News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಯಾವ ತಪ್ಪು ಮಾಡದೇ ಇದ್ದರೂ 93ರ ವೃದ್ಧೆಯನ್ನ ಅರೆಸ್ಟ್ ಮಾಡಿ ಬಂಧಿಸಿದ ಪೊಲೀಸರು…ಕಾರಣ?

70

ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ.
ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ ವೃದ್ಧೆಗೆ ಇತ್ತು. ಈ ಹಿನ್ನೆಲೆಯಲ್ಲಿ ಈಗ ಮೊಮ್ಮಗಳು ಅಜ್ಜಿಯ ಕೋರಿಕೆಯನ್ನು ಇಡೇರಿಸಲು ಯುಕೆ ನ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರಿಗೆ ಮನವಿ ಮಾಡಿದ್ದು, ಪೊಲೀಸರು ವೃದ್ಧೆಯನ್ನು ಬಂಧಿಸಿದ್ದಾರೆ.

ಅಜ್ಜಿಯನ್ನು ಪೋಲೀಸರು ಬಂಧಿಸಿ ಅವರ ಆಸೆ ತೀರಿಸಿದ್ದಕ್ಕೆ ಮೊಮ್ಮಗಳು ಪಾಮ್ ಸ್ಮಿತ್ ಟ್ವಿಟ್ಟರ್ ನಲ್ಲಿ ಖಾಕಿ ಪಡೆಗೆ ಧನ್ಯವಾದ ಅರ್ಪಿಸಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಅಜ್ಜಿ ಅನಾರೋಗ್ಯಕ್ಕೆ ತುತ್ತಾಗಿದ್ದಾಗ ತನ್ನ ಈ ಆಸೆ ಬಗ್ಗೆ ಸ್ಮಿತ್ ಬಳಿ ಹೇಳಿದ್ದರು. ತನ್ನ ಅಜ್ಜಿಯ ಆರೋಗ್ಯವು ಏರುಪೇರು ಆಗುತಿತ್ತು. ತನ್ನ ಜೀವನದ ಉದ್ದಕ್ಕೂ ಚೆನ್ನಾಗಿದ್ದರಿಂದ ಯಾವುದಾದರು ಕಹಿ ಅನುಭವವನ್ನು ಹೊಂದಬೇಕೆಂದು ಎಂದು ಬಯಸಿದ್ದರು.

ಈ ಹಿನ್ನಲೆಯಲ್ಲಿ ವಯಸ್ಸಾದರೂ ತನ್ನನ್ನು ಬಂಧಿಸಬೇಕೆಂದು ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಈಗ ಆ ಅಜ್ಜಿ ಪೋಲೀಸರ ಬಂಧನದಿಂದ ಖುಷಿಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ಈ ಬಗ್ಗೆ ಮ್ಯಾಂಚೆಸ್ಟರ್ ಪೊಲೀಸ್ ಅಧಿಕಾರಿ ಮಾತನಾಡಿ, ವೃದ್ಧೆಯ ಆಸೆಯನ್ನು ನಾವು ಈಡೇರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಅವರ ಜೀವನದಲ್ಲಿ ನೆನಪಿಟ್ಟುಕೊಳ್ಳುವ ಒಂದು ದಿನವನ್ನು ನಾವು ನೀಡಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಸಿನಿಮಾ, ಸುದ್ದಿ

    ಡಾ।ರಾಜಕುಮಾರ್ ಜೊತೆ ನಟಿಸಿದ ಸರಿತಾ ದುಬೈಗೆ ಹೋಗಲು ಕಾರಣವೇನು? ಅವರ ಜೀವನದಲ್ಲಿ ಅಂಥಾದ್ದು ಏನಾಗಿತ್ತು?

    ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…

  • Health

    ವಿದೇಶದಲ್ಲಿ ಬೇಡಿಕೆಯನ್ನು ಪಡೆದ ನುಗ್ಗೆ ಸೊಪ್ಪಿನ ಪುಡಿ…!

    ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್‌ ಆಗಿ ಪರಿವರ್ತಿಸಿದರೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…

  • ಆಧ್ಯಾತ್ಮ

    ಮಹಿಳೆಯರು ತೆಂಗಿನ ಕಾಯಿ ಒಡೆಯಬಾರದು ಏಕೆ ಗೊತ್ತಾ?ಇಲ್ಲಿದೆ ನೋಡಿ ಕಾರಣ…

    ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…