ಸುದ್ದಿ

ಮೊದಲ ವಾರವೇ ಗಳಿಕೆಯಲ್ಲಿ ದಾಖಲೆ ಮುರಿದ ಶ್ರೀಮುರಳಿ ಅಭಿನಯದ ಭರಾಟೆ..!

43

ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ.

ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು ಭರಪೂರ ಗೆಲುವು. ಒಂದು ಸಿನಿಮಾ ಒಪ್ಪಿಕೊಂಡರೆ ಅದರಲ್ಲಿನ ಪಾತ್ರಕ್ಕಾಗಿ ಸಂಪೂರ್ಣವಾಗಿ ಸಮರ್ಪಿಸಿಕೊಳ್ಳುವ ನಾಯಕ ನಟ, ಪ್ರತೀ ಕ್ಷಣವೂ ಸಿನಿಮಾವನ್ನೇ ಧ್ಯಾನಿಸುವ ನಿರ್ದೇಶಕ ಮತ್ತು ಪ್ರತೀ ಫ್ರೇಮಿನಲ್ಲಿಯೂ ಅದ್ಧೂರಿತನವೇ ಮಿರುಗಬೇಕೆಂಬ ಕನಸು ಹೊಂದಿರೋ ನಿರ್ಮಾಪಕರು.

ಇವಿಷ್ಟರ ಮಹಾ ಸಂಗಮವಾದರೆ ಜನ ಚಪ್ಪರಿಸಿಕೊಂಡು ನೋಡುವಂಥಾ ದೃಶ್ಯಕಾವ್ಯವೊಂದು ಅಣಿಗೊಳ್ಳುತ್ತದೆ ಎಂದೇ ಅರ್ಥ. ಅದು ಭರಾಟೆ ವಿಚಾರದಲ್ಲಿಯೂ ನಿಜವಾಗಿದೆ. ಎತ್ತಲಿಂದ ಯಾವ ವಿಭಾಗಗಳತ್ತ ಕಣ್ಣು ಹಾಯಿಸಿದರೂ ಎಲ್ಲದರಲ್ಲಿಯೂ ಪರಿಪೂರ್ಣ ಕಸುಬುದಾರಿಕೆಯ ಭರಾಟೆಯೇ ಎದ್ದು ಕಾಣಿಸುತ್ತದೆ. ಅದಕ್ಕೆ ತಕ್ಕುದಾದ ಸಮ್ಮಾನವೇ ಪ್ರೇಕ್ಷಕರ ಕಡೆಯಿಂದ ಸಿಕ್ಕಿದೆ.

 ರಾಜಸ್ಥಾನದ ಮರುಭೂಮಿಯ ಹಿನ್ನೆಲೆಯಲ್ಲಿ ಶ್ರೀಮುರಳಿ ಭಿನ್ನವಾದ ಪೋಷಾಕಿನಲ್ಲಿ ಮಿಂಚಿದ ಫೋಟೋಗಳ ಮೂಲಕವೇ ಈ ಸಿನಿಮಾ ಕ್ರೇಜ್ ತಾರಕಕ್ಕೇರಿತ್ತು. ಅದೇ ಆವೇಗದೊಂದಿಗೆ ಸಾಗಿ ಬಂದು ಬಿಡುಗಡೆಗೊಂಡ ಭರಾಟೆಗೆ ಮೊದಲ ದಿನವೇ ರಾಜ್ಯಾದ್ಯಂತ ಸಿಕ್ಕಿದ್ದ ಭಾರೀ ಜನ ಬೆಂಬಲದ ಭರಾಟೆ. ಅದೆಂಥಾ ಅದ್ಧೂರಿ ಓಪನಿಂಗ್ ಎಂದರೆ, ಅದರ ಪರಿಣಾಮ ಗಳಿಕೆಯ ಮೊತ್ತದಲ್ಲಿಯೇ ಪ್ರತಿಫಲಿಸಿತ್ತು. ಮೊದಲ ದಿನ ಈ ಚಿತ್ರ ಮಾಡಿದ ಕಲೆಕ್ಷನ್ನು 8.36 ಕೋಟಿ. ಇದೀಗ ವಾರ ಕಳೆಯೋದರೊಳಗೇ ಆ ಮೊತ್ತ ಇಪ್ಪತೈದು ಕೋಟಿಯನ್ನೂ ಕ್ರಾಸ್ ಮಾಡಿಕೊಂಡು ಮುಂದುವರೆಯುತ್ತಿದೆ. ಎಲ್ಲ ಸೆಂಟರ್ ಗಳಲ್ಲಿಯೂ ಅದ್ಭುತವೆಂಬಂಥಾ ಪ್ರದರ್ಶನ ಕಾಣುತ್ತಿರೋ ಭರಾಟೆ ಈ ವರ್ಷದ ಸೂಪರ್ ಹಿಟ್ ಚಿತ್ರವಾಗಿ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಬಿಗ್ ಬಾಸ್ ಸಂಚಿಕೆ-5ರಲ್ಲಿ ನೀವೂ ಸಹ ಸ್ಪರ್ಧಿಸಬಹುದು!ಹೇಗಂತೀರಾ?ಈ ಲೇಖನಿ ಓದಿ….

    ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….

  • ಸುದ್ದಿ

    ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

    ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…