ಸುದ್ದಿ

ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಟ್ರೈಲರ್ ಗೆ ಸ್ಟಾರ್ ನಟರ ಅಭಿಪ್ರಾಯವೇನು ಗೊತ್ತಾ,.!

26

ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ. ಅವನೇ ಶ್ರೀಮನ್ನಾರಾಯಣನ ಟ್ರೈಲರ್ ನೋಡಿ ಸ್ಟಾರ್ಸ್ ಹೇಳಿದ್ದೇನು?

“ಅವನೇ ಶ್ರೀಮನ್ನಾರಾಯಣ ಅದ್ಬುತವಾದ ಟ್ರೈಲರ್. ಚಿತ್ರತಂಡದ ಶ್ರಮ ಈ ಟ್ರೈಲರ್ ನಲ್ಲಿ ಕಾಣುತ್ತಿದೆ. ರಕ್ಷಿತ್ ಶೆಟ್ಟಿ ಮತ್ತೆ ನಮ್ಮನ್ನು ಹೆಮ್ಮೆ ಪಡುವಂತೆ ಮಾಡಿದ್ದೀರಿ. ಒಳ್ಳೆಯದಾಗಲಿ” ಎಂದು ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಹೇಳಿದ್ದಾರೆ.

ಟ್ರೈಲರ್ ನ ಪ್ರತಿಯೊಂದು ಫ್ರೇಮ್ ನಲ್ಲಿ ಚಿತ್ರತಂಡದ ಕಠಿಣ ಶ್ರಮ ಎದ್ದು ಕಾಣುತ್ತಿದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ” ಎಂದು ನಟ ನಿರೂಪ್ ಭಂಡಾರಿ ಹೇಳಿದ್ದಾರೆ. ಇನ್ನು ಅನೂಪ್ ಭಂಡಾರಿ ಕೂಡ ಹಾಡಿ ಹೊಗಳಿದ್ದಾರೆ. “ಒಂದು ಹಿಟ್ ನೀಡಿದ ನಂತರ ಒಂದು ಚಿತ್ರಕ್ಕಾಗಿ ಮೂರು ವರ್ಷಗಳನ್ನು ಕಳೆಯುವುದು ನಿಜವಾದ ಪ್ಯಾಶನ್. ಇಡೀ ತಂಡಕ್ಕೆ ಬೆಸ್ಟ್ ವಿಶಸ್” ಎಂದು ಹೇಳಿದ್ದಾರೆ.

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ “ಅವನೇ ಶ್ರೀಮನ್ನಾರಾಯಣ ಅದ್ಬುತವಾದ ಟ್ರೈಲರ್. ಚಿತ್ರತಂಡದ ಶ್ರಮ ಈ ಟ್ರೈಲರ್ ನಲ್ಲಿ ಕಾಣುತ್ತಿದೆ. ರಕ್ಷಿತ್ ಶೆಟ್ಟಿ ಮತ್ತೆ ನಮ್ಮನ್ನು ಹೆಮ್ಮೆ ಪಡುವಂತೆ ಮಾಡಿದ್ದೀರಿ. ಒಳ್ಳೆಯದಾಗಲಿ” ಎಂದು ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಹೇಳಿದ್ದಾರೆ.

ಅವನೇ ಶ್ರೀಮನ್ನಾರಯಣ’ನನ್ನು ಹೊಗಳಿದ ಸುದೀಪ್ “ಒಂದು ದಿನ ಮುಂಚಿತವಾಗಿಯೆ ಟ್ರೈಲರ್ ಕಳುಹಿಸಿದ್ದಕ್ಕೆ ಧನ್ಯವಾದಗಳು ರಕ್ಷಿತೆ ಶೆಟ್ಟಿ. ಒಂದು ಪದದಲ್ಲಿ ಹೇಳಬೇಕೆಂದರೆ ಇದು ಕ್ರಾಫ್ಟೆಡ್. ಒಂದು ಕೇಂದ್ರ ಬಿಂದು ತಲುಪಲು ಒಂದು ತಂಡ ಒಟ್ಟಿಗೆ ಇದ್ದು, ಒಟ್ಟಿಗೆ ಕೆಲಸ ಮಾಡಿ, ಒಟ್ಟಿಗೆ ಯೋಚಿಸಿ ಮತ್ತು ಒಟ್ಟಿಗೆ ಕಾರ್ಯಗತಕ್ಕೆ ತಂದಿದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ” ಎಂದು ಹೇಳಿದ್ದಾರೆ

ಮಲಯಾಳಂ ನಟ ನಿವಿನ್ ಪೌಲಿ “ಪ್ರತಿ ಫ್ರೇಮ್ ಕೂಡ ಅದ್ಭುತವಾಗಿದೆ. ಮಲಯಾಳಂ ಚಿತ್ರರಂಗಕ್ಕೆ ಸ್ವಾಗತ. ಅದ್ದೂರಿಯಾದ ದೃಶ್ಯ ವಿದು” ಎಂದು ಮಲಯಾಳಂ ಟ್ರೈಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ತಮಿಳು ನಟ ಧನುಷ್ “ಚಮತ್ಕಾರ, ಸಾಹಾಸ, ಕ್ರಿಯೆ ಮತ್ತು ಭವ್ಯತೆ ಎಲ್ಲವನ್ನು ಹೊಂದಿದೆ ಅಭಿನಂದನೆಗಳು. ಇಡಿ ತಂಡಕ್ಕೆ ಒಳ್ಳೆಯದಾಗಲಿ” ಎಂದು ತಮಿಳು ನಟ ಧನುಷ್ ಚಿತ್ರದ ಟ್ರೈಲರ್ ರಿಲೀಸ್ ಮಾಡಿ ಮೆಚ್ಚಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಆ ದಿನ ಈ ಯಾಗ ಪೂರ್ಣವಾಗಿ ನಡೆದಿದ್ದರೆ,ಈ ದಿನ ನಾವು ನೋಡಲಿಕ್ಕೆ ಹಾವಿನ ಸಂತತಿಯೇ ಇರುತ್ತಿರಲಿಲ್ಲ!ಯಾಕೆ ಗೊತ್ತಾ..?ಈ ಲೇಖನಿ ಓದಿ…

    ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಡಲೆ ಕಾಯಿಯಲ್ಲಿದೆ ಈ 6 ಅದ್ಭುತ ಆರೋಗ್ಯದ ಗುಟ್ಟುಗಳು..!

    ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…

  • ಆರೋಗ್ಯ

    ಸಕ್ಕರೆ(ಶುಗರ್) ಕಾಯಿಲೆಗೆ ಉತ್ತಮ ಔಷದಿಯಾಗಿರುವ ಮೆಂತೆ …! ಬಗ್ಗೆ ತಿಳಿಯಲು ಈ ಲೇಖನ ಓದಿ..

    ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.

  • ಜ್ಯೋತಿಷ್ಯ

    ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….

  • ಸುದ್ದಿ

    ಅಪರೂಪದ ದೃಶ್ಯ ಪ್ರತಿನಿತ್ಯ ಬೆಕ್ಕಿನ ಮರಿಗೆ ಹಾಲುಣಿಸುತ್ತಿರುವ ನಾಯಿ.

    ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…

  • ಸುದ್ದಿ

    ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

    ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…