ಸುದ್ದಿ

ದೇಹದ ಕೆಟ್ಟ ಕೊಬ್ಬು ಕರಗಬೇಕೆಂದರೆ ದಿನ ನಿತ್ಯ ಈ ಹಣ್ಣನ್ನು ತಿಂದರೆ ಸಾಕು,.!

98

ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ  ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ  ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ  ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು ಬಾಯಿಗೆ ರುಚಿಸದೆ ಇದ್ದರೂ ಇದರಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅವಕಾಡೊ ಹಣ್ಣನ್ನು ಹೆಚ್ಚಿನವರು ತಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಲು ಹಿಂಜರಿಯುವರು. ಬೆಳಗ್ಗೆ ಉಪಾಹಾರಕ್ಕೆ ಅಥವಾ ರಾತ್ರಿ ಊಟದ ವೇಳೆ ಅವಕಾಡೊ ಸೇವನೆ ಮಾಡುವಂತಹ ಜನರ ಸಂಖ್ಯೆಯು ಕಡಿಮೆ. ಇದರ ರುಚಿಯ ಹೊರತಾಗಿಯೂ ಇದರಲ್ಲಿ ಯಾವ ಲಾಭಗಳು ಇವೆ ಎಂದು ನಾವು ಇಲ್ಲಿ ತಿಳಿಯೋಣ.

ಅವಕಾಡೊದ ಆಂಟಿಆಕ್ಸಿಡೆಂಟ್ ಯಾವುದಕ್ಕೆ ನೆರವಾಗುವುದು : ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇದ್ದರೆ ಆಗ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತದೆ. ಕೆಟ್ಟ ಕೊಲೆಸ್ಟ್ರಾಲ್  ನಿವಾರಣೆ ಮಾಡುವ ಅಂಶಗಳು  ಅವಕಾಡೊದಲ್ಲಿ ಇದೆ ಎಂದು ಸಂಶೋಧನೆಯಲ್ಲಿ  ಸಾಬೀತಾಗಿದೆ. ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಬಗ್ಗೆ ಜನರಿಗೆ ಹೆಚ್ಚಾಗಿ ತಿಳಿದಿಲ್ಲ. ಕೆಟ್ಟ ಕೊಲೆಸ್ಟ್ರಾಲ್ ಎಂದರೆ ಆಕ್ಸಿಡೀಕೃತ ಕಡಿಮೆ ಸಾಂದ್ರತೆಯಲಿಪೊಪ್ರೋಟೀನ್(ಎಲ್ ಡಿಎಲ್) ಮತ್ತು ಸಣ್ಣ ಸಾಂದ್ರತೆಯ ಎಲ್ ಡಿಎಲ್ ಕಣಗಳು. ಅದೇ ಒಳ್ಳೆಯಕೊಲೆಸ್ಟ್ರಾಲ್ ಎಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್(ಎಚ್ ಡಿಎಲ್).

ಸಂಶೋಧನೆ : ಸುಮಾರು21ರ ಹರೆಯದಿಂದ 70ರ ಹರೆಯದ 45 ಪುರುಷರು ಹಾಗೂ ಮಹಿಳೆಯರನ್ನು ಐದು ವಾರಗಳ ಕಾಲ ಅವಕಾಡೊ ನೀಡಿ ಪರೀಕ್ಷೆ ಮಾಡಲಾಯಿತು. ಈ ಪರೀಕ್ಷೆಗೆ ಒಳಪಟ್ಟವರು ಎಲ್ಲವರು ಅಧಿಕ ತೂಕ ಅಥವಾ ಬೊಜ್ಜು ಮತ್ತು ಎಲ್ಡಿಎಲ್ ಮಟ್ಟವನ್ನು ಹೆಚ್ಚು ಹೊಂದಿದ್ದರು. ಇವರೆಲ್ಲರಿಗೂ ಕೊಲೆಸ್ಟ್ರಾಲ್ ಕಡಿಮೆ ಮಾಡುವಂತಹ ಎರಡು ಬಗೆಯ ಆಹಾರ ನೀಡಲಾಯಿತು. ಇದರಲ್ಲಿ ಒಂದು ಶೇ.24ರಷ್ಟು ಕೊಬ್ಬಿನಿಂದ ಪಡೆದ ಕ್ಯಾಲರಿಯ ಹೊಂದಿರುವ ಕಡಿಮೆ ಕೊಬ್ಬಿನ ಆಹಾರ ಮತ್ತು ಎರಡನೇಯದು ಮಧ್ಯಮ ಕೊಬ್ಬು ಹೊಂದಿರುವ ಕೊಬ್ಬಿನಿಂದ ಶೇ.36ರಷ್ಟುಕ್ಯಾಲರಿ ಪಡೆಯುವ ಆಹಾರ ನೀಡಲಾಯಿತು. ಮಧ್ಯಮ ಕೊಬ್ಬು ಹೊಂದಿರುವ ಆಹಾರ ಕ್ರಮದಲ್ಲಿ ಒಂದು ಮಧ್ಯಮಗಾತ್ರದ ಅವಕಾಡೊ(136 ಗ್ರಾಂ) ನೀಡಲಾಯಿತು. ಇದರಿಂದ ಅಧ್ಯಯನಗಳು ಕಂಡುಕೊಂಡಿರುವಂತಹ ವಿಚಾರವೆಂದರೆ ದಿನಕ್ಕೊಂದು ಅವಕಾಡೊ ಸೇವಿಸಿದರೆ ದೇಹದಲ್ಲಿರುವ ಎಲ್ ಡಿಎಲ್ ಮಟ್ಟವನ್ನು ಕಡಿಮೆ ಮಾಡುತ್ತದೆ . 

ದಿನಕ್ಕೊಂದು ಬೆಣ್ಣೆಹಣ್ಣು : ರಕ್ತನಾಳಗಳಲ್ಲಿ ಶೇಖರಣೆ ಆಗಿರುವ ಕೊಬ್ಬಿನ ಪದರಗಳಿಂದಾಗಿ ಅಧಿಕ ಸಂಖ್ಯೆಯ ಜನರು ಹೃದಯದ ಕಾಯಿಲೆಗಳಿಂದಾಗಿ ಸಾವನ್ನಪ್ಪುವರು. ಈ ಪದರ ನಿರ್ಮಾಣವನ್ನು ಕಡಿಮೆ ಮಾಡಿದರೆ ಆಗ ಹೃದಯದ ಕಾಯಿಲೆಗಳನ್ನು ಅರ್ಧದಷ್ಟುತಡೆಗಟ್ಟಿದಂತೆ. ದಿನಕ್ಕೆ ಒಂದು ಅವಕಾಡೊ ತಿಂದರೆ ಅದರ ಲಾಭಗಳು ಸಿಗುವುದು. ಆದರೆ ಬೇಗ ಇದರ ಲಾಭಪಡೆಯಲು ಹೆಚ್ಚಿನ ಮಟ್ಟದಲ್ಲಿ ಸೇವನೆ ಮಾಡಿದರೆ ಅವಕಾಡೊದಲ್ಲಿ ಇರುವಂತಹ 230 ಕ್ಯಾಲರಿಯು ತೂಕಹೆಚ್ಚಳಕ್ಕೆ ಕಾರಣವಾಗಬಹುದು ಮತ್ತು ಅದರಿಂದ ಸಿಗುವ ಲಾಭಗಳು ಸಿಗದೆ ಇರಬಹುದು. ಆದ್ದರಿಂದ ನಿಮ್ಮಆಹಾರ ಕ್ರಮದಲ್ಲಿ ಅವಕಾಡೊವನ್ನು ಸೇರಿಸಿಕೊಳ್ಳಿ ಮತ್ತು ಇದನ್ನು ಮುಂದುವರಿಸಿಕೊಂಡು ಹೋಗಿ. ಇದು ಆರೋಗ್ಯಕಾರಿ ಕೊಬ್ಬನ್ನು ನೀಡುವುದು ಮಾತ್ರವಲ್ಲದೆ, ಹೃದಯದ ಕಾಯಿಲೆ ಸಮಸ್ಯೆ ನಿವಾರಣೆಮಾಡುವುದು. ಆದರೆ ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ನೀವು ಇದನ್ನು ತುಂಬಾ ಮಿತ ಪ್ರಮಾಣದಲ್ಲಿಸೇವನೆ ಮಾಡಬೇಕು.

ಅವಕಾಡೊಆಹಾರ ಕ್ರಮದಲ್ಲಿ ಹೇಗೆ ಸೇರಿಸಿಕೊಳ್ಳುವುದು? 136 ಗ್ರಾಂ ಅವಕಾಡೊಎಂದರೆ ಅದು ಮೂರನೇ ಎರಡುಕಪ್ ನಷ್ಟು ಗ್ವಾಕಮೋಲ್ ಗೆ ಸಮಾನವಾಗಿದೆ. ಎರಡು ತುಂಡು ಅವಕಾಡೊಟೋಸ್ಟ್ ಅಥವಾ ಅವಕಾಡೊ ಚಾಕಲೇಟ್ಟ್ರಫ್ಫೆಲ್ ಗೆ ಸಮಾನ. ನೀವುಒಂದೇ ಸಲ ಇದನ್ನು ಸೇವನೆಮಾಡಬಹುದು. ಬೆಳಗ್ಗೆ ಕೆಲವು ತುಂಡುಅವಕಾಡೊ ಜತೆಗೆ ಮೊಟ್ಟೆ, ಗ್ವಾಕಮೋಲ್ಅನ್ನು ಮಧ್ಯಾಹ್ನದ ಊಟಕ್ಕೆ ಮತ್ತು ರಾತ್ರಿಗೆಅವಕಾಡೊ ಚಾಕಲೇಟ್ ಬಳಸಿಕೊಳ್ಳಬಹುದು. ನೀವುಇದನ್ನು ಪಾಲಿಸಿದರೆ ನಿಮ್ಮ ಹೃದಯದ ಆರೋಗ್ಯವುಚೆನ್ನಾಗಿರುವುದು. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    2014ರ ಏಪ್ರಿಲ್‌‌ನಿಂದ 2017ರವರೆಗೆ ಮೋದಿ ಸರ್ಕಾರ ವ್ಯಯಿಸಿದ್ದು ಎಷ್ಟು ಸಾವಿರ ಕೋಟಿ ಹಣ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.

  • ಸುದ್ದಿ

    ಬಿಗ್ ಶಾಕಿಂಗ್!ತರಗತಿಯಲ್ಲೇ ಕುಡಿದು ರಂಪಾಟ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿನಿಯರು…

    ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…

  • ತಂತ್ರಜ್ಞಾನ

    ನಿಮ್ಮ ಆಧಾರ್ ಕಾರ್ಡ್ ಮೊಬೈಲ್’ಗೆ ಮನೆಯಲ್ಲಿ ಕುರಿತು ಲಿಂಕ್ ಮಾಡುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.

  • ಸುದ್ದಿ

    ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

    ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…

  • ಸುದ್ದಿ

    ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

    ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…