News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನಿಮ್ಮ ಮಗುವಿನ ನಿದ್ದೆಯನ್ನು ಇನ್ನೂ ಉತ್ತಮವಾಗಿಸಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಿ….!

82

ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ.

ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ ಹೊರಗಿನ ಆಟ ಮತ್ತು ಚಟುವಟಿಕೆಗಳಲ್ಲಿ ಒಳಗೊಳ್ಳುವಂತೆ ಮಾಡಿ. ಇದರಿಂದ ಹೆಚ್ಚು ಹೆಚ್ಚಾಗಿ ಸೂರ್ಯನ ಬೆಳಕನ್ನು ನೋಡುವಂತಾಗುತ್ತದೆ ಹಾಗೂ ಈ ಬೆಳಕಿನಲ್ಲಿ ಮೆದುಳಿನಲ್ಲಿ ಉತ್ಪತ್ತಿಯಾಗುವ ಮೆಲಟೋನಿನ್ ಪ್ರಮಾಣವನ್ನು ತಡೆಯುತ್ತದೆ. ಸಮಯಕ್ಕೆ ಸರಿಯಾಗಿ ನಮ್ಮ ನಿದ್ದೆ ಆವರಿಸಲು ಮತ್ತು ಎಚ್ಚರಾಗಲು ಈ ಮೆಲಟೋನಿನ್ ಪ್ರಮುಖ ಕಾರಣವಾಗಿದೆ. ಈ ವಿಧಾನದ ಮೂಲಕ ಮಕ್ಕಳು ಹಗಲಿನ ಹೊತ್ತು ಎಚ್ಚರಾಗಿದ್ದು ರಾತ್ರಿಯ ಸಮಯದಲ್ಲಿ ಬೇಗನೇ ಮಲಗತೊಡಗುತ್ತಾರೆ.

ಕೆಫೇನ್ ಇರುವ ಪೇಯಗಳನ್ನು ನೀಡದಿರಿ ಯಾವುದೇ ಕೆಫೀನ್ ಇರುವ ಪಾನೀಯ, ಉದಾಹರಣೆಗೆ, ಟೀ, ಕಾಫಿ, ಬುರುಗು ಪಾನೀಯ, ಸೋಡಾ ಮೊದಲಾದವುಗಳ ಸೇವನೆಯಿಂದ ಮಕ್ಕಳಲ್ಲಿ ನಿದ್ದೆ ಹಾರಿ ಹೋಗುತ್ತದೆ ಹಾಗೂ ಇವರನ್ನು ಮಲಗಿಸುವುದು ಭಾರೀ ಕಷ್ಟಕರವಾದ ಕೆಲಸವಾಗುತ್ತದೆ. ಹಾಗಾಗಿ ಸಂಜೆಯ ಬಳಿಕ ಈ ಯಾವುದೇ ಪಾನೀಯಗಳನ್ನು ನೀಡದಿರಿ.
ರಾತ್ರಿ ಮಲಗಲು ನಿರ್ದಿಷ್ಟ ಸಮಯವನ್ನು ಅನುಸರಿಸಿ ನಿಮ್ಮ ಮಕ್ಕಳು ಪ್ರತಿದಿನ ಒಂದೇ ಸಮಯಕ್ಕೆ ಸರಿಯಾಗಿ ಮಲಗುವಂತೆ ವೇಳಾಪಟ್ಟಿಯನ್ನು ನಿರ್ಧರಿಸಿ ಈ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮಕ್ಕಳನ್ನು ಪ್ರೇರೇಪಿಸಿ. ಇದು ಮಕ್ಕಳಲ್ಲಿ ಆರೋಗ್ಯಕರ ವೇಳಾಪಟ್ಟಿಯನ್ನು ಅನುಸರಿಸುವ ಉತ್ತಮ ಅಭ್ಯಾಸ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ದೇಹದ ಜೈವಿಕ ಗಡಿಯಾರ ಈ ಸಮಯಗಳಿಗೆ ಅನುಸಾರವಾಗಿ ಸ್ಪಂದಿಸತೊಡಗುತ್ತದೆ.

