ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ.

1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು ಗೊತ್ತಿಲ್ಲ. ಸೇನೆಯವರು ಮೊದಲು ಉತ್ತಯ್ಯ ಮಿಸ್ಸಿಂಗ್ ಎಂದು, ನಂತರ ಅವರು ನಿಧನರಾಗಿದ್ದಾರೆ ಎಂದು ಹೇಳಿದ್ದರು. ಅದಕ್ಕೆ ಸಾಕ್ಷಿ ಕೊಡಿ ಎಂದು ಪಾರ್ವತಿ ಇದುವರೆಗೂ ಪತಿಗಾಗಿ ಕಾಯುತ್ತಿದ್ದಾರೆ.

ಆಗಸ್ಟ್ 1999ರಂದು, ಉತ್ತರಪ್ರದೇಶದಲ್ಲಿ ಸ್ನಿಗ್ನಲ್ ಬೆಟಾಲಿಯನ್ನಲ್ಲಿ ಲಾನ್ಸ್ ನಾಯಕ್ ಆಗಿದ್ದ ಉತ್ತಯ್ಯ ಮನೆಗೆ ಬಂದಿದ್ದರು. 20 ದಿನ ಇದ್ದು ಗರ್ಭಿಣಿ ಪತ್ನಿಗೆ ದೇಶ ಸೇವೆ ಮುಗಿಸಿ ಬೇಗ ಹಿಂದಿರುಗಿ ಬರುತ್ತೇನೆ ಎಂದು ಹೇಳಿ ಅಲಹಾಬಾದ್ನ ತನ್ನ ಯುನಿಟ್ಗೆ ವಾಪಾಸ್ ಹೋಗಿದ್ದರು. ಬಳಿಕ ನವೆಂಬರ್ 21ರಂದು ಪತ್ನಿಗೆ ಕರೆ ಮಾಡಿ ಹುಷಾರಿಲ್ಲ ಎಂದು ಹೇಳಿದ್ದರು. ಅದೇ ಕಡೆಯ ಕರೆ, ಆ ನಂತರ ಮತ್ತೆ ಕರೆಯೇ ಬರದಿರೋದ್ರಿಂದ ಆತಂಕಕ್ಕೀಡಾದ ಕುಟುಂಬಕ್ಕೆ ಡಿಸೆಂಬರ್ 4ಕ್ಕೆ ಒಂದು ಟೆಲಿಗ್ರಾಂ ಬಂತು. ಕಡೆಗೂ ಪತಿಯಿಂದ ಟೆಲಿಗ್ರಾಂ ಬಂತು ಎಂದುಕೊಂಡಿದ್ದ ಪತ್ನಿಗೆ ದೊಡ್ಡ ಆಘಾತವೇ ಕಾದಿತ್ತು.
ಆ ಟೆಲಿಗ್ರಾಂನಲ್ಲಿ ಉತ್ತಯ್ಯ ಸೈನ್ಯದ ಯುನಿಟ್ನಲ್ಲಿಲ್ಲ ಊರಲ್ಲಿದ್ರೆ ಕಳುಹಿಸಿಕೊಡಿ ಎಂದು ಬರೆಯಲಾಗಿತ್ತು. ಆ ಸುದ್ದಿ ಕೇಳಿ ಶಾಕ್ಗೆ ಒಳಗಾದ ಯೋಧ ಉತ್ತಯ್ಯನ ಗರ್ಭಿಣಿ ಪತ್ನಿಗೆ ಡೆಲಿವರಿಯಾಗಿ ಮಗು ಕೂಡ ಸಾವನ್ನಪ್ಪಿತ್ತು. ದಿನ ಕಳೆದಂತೆ ಸುಧಾರಿಸಿಕೊಂಡು ಪತಿಗಾಗಿ ಹುಡುಕಾಟ ನಡೆಸಿ ಸೈನ್ಯದ ಯುನಿಟ್ಗೂ ಹೋಗಿ ಬಂದರೂ ಪತಿಯ ಸುಳಿವೇ ಸಿಗಲಿಲ್ಲ. ಕಡೆಗೆ ಸೇನೆ ಜೂನ್ 14ಕ್ಕೆ ಉತ್ತಯ್ಯ ನಿಧನರಾಗಿದ್ದಾರೆ ಎಂದು ಪತ್ರ ಕಳುಹಿಸಿದ್ದರು.

ಪತ್ರ ಕಳುಹಿಸಿದ ನಂತರ 2010ರಿಂದ ಯೋಧನ ಪತ್ನಿಗೆ ಪಿಂಚಣಿ ಕೊಡುವುದಕ್ಕೆ ಶುರು ಮಾಡಿದ ಸರ್ಕಾರ ಮೃತದೇಹವಾಗಲಿ, ಎಲ್ಲಿ, ಹೇಗೆ ನಿಧನರಾದರು ಎಂದಾಗಲೀ ಯೋಧನ ಕುಟುಂಬಕ್ಕೆ ಮಾಹಿತಿಯೇ ಕೊಟ್ಟಿಲ್ಲ. ಹೀಗಾದರೆ ಹೇಗೆ ಸೈನ್ಯ ನಂಬಿ ಯೋಧರನ್ನಾಗಿ ದೇಶ ಸೇವೆಗೆ ನಮ್ಮವರನ್ನು ಕಳುಹಿಸೋದು ಎಂದು ಪಾರ್ವತಿ ಹಿತೈಷಿಗಳು ಪ್ರಶ್ನಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
KOLAR NEWS PAPER 27-12-2022
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…