ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು ಬಾಯಿಗೆ ರುಚಿಸದೆ ಇದ್ದರೂ ಇದರಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅವಕಾಡೊ ಹಣ್ಣನ್ನು ಹೆಚ್ಚಿನವರು ತಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಲು ಹಿಂಜರಿಯುವರು. ಬೆಳಗ್ಗೆ ಉಪಾಹಾರಕ್ಕೆ ಅಥವಾ ರಾತ್ರಿ ಊಟದ ವೇಳೆ ಅವಕಾಡೊ ಸೇವನೆ ಮಾಡುವಂತಹ ಜನರ ಸಂಖ್ಯೆಯು ಕಡಿಮೆ. ಇದರ ರುಚಿಯ ಹೊರತಾಗಿಯೂ ಇದರಲ್ಲಿ ಯಾವ ಲಾಭಗಳು ಇವೆ ಎಂದು ನಾವು ಇಲ್ಲಿ ತಿಳಿಯೋಣ.

ಅವಕಾಡೊದ ಆಂಟಿಆಕ್ಸಿಡೆಂಟ್ ಯಾವುದಕ್ಕೆ ನೆರವಾಗುವುದು : ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇದ್ದರೆ ಆಗ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆ ಮಾಡುವ ಅಂಶಗಳು ಅವಕಾಡೊದಲ್ಲಿ ಇದೆ ಎಂದು ಸಂಶೋಧನೆಯಲ್ಲಿ ಸಾಬೀತಾಗಿದೆ. ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಬಗ್ಗೆ ಜನರಿಗೆ ಹೆಚ್ಚಾಗಿ ತಿಳಿದಿಲ್ಲ. ಕೆಟ್ಟ ಕೊಲೆಸ್ಟ್ರಾಲ್ ಎಂದರೆ ಆಕ್ಸಿಡೀಕೃತ ಕಡಿಮೆ ಸಾಂದ್ರತೆಯಲಿಪೊಪ್ರೋಟೀನ್(ಎಲ್ ಡಿಎಲ್) ಮತ್ತು ಸಣ್ಣ ಸಾಂದ್ರತೆಯ ಎಲ್ ಡಿಎಲ್ ಕಣಗಳು. ಅದೇ ಒಳ್ಳೆಯಕೊಲೆಸ್ಟ್ರಾಲ್ ಎಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್(ಎಚ್ ಡಿಎಲ್).

ಸಂಶೋಧನೆ : ಸುಮಾರು21ರ ಹರೆಯದಿಂದ 70ರ ಹರೆಯದ 45 ಪುರುಷರು ಹಾಗೂ ಮಹಿಳೆಯರನ್ನು ಐದು ವಾರಗಳ ಕಾಲ ಅವಕಾಡೊ ನೀಡಿ ಪರೀಕ್ಷೆ ಮಾಡಲಾಯಿತು. ಈ ಪರೀಕ್ಷೆಗೆ ಒಳಪಟ್ಟವರು ಎಲ್ಲವರು ಅಧಿಕ ತೂಕ ಅಥವಾ ಬೊಜ್ಜು ಮತ್ತು ಎಲ್ಡಿಎಲ್ ಮಟ್ಟವನ್ನು ಹೆಚ್ಚು ಹೊಂದಿದ್ದರು. ಇವರೆಲ್ಲರಿಗೂ ಕೊಲೆಸ್ಟ್ರಾಲ್ ಕಡಿಮೆ ಮಾಡುವಂತಹ ಎರಡು ಬಗೆಯ ಆಹಾರ ನೀಡಲಾಯಿತು. ಇದರಲ್ಲಿ ಒಂದು ಶೇ.24ರಷ್ಟು ಕೊಬ್ಬಿನಿಂದ ಪಡೆದ ಕ್ಯಾಲರಿಯ ಹೊಂದಿರುವ ಕಡಿಮೆ ಕೊಬ್ಬಿನ ಆಹಾರ ಮತ್ತು ಎರಡನೇಯದು ಮಧ್ಯಮ ಕೊಬ್ಬು ಹೊಂದಿರುವ ಕೊಬ್ಬಿನಿಂದ ಶೇ.36ರಷ್ಟುಕ್ಯಾಲರಿ ಪಡೆಯುವ ಆಹಾರ ನೀಡಲಾಯಿತು. ಮಧ್ಯಮ ಕೊಬ್ಬು ಹೊಂದಿರುವ ಆಹಾರ ಕ್ರಮದಲ್ಲಿ ಒಂದು ಮಧ್ಯಮಗಾತ್ರದ ಅವಕಾಡೊ(136 ಗ್ರಾಂ) ನೀಡಲಾಯಿತು. ಇದರಿಂದ ಅಧ್ಯಯನಗಳು ಕಂಡುಕೊಂಡಿರುವಂತಹ ವಿಚಾರವೆಂದರೆ ದಿನಕ್ಕೊಂದು ಅವಕಾಡೊ ಸೇವಿಸಿದರೆ ದೇಹದಲ್ಲಿರುವ ಎಲ್ ಡಿಎಲ್ ಮಟ್ಟವನ್ನು ಕಡಿಮೆ ಮಾಡುತ್ತದೆ .

