ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು ಬಾಯಿಗೆ ರುಚಿಸದೆ ಇದ್ದರೂ ಇದರಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅವಕಾಡೊ ಹಣ್ಣನ್ನು ಹೆಚ್ಚಿನವರು ತಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಲು ಹಿಂಜರಿಯುವರು. ಬೆಳಗ್ಗೆ ಉಪಾಹಾರಕ್ಕೆ ಅಥವಾ ರಾತ್ರಿ ಊಟದ ವೇಳೆ ಅವಕಾಡೊ ಸೇವನೆ ಮಾಡುವಂತಹ ಜನರ ಸಂಖ್ಯೆಯು ಕಡಿಮೆ. ಇದರ ರುಚಿಯ ಹೊರತಾಗಿಯೂ ಇದರಲ್ಲಿ ಯಾವ ಲಾಭಗಳು ಇವೆ ಎಂದು ನಾವು ಇಲ್ಲಿ ತಿಳಿಯೋಣ.

ಅವಕಾಡೊದ ಆಂಟಿಆಕ್ಸಿಡೆಂಟ್ ಯಾವುದಕ್ಕೆ ನೆರವಾಗುವುದು : ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇದ್ದರೆ ಆಗ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆ ಮಾಡುವ ಅಂಶಗಳು ಅವಕಾಡೊದಲ್ಲಿ ಇದೆ ಎಂದು ಸಂಶೋಧನೆಯಲ್ಲಿ ಸಾಬೀತಾಗಿದೆ. ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಬಗ್ಗೆ ಜನರಿಗೆ ಹೆಚ್ಚಾಗಿ ತಿಳಿದಿಲ್ಲ. ಕೆಟ್ಟ ಕೊಲೆಸ್ಟ್ರಾಲ್ ಎಂದರೆ ಆಕ್ಸಿಡೀಕೃತ ಕಡಿಮೆ ಸಾಂದ್ರತೆಯಲಿಪೊಪ್ರೋಟೀನ್(ಎಲ್ ಡಿಎಲ್) ಮತ್ತು ಸಣ್ಣ ಸಾಂದ್ರತೆಯ ಎಲ್ ಡಿಎಲ್ ಕಣಗಳು. ಅದೇ ಒಳ್ಳೆಯಕೊಲೆಸ್ಟ್ರಾಲ್ ಎಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್(ಎಚ್ ಡಿಎಲ್).

ಸಂಶೋಧನೆ : ಸುಮಾರು21ರ ಹರೆಯದಿಂದ 70ರ ಹರೆಯದ 45 ಪುರುಷರು ಹಾಗೂ ಮಹಿಳೆಯರನ್ನು ಐದು ವಾರಗಳ ಕಾಲ ಅವಕಾಡೊ ನೀಡಿ ಪರೀಕ್ಷೆ ಮಾಡಲಾಯಿತು. ಈ ಪರೀಕ್ಷೆಗೆ ಒಳಪಟ್ಟವರು ಎಲ್ಲವರು ಅಧಿಕ ತೂಕ ಅಥವಾ ಬೊಜ್ಜು ಮತ್ತು ಎಲ್ಡಿಎಲ್ ಮಟ್ಟವನ್ನು ಹೆಚ್ಚು ಹೊಂದಿದ್ದರು. ಇವರೆಲ್ಲರಿಗೂ ಕೊಲೆಸ್ಟ್ರಾಲ್ ಕಡಿಮೆ ಮಾಡುವಂತಹ ಎರಡು ಬಗೆಯ ಆಹಾರ ನೀಡಲಾಯಿತು. ಇದರಲ್ಲಿ ಒಂದು ಶೇ.24ರಷ್ಟು ಕೊಬ್ಬಿನಿಂದ ಪಡೆದ ಕ್ಯಾಲರಿಯ ಹೊಂದಿರುವ ಕಡಿಮೆ ಕೊಬ್ಬಿನ ಆಹಾರ ಮತ್ತು ಎರಡನೇಯದು ಮಧ್ಯಮ ಕೊಬ್ಬು ಹೊಂದಿರುವ ಕೊಬ್ಬಿನಿಂದ ಶೇ.36ರಷ್ಟುಕ್ಯಾಲರಿ ಪಡೆಯುವ ಆಹಾರ ನೀಡಲಾಯಿತು. ಮಧ್ಯಮ ಕೊಬ್ಬು ಹೊಂದಿರುವ ಆಹಾರ ಕ್ರಮದಲ್ಲಿ ಒಂದು ಮಧ್ಯಮಗಾತ್ರದ ಅವಕಾಡೊ(136 ಗ್ರಾಂ) ನೀಡಲಾಯಿತು. ಇದರಿಂದ ಅಧ್ಯಯನಗಳು ಕಂಡುಕೊಂಡಿರುವಂತಹ ವಿಚಾರವೆಂದರೆ ದಿನಕ್ಕೊಂದು ಅವಕಾಡೊ ಸೇವಿಸಿದರೆ ದೇಹದಲ್ಲಿರುವ ಎಲ್ ಡಿಎಲ್ ಮಟ್ಟವನ್ನು ಕಡಿಮೆ ಮಾಡುತ್ತದೆ .

