ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಗುರುತಿಸಿ ಅದರಿಂದ ಔಷಧ ತಯಾರಿಸುವುದರ ಜತೆಗೆ ಆ ಎಲೆಯಲ್ಲಿ ಊಟ ಮಾಡುವುದರಿಂದ ಆಗುವ ಪ್ರಯೋಜನವನ್ನೂ ಹೇಳಿದ್ದಾರೆ.

ಕ್ರಮೇಣ ಈ ಧಾವಂತದ ಬದುಕಿನಲ್ಲಿ ಬಹುತೇಕ ಮರೆಯಾಗಿದ್ದ ಬಾಳೆ ಎಲೆಯ ಊಟ ಈಗ ಮತ್ತೆ ಮಹತ್ವ ಪಡೆದುಕೊಂಡಿದೆ, ಬಾಳೆ ಎಲೆಯ ಊಟದ ಮಹತ್ವ ಅದೆಷ್ಟೋ ಜನರಿಗೆ ಇಂದಿಗೂ ಕೂಡ ತಿಳಿದಿಲ್ಲ ಹೀಗಾಗಿ ಈ ಊಟದ ಕೆಲ ಸೊಗಸಾದ ಅರೋಗ್ಯ ಪ್ರಯೋಜನವೇನು ತಿಳಿಸುತ್ತೇವೆ ಕೇಳಿ. ಬಾಳೆ ಎಲೆಗಳಲ್ಲಿ ಬಡಿಸುವ ಆಹಾರವನ್ನು ತಿನ್ನುವುದು ದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿದೆ, ಬಾಳೆ ಎಲೆಗಳಲ್ಲಿ ನೀಡಲಾಗುವ ಆಹಾರವು ರುಚಿಯನ್ನು ಮಾತ್ರವಲ್ಲದೆ ಆರೋಗ್ಯಕರವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ, ಅನೇಕ ರೆಸ್ಟೋರೆಂಟ್ಗಳು ಬಾಳೆ ಎಲೆಗಳಲ್ಲಿ ಆಹಾರವನ್ನು ನೀಡಲು ಪ್ರಾರಂಭಿಸಿವೆ ಬಾಳೆ ಎಲೆಯಲ್ಲಿ ಸತತವಾಗಿ ಊಟ ಮಾಡುವದರಿಂದ ಬಿಳಿ ಕೂದಲು, ಸಂತಾನಹೀನತೆ ಮತ್ತು ಚರ್ಮ ಸಮಸ್ಯೆಗಳು ದೂರವಾಗುತ್ತವೆ. ಬಾಳೆದೆಲೆಯ ಸುತ್ತ ರಂಗೋಲಿ ಹಾಕುವ ಕ್ರಮವಿದೆ, ಸಣ್ಣ ಸಣ್ಣ ಕ್ರಿಮಿಗಳು, ಇರುವೆ ಇತ್ಯಾದಿಗಳು ಆಹಾರ ಅರಸುತ್ತ ಎಲೆಗೆ ಬರಬಾರದು ಎಂಬ ಉದ್ದೇಶದಿಂದ ಇದನ್ನು ಮಾಡಲಾಗತ್ತದೆ.

ಇನ್ನು ಈ ಕಾಲದಲ್ಲಿ ಊಟಕ್ಕೆ ಬಳಸುವ ಅದೆಷ್ಟೋ ಪ್ಲಾಸ್ಟಿಕ್ ತಟ್ಟೆಗಳು ನಮ್ಮ ದೇಹಕ್ಕೂ ಹಾಗು ಪರಿಸರಕ್ಕೂ ಕೂಡ ಹಾನಿಕಾರಕ ಎಂದು ಹಲವು ಸಂಶೋಧನೆ ಈಗಾಗಲೇ ತಿಳಿಸಿವೆ ಆದ್ದರಿಂದ ಬಾಳೆ ಎಲೆಗೆ ಬೇಡಿಕೆ ಹೆಚ್ಚು ಕಂಡುಬರುತ್ತಿದೆ. ಈ ಎಲೆಗಳು ಪರಿಸರ ಸ್ನೇಹಿ, ವಿಲೇವಾರಿ ಮಾಡುವಾಗಲೂ ಕೂಡ ಯಾವುದೇ ಸಮಸ್ಯೆ ಇರುವುದಿಲ್ಲ ಹೀಗಾಗಿ ಪರಿಸರ ಸ್ನೇಹಿ ಎಲೆಯಾಗಿ ಜನರಿಗೆ ಬಹುಪಯೋಗಿ. ನಮ್ಮ ದೇಶದಲ್ಲಿ ಮಾತ್ರವಲ್ಲ ವಿದೇಶಗಳಲ್ಲಿಯೂ ಈಗ ಈ ಪದ್ಧತಿ ಅನುಸರಿಸಲಾಗುತ್ತಿದೆ. ಜನಪ್ರಿಯ ಆಹಾರ ಡೆಲಿವರಿ ಕಂಪನಿಗಳು ಕೂಡ ಆಹಾರದ ಪ್ಯಾಕೇಜಿಂಗ್ ಮಾಡಲು ಈ ಎಲೆಯನ್ನೇ ಬಳಸಿಕೊಳ್ಳುತ್ತಿವೆ, ಈ ಉತ್ತಮ ಮಾಹಿತಿಯನ್ನು ಆದಷ್ಟು ಎಲ್ಲ ಜನರಿಗೆ ತಲುಪಿಸುವ ಪ್ರಯತ್ನ ಮಾಡಿ.

ನೆಲದ ಮೇಲೆ ಕುಳಿತು ಊಟ ಮಾಡುವದರಿಂದ ನಾವು ಬಾಗಿ ಊಟ ಮಾಡಬೇಕಾಗುತ್ತದೆ ಮತ್ತು ಇದರಿಂದ ಹೊಟ್ಟೆಗೆ ವ್ಯಾಯಾಮ ಬೀಳುವುದರಿಂದ ಪಚನಕ್ರಿಯೆ ಸಾರಾಗವಾಗಿ ಆಗುತ್ತದೆ. ಬಾಳೆ ಎಲೆಗಳು ಸಾಮಾನ್ಯವಾಗಿನ ಸಸ್ಯ ಆಧಾರಿತ ಸಂಯುಕ್ತಗಳಾದ ಪಾಲಿಫಿನಾಲ್ಗಳಾದ ಇಜಿಸಿಜಿ ಗಳಿಂದ ಮಾಡಲ್ಪಟ್ಟಿದೆ, ಬಲೇ ಎಳೆಯಲ್ಲಿ ಪಾಲಿಫಿನಾಲ್ಗಳು ನೈಸರ್ಗಿಕ ಉತ್ಕರ್ಷಣ ನಿರೋಧಕಗಳಾಗಿವೆ, ಇದು ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳಿಗೆ ಕಾರಣವಾಗುವ ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಬಾಳೆ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿವೆ, ಬಾಳೆ ಎಲೆಗಳು ಸೂಕ್ಷ್ಮಜೀವಿಗಳು ಮತ್ತು ಧೂಳನ್ನು ಹಿಮ್ಮೆಟ್ಟಿಸುವ ನೈಸರ್ಗಿಕ ಸಾಮರ್ಥ್ಯವನ್ನು ಹೊಂದಿವೆ ಆದ್ದರಿಂದ ಅದನ್ನು ಹೆಚ್ಚು ಶುಚಿಗೊಳಿಸುವ ಅಗತ್ಯವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್…
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.
ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…