News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ದೇಹದ ಕೆಟ್ಟ ಕೊಬ್ಬು ಕರಗಬೇಕೆಂದರೆ ದಿನ ನಿತ್ಯ ಈ ಹಣ್ಣನ್ನು ತಿಂದರೆ ಸಾಕು,.!

113

ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ  ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ  ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ  ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು ಬಾಯಿಗೆ ರುಚಿಸದೆ ಇದ್ದರೂ ಇದರಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅವಕಾಡೊ ಹಣ್ಣನ್ನು ಹೆಚ್ಚಿನವರು ತಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಲು ಹಿಂಜರಿಯುವರು. ಬೆಳಗ್ಗೆ ಉಪಾಹಾರಕ್ಕೆ ಅಥವಾ ರಾತ್ರಿ ಊಟದ ವೇಳೆ ಅವಕಾಡೊ ಸೇವನೆ ಮಾಡುವಂತಹ ಜನರ ಸಂಖ್ಯೆಯು ಕಡಿಮೆ. ಇದರ ರುಚಿಯ ಹೊರತಾಗಿಯೂ ಇದರಲ್ಲಿ ಯಾವ ಲಾಭಗಳು ಇವೆ ಎಂದು ನಾವು ಇಲ್ಲಿ ತಿಳಿಯೋಣ.

ಅವಕಾಡೊದ ಆಂಟಿಆಕ್ಸಿಡೆಂಟ್ ಯಾವುದಕ್ಕೆ ನೆರವಾಗುವುದು : ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇದ್ದರೆ ಆಗ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತದೆ. ಕೆಟ್ಟ ಕೊಲೆಸ್ಟ್ರಾಲ್  ನಿವಾರಣೆ ಮಾಡುವ ಅಂಶಗಳು  ಅವಕಾಡೊದಲ್ಲಿ ಇದೆ ಎಂದು ಸಂಶೋಧನೆಯಲ್ಲಿ  ಸಾಬೀತಾಗಿದೆ. ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಬಗ್ಗೆ ಜನರಿಗೆ ಹೆಚ್ಚಾಗಿ ತಿಳಿದಿಲ್ಲ. ಕೆಟ್ಟ ಕೊಲೆಸ್ಟ್ರಾಲ್ ಎಂದರೆ ಆಕ್ಸಿಡೀಕೃತ ಕಡಿಮೆ ಸಾಂದ್ರತೆಯಲಿಪೊಪ್ರೋಟೀನ್(ಎಲ್ ಡಿಎಲ್) ಮತ್ತು ಸಣ್ಣ ಸಾಂದ್ರತೆಯ ಎಲ್ ಡಿಎಲ್ ಕಣಗಳು. ಅದೇ ಒಳ್ಳೆಯಕೊಲೆಸ್ಟ್ರಾಲ್ ಎಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್(ಎಚ್ ಡಿಎಲ್).

ಸಂಶೋಧನೆ : ಸುಮಾರು21ರ ಹರೆಯದಿಂದ 70ರ ಹರೆಯದ 45 ಪುರುಷರು ಹಾಗೂ ಮಹಿಳೆಯರನ್ನು ಐದು ವಾರಗಳ ಕಾಲ ಅವಕಾಡೊ ನೀಡಿ ಪರೀಕ್ಷೆ ಮಾಡಲಾಯಿತು. ಈ ಪರೀಕ್ಷೆಗೆ ಒಳಪಟ್ಟವರು ಎಲ್ಲವರು ಅಧಿಕ ತೂಕ ಅಥವಾ ಬೊಜ್ಜು ಮತ್ತು ಎಲ್ಡಿಎಲ್ ಮಟ್ಟವನ್ನು ಹೆಚ್ಚು ಹೊಂದಿದ್ದರು. ಇವರೆಲ್ಲರಿಗೂ ಕೊಲೆಸ್ಟ್ರಾಲ್ ಕಡಿಮೆ ಮಾಡುವಂತಹ ಎರಡು ಬಗೆಯ ಆಹಾರ ನೀಡಲಾಯಿತು. ಇದರಲ್ಲಿ ಒಂದು ಶೇ.24ರಷ್ಟು ಕೊಬ್ಬಿನಿಂದ ಪಡೆದ ಕ್ಯಾಲರಿಯ ಹೊಂದಿರುವ ಕಡಿಮೆ ಕೊಬ್ಬಿನ ಆಹಾರ ಮತ್ತು ಎರಡನೇಯದು ಮಧ್ಯಮ ಕೊಬ್ಬು ಹೊಂದಿರುವ ಕೊಬ್ಬಿನಿಂದ ಶೇ.36ರಷ್ಟುಕ್ಯಾಲರಿ ಪಡೆಯುವ ಆಹಾರ ನೀಡಲಾಯಿತು. ಮಧ್ಯಮ ಕೊಬ್ಬು ಹೊಂದಿರುವ ಆಹಾರ ಕ್ರಮದಲ್ಲಿ ಒಂದು ಮಧ್ಯಮಗಾತ್ರದ ಅವಕಾಡೊ(136 ಗ್ರಾಂ) ನೀಡಲಾಯಿತು. ಇದರಿಂದ ಅಧ್ಯಯನಗಳು ಕಂಡುಕೊಂಡಿರುವಂತಹ ವಿಚಾರವೆಂದರೆ ದಿನಕ್ಕೊಂದು ಅವಕಾಡೊ ಸೇವಿಸಿದರೆ ದೇಹದಲ್ಲಿರುವ ಎಲ್ ಡಿಎಲ್ ಮಟ್ಟವನ್ನು ಕಡಿಮೆ ಮಾಡುತ್ತದೆ . 

