ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ.

1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು ಗೊತ್ತಿಲ್ಲ. ಸೇನೆಯವರು ಮೊದಲು ಉತ್ತಯ್ಯ ಮಿಸ್ಸಿಂಗ್ ಎಂದು, ನಂತರ ಅವರು ನಿಧನರಾಗಿದ್ದಾರೆ ಎಂದು ಹೇಳಿದ್ದರು. ಅದಕ್ಕೆ ಸಾಕ್ಷಿ ಕೊಡಿ ಎಂದು ಪಾರ್ವತಿ ಇದುವರೆಗೂ ಪತಿಗಾಗಿ ಕಾಯುತ್ತಿದ್ದಾರೆ.

ಆಗಸ್ಟ್ 1999ರಂದು, ಉತ್ತರಪ್ರದೇಶದಲ್ಲಿ ಸ್ನಿಗ್ನಲ್ ಬೆಟಾಲಿಯನ್ನಲ್ಲಿ ಲಾನ್ಸ್ ನಾಯಕ್ ಆಗಿದ್ದ ಉತ್ತಯ್ಯ ಮನೆಗೆ ಬಂದಿದ್ದರು. 20 ದಿನ ಇದ್ದು ಗರ್ಭಿಣಿ ಪತ್ನಿಗೆ ದೇಶ ಸೇವೆ ಮುಗಿಸಿ ಬೇಗ ಹಿಂದಿರುಗಿ ಬರುತ್ತೇನೆ ಎಂದು ಹೇಳಿ ಅಲಹಾಬಾದ್ನ ತನ್ನ ಯುನಿಟ್ಗೆ ವಾಪಾಸ್ ಹೋಗಿದ್ದರು. ಬಳಿಕ ನವೆಂಬರ್ 21ರಂದು ಪತ್ನಿಗೆ ಕರೆ ಮಾಡಿ ಹುಷಾರಿಲ್ಲ ಎಂದು ಹೇಳಿದ್ದರು. ಅದೇ ಕಡೆಯ ಕರೆ, ಆ ನಂತರ ಮತ್ತೆ ಕರೆಯೇ ಬರದಿರೋದ್ರಿಂದ ಆತಂಕಕ್ಕೀಡಾದ ಕುಟುಂಬಕ್ಕೆ ಡಿಸೆಂಬರ್ 4ಕ್ಕೆ ಒಂದು ಟೆಲಿಗ್ರಾಂ ಬಂತು. ಕಡೆಗೂ ಪತಿಯಿಂದ ಟೆಲಿಗ್ರಾಂ ಬಂತು ಎಂದುಕೊಂಡಿದ್ದ ಪತ್ನಿಗೆ ದೊಡ್ಡ ಆಘಾತವೇ ಕಾದಿತ್ತು.
ಆ ಟೆಲಿಗ್ರಾಂನಲ್ಲಿ ಉತ್ತಯ್ಯ ಸೈನ್ಯದ ಯುನಿಟ್ನಲ್ಲಿಲ್ಲ ಊರಲ್ಲಿದ್ರೆ ಕಳುಹಿಸಿಕೊಡಿ ಎಂದು ಬರೆಯಲಾಗಿತ್ತು. ಆ ಸುದ್ದಿ ಕೇಳಿ ಶಾಕ್ಗೆ ಒಳಗಾದ ಯೋಧ ಉತ್ತಯ್ಯನ ಗರ್ಭಿಣಿ ಪತ್ನಿಗೆ ಡೆಲಿವರಿಯಾಗಿ ಮಗು ಕೂಡ ಸಾವನ್ನಪ್ಪಿತ್ತು. ದಿನ ಕಳೆದಂತೆ ಸುಧಾರಿಸಿಕೊಂಡು ಪತಿಗಾಗಿ ಹುಡುಕಾಟ ನಡೆಸಿ ಸೈನ್ಯದ ಯುನಿಟ್ಗೂ ಹೋಗಿ ಬಂದರೂ ಪತಿಯ ಸುಳಿವೇ ಸಿಗಲಿಲ್ಲ. ಕಡೆಗೆ ಸೇನೆ ಜೂನ್ 14ಕ್ಕೆ ಉತ್ತಯ್ಯ ನಿಧನರಾಗಿದ್ದಾರೆ ಎಂದು ಪತ್ರ ಕಳುಹಿಸಿದ್ದರು.

ಪತ್ರ ಕಳುಹಿಸಿದ ನಂತರ 2010ರಿಂದ ಯೋಧನ ಪತ್ನಿಗೆ ಪಿಂಚಣಿ ಕೊಡುವುದಕ್ಕೆ ಶುರು ಮಾಡಿದ ಸರ್ಕಾರ ಮೃತದೇಹವಾಗಲಿ, ಎಲ್ಲಿ, ಹೇಗೆ ನಿಧನರಾದರು ಎಂದಾಗಲೀ ಯೋಧನ ಕುಟುಂಬಕ್ಕೆ ಮಾಹಿತಿಯೇ ಕೊಟ್ಟಿಲ್ಲ. ಹೀಗಾದರೆ ಹೇಗೆ ಸೈನ್ಯ ನಂಬಿ ಯೋಧರನ್ನಾಗಿ ದೇಶ ಸೇವೆಗೆ ನಮ್ಮವರನ್ನು ಕಳುಹಿಸೋದು ಎಂದು ಪಾರ್ವತಿ ಹಿತೈಷಿಗಳು ಪ್ರಶ್ನಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…
ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ Indian Premier League (IPL) ಪಂದ್ಯಗಳ ಸಮಯದಲ್ಲಿ Bengaluru ನಲ್ಲಿ ದೊಡ್ಡ ಮಟ್ಟದ ಟಿಕೆಟ್ ಕಳ್ಳಬಜಾರ್ (black market) ಸ್ಕ್ಯಾಮ್ ಬೆಳಕಿಗೆ ಬಂದಿದೆ. ವಿಶೇಷವಾಗಿ Bengaluru ನಲ್ಲಿ, ಟಿಕೆಟ್ಗಳಿಗೆ ಭಾರಿ ಬೇಡಿಕೆ ಇರುತ್ತದೆ. ಈ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಕೆಲವು ಮಂದಿ “ಟಿಕೆಟ್ ಸ್ಕ್ಯಾಮ್” ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? RCB vs…
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…