ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

ಬೊಜ್ಜು ನಿಯಂತ್ರಿಸುತ್ತದೆ :-
ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.

ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.
ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ

ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12 ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.
ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.

ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.
ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.
ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

ಈ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…
ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.