ದಿನಕ್ಕೊಂದು ಬೆಣ್ಣೆಹಣ್ಣು : ರಕ್ತನಾಳಗಳಲ್ಲಿ ಶೇಖರಣೆ ಆಗಿರುವ ಕೊಬ್ಬಿನ ಪದರಗಳಿಂದಾಗಿ ಅಧಿಕ ಸಂಖ್ಯೆಯ ಜನರು ಹೃದಯದ ಕಾಯಿಲೆಗಳಿಂದಾಗಿ ಸಾವನ್ನಪ್ಪುವರು. ಈ ಪದರ ನಿರ್ಮಾಣವನ್ನು ಕಡಿಮೆ ಮಾಡಿದರೆ ಆಗ ಹೃದಯದ ಕಾಯಿಲೆಗಳನ್ನು ಅರ್ಧದಷ್ಟುತಡೆಗಟ್ಟಿದಂತೆ. ದಿನಕ್ಕೆ ಒಂದು ಅವಕಾಡೊ ತಿಂದರೆ ಅದರ ಲಾಭಗಳು ಸಿಗುವುದು. ಆದರೆ ಬೇಗ ಇದರ ಲಾಭಪಡೆಯಲು ಹೆಚ್ಚಿನ ಮಟ್ಟದಲ್ಲಿ ಸೇವನೆ ಮಾಡಿದರೆ ಅವಕಾಡೊದಲ್ಲಿ ಇರುವಂತಹ 230 ಕ್ಯಾಲರಿಯು ತೂಕಹೆಚ್ಚಳಕ್ಕೆ ಕಾರಣವಾಗಬಹುದು ಮತ್ತು ಅದರಿಂದ ಸಿಗುವ ಲಾಭಗಳು ಸಿಗದೆ ಇರಬಹುದು. ಆದ್ದರಿಂದ ನಿಮ್ಮಆಹಾರ ಕ್ರಮದಲ್ಲಿ ಅವಕಾಡೊವನ್ನು ಸೇರಿಸಿಕೊಳ್ಳಿ ಮತ್ತು ಇದನ್ನು ಮುಂದುವರಿಸಿಕೊಂಡು ಹೋಗಿ. ಇದು ಆರೋಗ್ಯಕಾರಿ ಕೊಬ್ಬನ್ನು ನೀಡುವುದು ಮಾತ್ರವಲ್ಲದೆ, ಹೃದಯದ ಕಾಯಿಲೆ ಸಮಸ್ಯೆ ನಿವಾರಣೆಮಾಡುವುದು. ಆದರೆ ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ನೀವು ಇದನ್ನು ತುಂಬಾ ಮಿತ ಪ್ರಮಾಣದಲ್ಲಿಸೇವನೆ ಮಾಡಬೇಕು.

ಅವಕಾಡೊಆಹಾರ ಕ್ರಮದಲ್ಲಿ ಹೇಗೆ ಸೇರಿಸಿಕೊಳ್ಳುವುದು? 136 ಗ್ರಾಂ ಅವಕಾಡೊಎಂದರೆ ಅದು ಮೂರನೇ ಎರಡುಕಪ್ ನಷ್ಟು ಗ್ವಾಕಮೋಲ್ ಗೆ ಸಮಾನವಾಗಿದೆ. ಎರಡು ತುಂಡು ಅವಕಾಡೊಟೋಸ್ಟ್ ಅಥವಾ ಅವಕಾಡೊ ಚಾಕಲೇಟ್ಟ್ರಫ್ಫೆಲ್ ಗೆ ಸಮಾನ. ನೀವುಒಂದೇ ಸಲ ಇದನ್ನು ಸೇವನೆಮಾಡಬಹುದು. ಬೆಳಗ್ಗೆ ಕೆಲವು ತುಂಡುಅವಕಾಡೊ ಜತೆಗೆ ಮೊಟ್ಟೆ, ಗ್ವಾಕಮೋಲ್ಅನ್ನು ಮಧ್ಯಾಹ್ನದ ಊಟಕ್ಕೆ ಮತ್ತು ರಾತ್ರಿಗೆಅವಕಾಡೊ ಚಾಕಲೇಟ್ ಬಳಸಿಕೊಳ್ಳಬಹುದು. ನೀವುಇದನ್ನು ಪಾಲಿಸಿದರೆ ನಿಮ್ಮ ಹೃದಯದ ಆರೋಗ್ಯವುಚೆನ್ನಾಗಿರುವುದು. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ಸುದ್ದಿ

    ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

    ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…

  • govt, Sports

    ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದರೇನು?

    ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ.  ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…

  • inspirational

    ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

    ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್‌ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್‌ನಲ್ಲಿ:ಐಸ್ ಟ್ರೇ ಅಥವಾ ಏರ್‌ಟೈಟ್ ಡಬ್ಬಿಯಲ್ಲಿ…

  • ಸುದ್ದಿ

    ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ ಭಾರತೀಯ ವಿಜ್ಞಾನಿಗಳು,..!

    ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ್ದಾರೆ. ಅಹಮದಾಬಾದ್‌,  ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…

  • ಆರೋಗ್ಯ

    ಒಂದೆಲಗದಲ್ಲಿ ಇರುವ ಮದ್ದಿನ ಗುಣಗಳನ್ನು ತಿಳಿಯಬೇಕೆ…..! ಹಾಗಾದ್ರೆ ಈ ಲೇಖನ ಓದಿ…..!

    ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.