ಸುದ್ದಿ

ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

49

ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ.

2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ ಬಂತು, ಯಾರು ವರ್ಗಾವಣೆ ಮಾಡಿದರು ಎಂಬುದರ ಬಗ್ಗೆ ತಲೆ ಕೆಡಿಸಿಕೊಳ್ಳದ ದಂಪತಿ ಆಸ್ತಿಯನ್ನು ಖರೀದಿ, ಮಗಳ ಮದುವೆ ಸೇರಿದಂತೆ ಹಣವನ್ನು ಹಿಗ್ಗಾಮುಗ್ಗಾ ಖರ್ಚು ಮಾಡಲು ಶುರು ಮಾಡಿದರು. ಹಣವನ್ನು ವಾಪಸ್ ಮರಳಿಸಲು ಪ್ರಯತ್ನಿಸಲಿಲ್ಲ.

ಆದರೆ ಹಣ ಕಳಿಸಿದವರಿಗೆ ತಾಪತ್ರಯ ಶುರುವಾಗಿದ್ದು 8 ತಿಂಗಳ ನಂತರ. ಸಂಸದರ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿಯಡಿ ಮೂಲಸೌಕರ್ಯ ಯೋಜನೆಗಾಗಿ ಲೋಕೋಪಯೋಗಿ ಇಲಾಖೆ ಕಳುಹಿಸಿದ ಹಣ ಇದಾಗಿತ್ತು. ಲೋಕೋಪಯೋಗಿ ಅಧಿಕಾರಿಗಳು ತಮ್ಮ ಇಲಾಖೆಯ ಇಂಜಿನಿಯರ್ ಅವರ ಕಾರ್ಪೋರೇಷನ್ ಬ್ಯಾಂಕಿನ ಅಕೌಂಟಿಗೆ ಕಳಿಸುವ ಬದಲು ತಪ್ಪಾಗಿ ಗುಣಶೇಖರನ್ ಅವರಿಗೆ ಕಳಿಸಿಬಿಟ್ಟಿದ್ದರು.

ಸರ್ಕಾರಿ ಇಲಾಖೆಯಾದ ಕಾರಣ 8 ತಿಂಗಳುಗಳು ಯಾರೊಬ್ಬರು ತಲೆಕೆಡಿಸಿಕೊಂಡಿರಲಿಲ್ಲ. ಇಂಜಿನಿಯರ್ ಅವರ ಅಕೌಂಟಿಗೆ ಹಲವು ತಿಂಗಳ ಕಾಲ ಹಣ ಬರದ ಕಾರಣ ಇಲಾಖೆಯ ಅಧಿಕಾರಿಗಳು ಬ್ಯಾಂಕ್ ಸಿಬ್ಬಂದಿ ಮೂಲಕ ಅಕೌಂಟ್ ಪರಿಶೀಲಿಸಿದಾಗ ಬೇರೆ ಅಕೌಂಟಿಗೆ ಹಣ ವರ್ಗಾವಣೆಯಾಗಿರುವುದು ತಿಳಿಯಿತು. ನಂತರ ಗುಣಶೇಖರ್ ಅವರನ್ನು ಸಂಪರ್ಕಿಸಿ ಹಣ ಮರು ವರ್ಗಾವಣೆ ಮಾಡಲು ತಿಳಿಸಿ ಕಾಲಾವಕಾಶವನ್ನು ನೀಡಿದ್ದರು. ಆದರೆ ನಿಗದಿತ ಕಾಲಾವಕಾಶದಲ್ಲಿಯೂ ಹಣ ಮರಳಿಸದ ಕಾರಣ ಇಲಾಖೆಯು ಗುಣ ಶೇಖರ್ ಅವರ ಮೇಲೆ 2015 ರಲ್ಲಿ ದೂರು ದಾಖಲಿಸಿದರು. ಸರ್ಕಾರಿ ಹಣವನ್ನು ದುರುಪಯೋಗ ಪಡಿಸಿಕೊಂಡ ಕಾರಣ ಸ್ಥಳೀಯ ನ್ಯಾಯಾಲಯ ಜಂಟಿ ಖಾತೆ ಹೊಂದಿದ್ದ ಗುಣಶೇಖರ್ ದಂಪತಿಗೆ 3 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ‘ಮುಟ್ಟಿದರೆ ಮುನಿ’ ಗಿಡ ಈ ಔಷಧೀಯ ಗುಣಗಳನ್ನು ಹೊಂದಿದೆ!

    ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….

  • ಉಪಯುಕ್ತ ಮಾಹಿತಿ

    ನಿಮ್ಮ ಮೊಬೈಲ್ ಕಳೆದು ಹೋದರೆ, ತಲೆಕೆಡಿಸಕೊಳ್ಳಬೇಡಿ ಜಸ್ಟ್ ಹೀಗೆ ಮಾಡಿ ಸಾಕು. ನಿಮ್ಮ ಮೊಬೈಲ್ ಸಿಗುತ್ತದೆ..!

    ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…

  • ಜ್ಯೋತಿಷ್ಯ

    ಶುಕ್ರವಾರದ ಈ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ…

  • ಸುದ್ದಿ

    ಡೈನೋಸಾರ್ ಯುಗದ ತಿಮಿಂಗಿಲ ಪತ್ತೆ..!ಈ ವಿಚಿತ್ರ ಜೀವಿಯ ಬಗ್ಗೆ, ವಿಶ್ವದಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ…

    ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

  • ಆರೋಗ್ಯ

    ‘ಬೀಟ್‌ರೂಟ್‌’ನಲ್ಲಿ ಇರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್‌ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್‌ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು