ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು ಬಾಯಿಗೆ ರುಚಿಸದೆ ಇದ್ದರೂ ಇದರಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅವಕಾಡೊ ಹಣ್ಣನ್ನು ಹೆಚ್ಚಿನವರು ತಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಲು ಹಿಂಜರಿಯುವರು. ಬೆಳಗ್ಗೆ ಉಪಾಹಾರಕ್ಕೆ ಅಥವಾ ರಾತ್ರಿ ಊಟದ ವೇಳೆ ಅವಕಾಡೊ ಸೇವನೆ ಮಾಡುವಂತಹ ಜನರ ಸಂಖ್ಯೆಯು ಕಡಿಮೆ. ಇದರ ರುಚಿಯ ಹೊರತಾಗಿಯೂ ಇದರಲ್ಲಿ ಯಾವ ಲಾಭಗಳು ಇವೆ ಎಂದು ನಾವು ಇಲ್ಲಿ ತಿಳಿಯೋಣ.
ಅವಕಾಡೊದ ಆಂಟಿಆಕ್ಸಿಡೆಂಟ್ ಯಾವುದಕ್ಕೆ ನೆರವಾಗುವುದು : ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇದ್ದರೆ ಆಗ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆ ಮಾಡುವ ಅಂಶಗಳು ಅವಕಾಡೊದಲ್ಲಿ ಇದೆ ಎಂದು ಸಂಶೋಧನೆಯಲ್ಲಿ ಸಾಬೀತಾಗಿದೆ. ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಬಗ್ಗೆ ಜನರಿಗೆ ಹೆಚ್ಚಾಗಿ ತಿಳಿದಿಲ್ಲ. ಕೆಟ್ಟ ಕೊಲೆಸ್ಟ್ರಾಲ್ ಎಂದರೆ ಆಕ್ಸಿಡೀಕೃತ ಕಡಿಮೆ ಸಾಂದ್ರತೆಯಲಿಪೊಪ್ರೋಟೀನ್(ಎಲ್ ಡಿಎಲ್) ಮತ್ತು ಸಣ್ಣ ಸಾಂದ್ರತೆಯ ಎಲ್ ಡಿಎಲ್ ಕಣಗಳು. ಅದೇ ಒಳ್ಳೆಯಕೊಲೆಸ್ಟ್ರಾಲ್ ಎಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್(ಎಚ್ ಡಿಎಲ್).
ಸಂಶೋಧನೆ : ಸುಮಾರು21ರ ಹರೆಯದಿಂದ 70ರ ಹರೆಯದ 45 ಪುರುಷರು ಹಾಗೂ ಮಹಿಳೆಯರನ್ನು ಐದು ವಾರಗಳ ಕಾಲ ಅವಕಾಡೊ ನೀಡಿ ಪರೀಕ್ಷೆ ಮಾಡಲಾಯಿತು. ಈ ಪರೀಕ್ಷೆಗೆ ಒಳಪಟ್ಟವರು ಎಲ್ಲವರು ಅಧಿಕ ತೂಕ ಅಥವಾ ಬೊಜ್ಜು ಮತ್ತು ಎಲ್ಡಿಎಲ್ ಮಟ್ಟವನ್ನು ಹೆಚ್ಚು ಹೊಂದಿದ್ದರು. ಇವರೆಲ್ಲರಿಗೂ ಕೊಲೆಸ್ಟ್ರಾಲ್ ಕಡಿಮೆ ಮಾಡುವಂತಹ ಎರಡು ಬಗೆಯ ಆಹಾರ ನೀಡಲಾಯಿತು. ಇದರಲ್ಲಿ ಒಂದು ಶೇ.24ರಷ್ಟು ಕೊಬ್ಬಿನಿಂದ ಪಡೆದ ಕ್ಯಾಲರಿಯ ಹೊಂದಿರುವ ಕಡಿಮೆ ಕೊಬ್ಬಿನ ಆಹಾರ ಮತ್ತು ಎರಡನೇಯದು ಮಧ್ಯಮ ಕೊಬ್ಬು ಹೊಂದಿರುವ ಕೊಬ್ಬಿನಿಂದ ಶೇ.36ರಷ್ಟುಕ್ಯಾಲರಿ ಪಡೆಯುವ ಆಹಾರ ನೀಡಲಾಯಿತು. ಮಧ್ಯಮ ಕೊಬ್ಬು ಹೊಂದಿರುವ ಆಹಾರ ಕ್ರಮದಲ್ಲಿ ಒಂದು ಮಧ್ಯಮಗಾತ್ರದ ಅವಕಾಡೊ(136 ಗ್ರಾಂ) ನೀಡಲಾಯಿತು. ಇದರಿಂದ ಅಧ್ಯಯನಗಳು ಕಂಡುಕೊಂಡಿರುವಂತಹ ವಿಚಾರವೆಂದರೆ ದಿನಕ್ಕೊಂದು ಅವಕಾಡೊ ಸೇವಿಸಿದರೆ ದೇಹದಲ್ಲಿರುವ ಎಲ್ ಡಿಎಲ್ ಮಟ್ಟವನ್ನು ಕಡಿಮೆ ಮಾಡುತ್ತದೆ .
