ಸುದ್ದಿ

ನಿಮ್ಮ ಮಗುವಿನ ನಿದ್ದೆಯನ್ನು ಇನ್ನೂ ಉತ್ತಮವಾಗಿಸಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಿ….!

53

ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ.

ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ ಹೊರಗಿನ ಆಟ ಮತ್ತು ಚಟುವಟಿಕೆಗಳಲ್ಲಿ ಒಳಗೊಳ್ಳುವಂತೆ ಮಾಡಿ. ಇದರಿಂದ ಹೆಚ್ಚು ಹೆಚ್ಚಾಗಿ ಸೂರ್ಯನ ಬೆಳಕನ್ನು ನೋಡುವಂತಾಗುತ್ತದೆ ಹಾಗೂ ಈ ಬೆಳಕಿನಲ್ಲಿ ಮೆದುಳಿನಲ್ಲಿ ಉತ್ಪತ್ತಿಯಾಗುವ ಮೆಲಟೋನಿನ್ ಪ್ರಮಾಣವನ್ನು ತಡೆಯುತ್ತದೆ. ಸಮಯಕ್ಕೆ ಸರಿಯಾಗಿ ನಮ್ಮ ನಿದ್ದೆ ಆವರಿಸಲು ಮತ್ತು ಎಚ್ಚರಾಗಲು ಈ ಮೆಲಟೋನಿನ್ ಪ್ರಮುಖ ಕಾರಣವಾಗಿದೆ. ಈ ವಿಧಾನದ ಮೂಲಕ ಮಕ್ಕಳು ಹಗಲಿನ ಹೊತ್ತು ಎಚ್ಚರಾಗಿದ್ದು ರಾತ್ರಿಯ ಸಮಯದಲ್ಲಿ ಬೇಗನೇ ಮಲಗತೊಡಗುತ್ತಾರೆ.

ಕೆಫೇನ್ ಇರುವ ಪೇಯಗಳನ್ನು ನೀಡದಿರಿ ಯಾವುದೇ ಕೆಫೀನ್ ಇರುವ ಪಾನೀಯ, ಉದಾಹರಣೆಗೆ, ಟೀ, ಕಾಫಿ, ಬುರುಗು ಪಾನೀಯ, ಸೋಡಾ ಮೊದಲಾದವುಗಳ ಸೇವನೆಯಿಂದ ಮಕ್ಕಳಲ್ಲಿ ನಿದ್ದೆ ಹಾರಿ ಹೋಗುತ್ತದೆ ಹಾಗೂ ಇವರನ್ನು ಮಲಗಿಸುವುದು ಭಾರೀ ಕಷ್ಟಕರವಾದ ಕೆಲಸವಾಗುತ್ತದೆ. ಹಾಗಾಗಿ ಸಂಜೆಯ ಬಳಿಕ ಈ ಯಾವುದೇ ಪಾನೀಯಗಳನ್ನು ನೀಡದಿರಿ.
ರಾತ್ರಿ ಮಲಗಲು ನಿರ್ದಿಷ್ಟ ಸಮಯವನ್ನು ಅನುಸರಿಸಿ ನಿಮ್ಮ ಮಕ್ಕಳು ಪ್ರತಿದಿನ ಒಂದೇ ಸಮಯಕ್ಕೆ ಸರಿಯಾಗಿ ಮಲಗುವಂತೆ ವೇಳಾಪಟ್ಟಿಯನ್ನು ನಿರ್ಧರಿಸಿ ಈ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮಕ್ಕಳನ್ನು ಪ್ರೇರೇಪಿಸಿ. ಇದು ಮಕ್ಕಳಲ್ಲಿ ಆರೋಗ್ಯಕರ ವೇಳಾಪಟ್ಟಿಯನ್ನು ಅನುಸರಿಸುವ ಉತ್ತಮ ಅಭ್ಯಾಸ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ದೇಹದ ಜೈವಿಕ ಗಡಿಯಾರ ಈ ಸಮಯಗಳಿಗೆ ಅನುಸಾರವಾಗಿ ಸ್ಪಂದಿಸತೊಡಗುತ್ತದೆ.