ದಿನಕ್ಕೊಂದು ಬೆಣ್ಣೆಹಣ್ಣು : ರಕ್ತನಾಳಗಳಲ್ಲಿ ಶೇಖರಣೆ ಆಗಿರುವ ಕೊಬ್ಬಿನ ಪದರಗಳಿಂದಾಗಿ ಅಧಿಕ ಸಂಖ್ಯೆಯ ಜನರು ಹೃದಯದ ಕಾಯಿಲೆಗಳಿಂದಾಗಿ ಸಾವನ್ನಪ್ಪುವರು. ಈ ಪದರ ನಿರ್ಮಾಣವನ್ನು ಕಡಿಮೆ ಮಾಡಿದರೆ ಆಗ ಹೃದಯದ ಕಾಯಿಲೆಗಳನ್ನು ಅರ್ಧದಷ್ಟುತಡೆಗಟ್ಟಿದಂತೆ. ದಿನಕ್ಕೆ ಒಂದು ಅವಕಾಡೊ ತಿಂದರೆ ಅದರ ಲಾಭಗಳು ಸಿಗುವುದು. ಆದರೆ ಬೇಗ ಇದರ ಲಾಭಪಡೆಯಲು ಹೆಚ್ಚಿನ ಮಟ್ಟದಲ್ಲಿ ಸೇವನೆ ಮಾಡಿದರೆ ಅವಕಾಡೊದಲ್ಲಿ ಇರುವಂತಹ 230 ಕ್ಯಾಲರಿಯು ತೂಕಹೆಚ್ಚಳಕ್ಕೆ ಕಾರಣವಾಗಬಹುದು ಮತ್ತು ಅದರಿಂದ ಸಿಗುವ ಲಾಭಗಳು ಸಿಗದೆ ಇರಬಹುದು. ಆದ್ದರಿಂದ ನಿಮ್ಮಆಹಾರ ಕ್ರಮದಲ್ಲಿ ಅವಕಾಡೊವನ್ನು ಸೇರಿಸಿಕೊಳ್ಳಿ ಮತ್ತು ಇದನ್ನು ಮುಂದುವರಿಸಿಕೊಂಡು ಹೋಗಿ. ಇದು ಆರೋಗ್ಯಕಾರಿ ಕೊಬ್ಬನ್ನು ನೀಡುವುದು ಮಾತ್ರವಲ್ಲದೆ, ಹೃದಯದ ಕಾಯಿಲೆ ಸಮಸ್ಯೆ ನಿವಾರಣೆಮಾಡುವುದು. ಆದರೆ ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ನೀವು ಇದನ್ನು ತುಂಬಾ ಮಿತ ಪ್ರಮಾಣದಲ್ಲಿಸೇವನೆ ಮಾಡಬೇಕು.
ಅವಕಾಡೊಆಹಾರ ಕ್ರಮದಲ್ಲಿ ಹೇಗೆ ಸೇರಿಸಿಕೊಳ್ಳುವುದು? 136 ಗ್ರಾಂ ಅವಕಾಡೊಎಂದರೆ ಅದು ಮೂರನೇ ಎರಡುಕಪ್ ನಷ್ಟು ಗ್ವಾಕಮೋಲ್ ಗೆ ಸಮಾನವಾಗಿದೆ. ಎರಡು ತುಂಡು ಅವಕಾಡೊಟೋಸ್ಟ್ ಅಥವಾ ಅವಕಾಡೊ ಚಾಕಲೇಟ್ಟ್ರಫ್ಫೆಲ್ ಗೆ ಸಮಾನ. ನೀವುಒಂದೇ ಸಲ ಇದನ್ನು ಸೇವನೆಮಾಡಬಹುದು. ಬೆಳಗ್ಗೆ ಕೆಲವು ತುಂಡುಅವಕಾಡೊ ಜತೆಗೆ ಮೊಟ್ಟೆ, ಗ್ವಾಕಮೋಲ್ಅನ್ನು ಮಧ್ಯಾಹ್ನದ ಊಟಕ್ಕೆ ಮತ್ತು ರಾತ್ರಿಗೆಅವಕಾಡೊ ಚಾಕಲೇಟ್ ಬಳಸಿಕೊಳ್ಳಬಹುದು. ನೀವುಇದನ್ನು ಪಾಲಿಸಿದರೆ ನಿಮ್ಮ ಹೃದಯದ ಆರೋಗ್ಯವುಚೆನ್ನಾಗಿರುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….
ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…