ದಿನಕ್ಕೊಂದು ಬೆಣ್ಣೆಹಣ್ಣು : ರಕ್ತನಾಳಗಳಲ್ಲಿ ಶೇಖರಣೆ ಆಗಿರುವ ಕೊಬ್ಬಿನ ಪದರಗಳಿಂದಾಗಿ ಅಧಿಕ ಸಂಖ್ಯೆಯ ಜನರು ಹೃದಯದ ಕಾಯಿಲೆಗಳಿಂದಾಗಿ ಸಾವನ್ನಪ್ಪುವರು. ಈ ಪದರ ನಿರ್ಮಾಣವನ್ನು ಕಡಿಮೆ ಮಾಡಿದರೆ ಆಗ ಹೃದಯದ ಕಾಯಿಲೆಗಳನ್ನು ಅರ್ಧದಷ್ಟುತಡೆಗಟ್ಟಿದಂತೆ. ದಿನಕ್ಕೆ ಒಂದು ಅವಕಾಡೊ ತಿಂದರೆ ಅದರ ಲಾಭಗಳು ಸಿಗುವುದು. ಆದರೆ ಬೇಗ ಇದರ ಲಾಭಪಡೆಯಲು ಹೆಚ್ಚಿನ ಮಟ್ಟದಲ್ಲಿ ಸೇವನೆ ಮಾಡಿದರೆ ಅವಕಾಡೊದಲ್ಲಿ ಇರುವಂತಹ 230 ಕ್ಯಾಲರಿಯು ತೂಕಹೆಚ್ಚಳಕ್ಕೆ ಕಾರಣವಾಗಬಹುದು ಮತ್ತು ಅದರಿಂದ ಸಿಗುವ ಲಾಭಗಳು ಸಿಗದೆ ಇರಬಹುದು. ಆದ್ದರಿಂದ ನಿಮ್ಮಆಹಾರ ಕ್ರಮದಲ್ಲಿ ಅವಕಾಡೊವನ್ನು ಸೇರಿಸಿಕೊಳ್ಳಿ ಮತ್ತು ಇದನ್ನು ಮುಂದುವರಿಸಿಕೊಂಡು ಹೋಗಿ. ಇದು ಆರೋಗ್ಯಕಾರಿ ಕೊಬ್ಬನ್ನು ನೀಡುವುದು ಮಾತ್ರವಲ್ಲದೆ, ಹೃದಯದ ಕಾಯಿಲೆ ಸಮಸ್ಯೆ ನಿವಾರಣೆಮಾಡುವುದು. ಆದರೆ ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ನೀವು ಇದನ್ನು ತುಂಬಾ ಮಿತ ಪ್ರಮಾಣದಲ್ಲಿಸೇವನೆ ಮಾಡಬೇಕು.
ಅವಕಾಡೊಆಹಾರ ಕ್ರಮದಲ್ಲಿ ಹೇಗೆ ಸೇರಿಸಿಕೊಳ್ಳುವುದು? 136 ಗ್ರಾಂ ಅವಕಾಡೊಎಂದರೆ ಅದು ಮೂರನೇ ಎರಡುಕಪ್ ನಷ್ಟು ಗ್ವಾಕಮೋಲ್ ಗೆ ಸಮಾನವಾಗಿದೆ. ಎರಡು ತುಂಡು ಅವಕಾಡೊಟೋಸ್ಟ್ ಅಥವಾ ಅವಕಾಡೊ ಚಾಕಲೇಟ್ಟ್ರಫ್ಫೆಲ್ ಗೆ ಸಮಾನ. ನೀವುಒಂದೇ ಸಲ ಇದನ್ನು ಸೇವನೆಮಾಡಬಹುದು. ಬೆಳಗ್ಗೆ ಕೆಲವು ತುಂಡುಅವಕಾಡೊ ಜತೆಗೆ ಮೊಟ್ಟೆ, ಗ್ವಾಕಮೋಲ್ಅನ್ನು ಮಧ್ಯಾಹ್ನದ ಊಟಕ್ಕೆ ಮತ್ತು ರಾತ್ರಿಗೆಅವಕಾಡೊ ಚಾಕಲೇಟ್ ಬಳಸಿಕೊಳ್ಳಬಹುದು. ನೀವುಇದನ್ನು ಪಾಲಿಸಿದರೆ ನಿಮ್ಮ ಹೃದಯದ ಆರೋಗ್ಯವುಚೆನ್ನಾಗಿರುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…
ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….