ಮಕ್ಕಳು ಸುರಕ್ಷತಾ ಭಾವನೆ ಹೊಂದುವಂತೆ ಮಾಡಿ ಸಂಜೆಯ ಬಳಿಕ ಮಕ್ಕಳಲ್ಲಿ ಹೆದರಿಕೆ ಹುಟ್ಟಿಸುವ ಯಾವುದೇ ಕಥೆಗಳನ್ನಾಗಲೀ, ಸಿನೇಮಾಗಳನ್ನಾಗಲೀ ಕೇಳುವುದಾಗಲೀ, ನೋಡುವುದಾಗಲೀ ಬೇಡ. ಈ ಹೆದರಿಕೆಯ ವಿಷಯಗಳು ಮಕ್ಕಳ ಮನದಲ್ಲಿ ಅಚ್ಚೊತ್ತಿದಂತೆ ನೆನಪಿನಲ್ಲಿ ಉಳಿಯುತ್ತವೆ ಹಾಗೂ ಈ ಹೆದರಿಕೆಯಿಂದಾಗಿ ಮಕ್ಕಳಿಗೆ ಬೇಗನೇ ಮಲಗಲು ಸಾಧ್ಯವಾಗದೇ ಹೋಗಬಹುದು.ಆರೋಗ್ಯಕರ ಆಹಾರಕ್ರಮವನ್ನು ಅನುಸರಿಸಿ ಸಕ್ಕರೆ ಹೆಚ್ಚಿರುವ ಆಹಾರಗಳನ್ನು ಸೇವಿಸಿದರೆ ಇದು ನಿದ್ದೆಯ ವೇಳಾಪಟ್ಟಿಯನ್ನು ಏರುಪೇರುಗೊಳಿಸಬಹುದು. ಅಲ್ಲದೇ ಮಕ್ಕಳು ಸಂಜೆಯ ಬಳಿಕ ಕುಡಿಯುವ ನೀರಿನ ಪ್ರಮಾಣ ಅತಿಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಅತಿಯಾದರೆ ರಾತ್ರಿಯ ಸಮಯದಲ್ಲಿ ಮೂತ್ರವಿಸರ್ಜನೆಗೆ ಕೆಲವಾರು ಬಾರಿ ಏಳಬೇಕಾಗುತ್ತದೆ. ಇದು ನಿದ್ದೆಯನ್ನು ಭಂಗಗೊಳಿಸಬಹುದು. ಅಲ್ಲದೇ ರಾತ್ರಿ ಮಲಗುವ ಮುನ್ನ ಮೂತ್ರ ವಿಸರ್ಜಿಸಿದ ಬಳಿಕವೇ ಮಲಗುವಂತೆ ರೂಢಿ ಮಾಡಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…

  • ಆರೋಗ್ಯ

    ಪ್ರತಿದಿನ ಅರಿಶಿನವನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ.!

    ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…

  • ಉಪಯುಕ್ತ ಮಾಹಿತಿ

    ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

    ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.

  • ಸುದ್ದಿ

    ಮಳೆಯಿಂದಾಗಿ ಈರುಳ್ಳಿ ಪೂರೈಕೆ ಕುಸಿತವಾದ ಕಾರಣ; ಗಗನಕ್ಕೇರಿದ ಈರುಳ್ಳಿ ದರ,.! ಇಲ್ಲಿದೆ ಮಾಹಿತಿ,…

    ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್‌, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…

  • ಸುದ್ದಿ

    14 ಕೋಟಿ ಬೆಲೆ ಬಾಳುವ ಕೋಣವನ್ನು ನೀವೆಂದಾದರೂ ನೋಡಿದ್ದೀರಾ?ಇದರ ವಿಶೇಷತೆ ಏನು ಗೊತ್ತಾ?

    ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ  ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…

  • ಉಪಯುಕ್ತ ಮಾಹಿತಿ

    ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

    ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…