ಮಕ್ಕಳು ಸುರಕ್ಷತಾ ಭಾವನೆ ಹೊಂದುವಂತೆ ಮಾಡಿ ಸಂಜೆಯ ಬಳಿಕ ಮಕ್ಕಳಲ್ಲಿ ಹೆದರಿಕೆ ಹುಟ್ಟಿಸುವ ಯಾವುದೇ ಕಥೆಗಳನ್ನಾಗಲೀ, ಸಿನೇಮಾಗಳನ್ನಾಗಲೀ ಕೇಳುವುದಾಗಲೀ, ನೋಡುವುದಾಗಲೀ ಬೇಡ. ಈ ಹೆದರಿಕೆಯ ವಿಷಯಗಳು ಮಕ್ಕಳ ಮನದಲ್ಲಿ ಅಚ್ಚೊತ್ತಿದಂತೆ ನೆನಪಿನಲ್ಲಿ ಉಳಿಯುತ್ತವೆ ಹಾಗೂ ಈ ಹೆದರಿಕೆಯಿಂದಾಗಿ ಮಕ್ಕಳಿಗೆ ಬೇಗನೇ ಮಲಗಲು ಸಾಧ್ಯವಾಗದೇ ಹೋಗಬಹುದು.ಆರೋಗ್ಯಕರ ಆಹಾರಕ್ರಮವನ್ನು ಅನುಸರಿಸಿ ಸಕ್ಕರೆ ಹೆಚ್ಚಿರುವ ಆಹಾರಗಳನ್ನು ಸೇವಿಸಿದರೆ ಇದು ನಿದ್ದೆಯ ವೇಳಾಪಟ್ಟಿಯನ್ನು ಏರುಪೇರುಗೊಳಿಸಬಹುದು. ಅಲ್ಲದೇ ಮಕ್ಕಳು ಸಂಜೆಯ ಬಳಿಕ ಕುಡಿಯುವ ನೀರಿನ ಪ್ರಮಾಣ ಅತಿಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಅತಿಯಾದರೆ ರಾತ್ರಿಯ ಸಮಯದಲ್ಲಿ ಮೂತ್ರವಿಸರ್ಜನೆಗೆ ಕೆಲವಾರು ಬಾರಿ ಏಳಬೇಕಾಗುತ್ತದೆ. ಇದು ನಿದ್ದೆಯನ್ನು ಭಂಗಗೊಳಿಸಬಹುದು. ಅಲ್ಲದೇ ರಾತ್ರಿ ಮಲಗುವ ಮುನ್ನ ಮೂತ್ರ ವಿಸರ್ಜಿಸಿದ ಬಳಿಕವೇ ಮಲಗುವಂತೆ ರೂಢಿ ಮಾಡಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…

  • inspirational

    ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…

  • Uncategorized, ಕರ್ನಾಟಕ

    ಕನ್ನಡ ಒಂದು ಅದ್ಭುತ ಭಾಷೆ ಎಂಬುದಕ್ಕೆ ಇಲ್ಲಿವೆ ನೋಡಿ 07 ಸಾಕ್ಷಿ..!ತಿಳಿಯಲು ಈ ಲೇಖನ ಓದಿ..

    ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಮಿಲಿಯನ್ ಬಳಕೆದಾರರಿಗೆ ಜಿಯೋ ಕ್ರಿಸ್‌ಮಸ್’ಗೆ ನೀಡುತ್ತಿದೆ ಹೊಸ ಸೇವೆ.! ತಿಳಿಯಲು ಈ ಲೇಖನ ಓದಿ…

    ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್‌ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

  • ಸಿನಿಮಾ

    ಮಗನ ಫೋಟೋ ಹಾಕಿ ನಟ ಜಗ್ಗೇಶ್ ರವರನ್ನು ಟ್ರೊಲ್ ಮಾಡಿದ ರಮ್ಯಾ ಬೆಂಬಲಿಗರು..ಇದಕ್ಕೆ ಜಗ್ಗೇಶ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…