ಟೆಲಿಗ್ರಾಂನಲ್ಲಿ ಉತ್ತಯ್ಯ ಸೈನ್ಯದ ಯುನಿಟ್ನಲ್ಲಿಲ್ಲ ಊರಲ್ಲಿದ್ರೆ ಕಳುಹಿಸಿಕೊಡಿ ಎಂದು ಬರೆಯಲಾಗಿತ್ತು. ಆ ಸುದ್ದಿ ಕೇಳಿ ಶಾಕ್ಗೆ ಒಳಗಾದ ಯೋಧ ಉತ್ತಯ್ಯನ ಗರ್ಭಿಣಿ ಪತ್ನಿಗೆ ಡೆಲಿವರಿಯಾಗಿ ಮಗು ಕೂಡ ಸಾವನ್ನಪ್ಪಿತ್ತು. ದಿನ ಕಳೆದಂತೆ ಸುಧಾರಿಸಿಕೊಂಡು ಪತಿಗಾಗಿ ಹುಡುಕಾಟ ನಡೆಸಿ ಸೈನ್ಯದ ಯುನಿಟ್ಗೂ ಹೋಗಿ ಬಂದರೂ ಪತಿಯ ಸುಳಿವೇ ಸಿಗಲಿಲ್ಲ. ಕಡೆಗೆ ಸೇನೆ ಜೂನ್ 14ಕ್ಕೆ ಉತ್ತಯ್ಯ ನಿಧನರಾಗಿದ್ದಾರೆ ಎಂದು ಪತ್ರ ಕಳುಹಿಸಿದ್ದರು.

ಪತ್ರ ಕಳುಹಿಸಿದ ನಂತರ 2010ರಿಂದ ಯೋಧನ ಪತ್ನಿಗೆ ಪಿಂಚಣಿ ಕೊಡುವುದಕ್ಕೆ ಶುರು ಮಾಡಿದ ಸರ್ಕಾರ ಮೃತದೇಹವಾಗಲಿ, ಎಲ್ಲಿ, ಹೇಗೆ ನಿಧನರಾದರು ಎಂದಾಗಲೀ ಯೋಧನ ಕುಟುಂಬಕ್ಕೆ ಮಾಹಿತಿಯೇ ಕೊಟ್ಟಿಲ್ಲ. ಹೀಗಾದರೆ ಹೇಗೆ ಸೈನ್ಯ ನಂಬಿ ಯೋಧರನ್ನಾಗಿ ದೇಶ ಸೇವೆಗೆ ನಮ್ಮವರನ್ನು ಕಳುಹಿಸೋದು ಎಂದು ಪಾರ್ವತಿ ಹಿತೈಷಿಗಳು ಪ್ರಶ್ನಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್…
‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.