ದಿನಕ್ಕೊಂದು ಬೆಣ್ಣೆಹಣ್ಣು : ರಕ್ತನಾಳಗಳಲ್ಲಿ ಶೇಖರಣೆ ಆಗಿರುವ ಕೊಬ್ಬಿನ ಪದರಗಳಿಂದಾಗಿ ಅಧಿಕ ಸಂಖ್ಯೆಯ ಜನರು ಹೃದಯದ ಕಾಯಿಲೆಗಳಿಂದಾಗಿ ಸಾವನ್ನಪ್ಪುವರು. ಈ ಪದರ ನಿರ್ಮಾಣವನ್ನು ಕಡಿಮೆ ಮಾಡಿದರೆ ಆಗ ಹೃದಯದ ಕಾಯಿಲೆಗಳನ್ನು ಅರ್ಧದಷ್ಟುತಡೆಗಟ್ಟಿದಂತೆ. ದಿನಕ್ಕೆ ಒಂದು ಅವಕಾಡೊ ತಿಂದರೆ ಅದರ ಲಾಭಗಳು ಸಿಗುವುದು. ಆದರೆ ಬೇಗ ಇದರ ಲಾಭಪಡೆಯಲು ಹೆಚ್ಚಿನ ಮಟ್ಟದಲ್ಲಿ ಸೇವನೆ ಮಾಡಿದರೆ ಅವಕಾಡೊದಲ್ಲಿ ಇರುವಂತಹ 230 ಕ್ಯಾಲರಿಯು ತೂಕಹೆಚ್ಚಳಕ್ಕೆ ಕಾರಣವಾಗಬಹುದು ಮತ್ತು ಅದರಿಂದ ಸಿಗುವ ಲಾಭಗಳು ಸಿಗದೆ ಇರಬಹುದು. ಆದ್ದರಿಂದ ನಿಮ್ಮಆಹಾರ ಕ್ರಮದಲ್ಲಿ ಅವಕಾಡೊವನ್ನು ಸೇರಿಸಿಕೊಳ್ಳಿ ಮತ್ತು ಇದನ್ನು ಮುಂದುವರಿಸಿಕೊಂಡು ಹೋಗಿ. ಇದು ಆರೋಗ್ಯಕಾರಿ ಕೊಬ್ಬನ್ನು ನೀಡುವುದು ಮಾತ್ರವಲ್ಲದೆ, ಹೃದಯದ ಕಾಯಿಲೆ ಸಮಸ್ಯೆ ನಿವಾರಣೆಮಾಡುವುದು. ಆದರೆ ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ನೀವು ಇದನ್ನು ತುಂಬಾ ಮಿತ ಪ್ರಮಾಣದಲ್ಲಿಸೇವನೆ ಮಾಡಬೇಕು.
ಅವಕಾಡೊಆಹಾರ ಕ್ರಮದಲ್ಲಿ ಹೇಗೆ ಸೇರಿಸಿಕೊಳ್ಳುವುದು? 136 ಗ್ರಾಂ ಅವಕಾಡೊಎಂದರೆ ಅದು ಮೂರನೇ ಎರಡುಕಪ್ ನಷ್ಟು ಗ್ವಾಕಮೋಲ್ ಗೆ ಸಮಾನವಾಗಿದೆ. ಎರಡು ತುಂಡು ಅವಕಾಡೊಟೋಸ್ಟ್ ಅಥವಾ ಅವಕಾಡೊ ಚಾಕಲೇಟ್ಟ್ರಫ್ಫೆಲ್ ಗೆ ಸಮಾನ. ನೀವುಒಂದೇ ಸಲ ಇದನ್ನು ಸೇವನೆಮಾಡಬಹುದು. ಬೆಳಗ್ಗೆ ಕೆಲವು ತುಂಡುಅವಕಾಡೊ ಜತೆಗೆ ಮೊಟ್ಟೆ, ಗ್ವಾಕಮೋಲ್ಅನ್ನು ಮಧ್ಯಾಹ್ನದ ಊಟಕ್ಕೆ ಮತ್ತು ರಾತ್ರಿಗೆಅವಕಾಡೊ ಚಾಕಲೇಟ್ ಬಳಸಿಕೊಳ್ಳಬಹುದು. ನೀವುಇದನ್ನು ಪಾಲಿಸಿದರೆ ನಿಮ್ಮ ಹೃದಯದ ಆರೋಗ್ಯವುಚೆನ್ನಾಗಿರುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…