ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುರುಳಿ ಟೀ ಮಾಡುವ ವಿಧಾನ!
ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ.

ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ ಸಮಸ್ಯೆ ನಿವಾರಿಸಲು ಮದ್ದಾಗಿ ಕೆಲಸ ಮಾಡುತ್ತದೆ, ಹೃದಯದ ಆರೋಗ್ಯ, ಜೀರ್ಣ ಶಕ್ತಿ ವೃದ್ಧಿಸುತ್ತದೆ. ಇದರಲ್ಲಿರುವ ಫ್ಲೇವೋನಾಯ್ಡ್ ಅಂಶ ಆರೋಗಕ್ಕೆ ತುಂಬಾ ಒಳ್ಳೆಯದಾಗಿದೆ.

ಹುರುಳಿ ಟೀ ಮಾಡಲು ಬೇಕಾದ ಸಾಮಾಗ್ರಿ:
ನೀರು- 3 ಕಪ್ಹು, ರುಳಿ ಕಾಳು- 2 ಚಮಚ, ಜೇನು ತುಪ್ಪ- 1 ಚಮಚ
ಮಾಡುವ ವಿಧಾನ:
ಮೊದಲು ಸ್ಟವ್ ಹಚ್ಚಿ ಒಂದು ತವಾದಲ್ಲಿ ಹುರುಳಿ ಕಾಳುಗಳನ್ನು ಹುರಿದುಕೊಂಡು ಪಕ್ಕಕ್ಕೆ ಎತ್ತಿಟ್ಟುಕೊಳ್ಳಿ. ಬಳಿಕ ಚಹಾ ತಯಾರಿಸಲು ಪಾತ್ರೆಯಲ್ಲಿ ನೀರು ಕುದಿಯಲು ಇಡಿ.

ಬಳಿಕ ಕುದಿಯುತ್ತಿರುವ ನೀರಿಗೆ ಹುರಿಡದಿಟ್ಟುಕೊಂಡ ಹುರುಳಿ ಕಾಳನ್ನು ಹಾಕಿ 1ರಿಂದ 3 ನಿಮಿಷ ಕುದಿಯಲು ಬಿಡಿ. ಬೇಕಾದರೆ ಹುರಿದ ಹುರುಳಿ ಕಾಳನ್ನು ಪುಡಿ ಮಾಡಿ ಕೂಡ ಚಹಾ ತಯಾರಿಸಬಹುದು. ಅಷ್ಟೇ ಅಲ್ಲದೆ ಹುರುಳಿ ಎಲೆಗಳನ್ನು ಒಣಗಿಸಿ, ಪುಡಿ ಮಾಡಿ ಅದನ್ನು ಕೂಡ ಚಹಾ ಮಾಡಲು ಬಳಸಬಹುದು.
ಬಳಿಕ ಹುರುಳಿ ಕಾಳಿನ ಅಂಶ ನೀರಿನಲ್ಲಿ ಬೆರೆತ ಬಳಿಕ ಸ್ಟವನ್ನು ಆಫ್ ಮಾಡಿ. ಲೋಟದಲ್ಲಿ ಚಹಾ ಸೋಸಿ ಕುಡಿಯಿರಿ. ಈ ಚಹಾವನ್ನು ಹಾಗೆ ಕುಡಿಯಬಹುದು, ಇಲ್ಲವಾದರೇ ಇದಕ್ಕೆ ಸ್ವಲ್ಪ ಜೇನು ತುಪ್ಪ ಬೆರೆಸಿ ಸೇವಿಸಬಹುದು.

ಆರೋಗ್ಯಕರ ಲಾಭವೇನು?
1. ಕಿಡ್ನಿ ಸಮಸ್ಯೆಗೆ ಮದ್ದು
ಹುರುಳಿ ಕಾಳಿನಲ್ಲಿರುವ ಆ್ಯಂಟಿಆಕ್ಸಿಡೆಂಟ್ ಹಾಗೂ ರುಟಿನ್ ಅಂಶ ಕಿಡ್ನಿ ಸಮಸ್ಯೆಗೆ ರಾಮಬಾಣ. ಪ್ರತಿನಿತ್ಯ ಹುರುಳಿ ಟೀ ಸೇವನೆ ಮಾಡಿದರೆ ಕಿಡ್ನಿ ಸಮಸ್ಯೆ ನಿಧಾನವಾಗಿ ಗುಣವಾಗುತ್ತದೆ.
2. ಮಧುಮೇಹ ನಿಯಂತ್ರಣಕ್ಕೆ ಸಹಕಾರಿ:
ಮಧುಮೇಹಿಗಳು ಹುರುಳಿ ಟೀ ಕುಡಿದರೆ ಅವರ ದೇಹದಲ್ಲಿ ಸಕ್ಕರೆಯಂಶವನ್ನು ಅದು ನಿಯಂತ್ರಿಸುತ್ತದೆ. ಈ ಟೀ ರಕ್ತದಲ್ಲಿ ಗ್ಲೂಕೋಸ್ ಪ್ರಮಾಣವನ್ನು ಕಾಪಾಡಿ, ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಯುತ್ತದೆ.

3. ಹೃದಯದ ಆರೋಗ್ಯಕ್ಕೆ ಉತ್ತಮ:
ಹುರುಳಿ ಟೀ ಪ್ರತಿದಿನ ಕುಡಿಯುವುದರಿಂದ ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಕಡಿಮೆ ಆಗುತ್ತದೆ. ಇದರಲ್ಲಿ ಫ್ಲೇವೋನಾಯ್ಡ್ ಅಂಶವಿರುವುದರಿಂದ ರಕ್ತ ಹೆಪ್ಪುಗಟ್ಟುವುದನ್ನು ಇದು ತಡೆಗಟ್ಟುತ್ತದೆ. ಪಾಶ್ರ್ವವಾಯು, ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.
4. ಜೀರ್ಣಕ್ರಿಯೆಗೆ ಒಳ್ಳೆದು:
ಹುರುಳಿ ಕಾಳಿನಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುವಂತೆ ಕಾರ್ಯನಿರ್ವಹಿಸುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಬರುವುದಿಲ್ಲ. ಆಗಾಗ ಹೊಟ್ಟೆ ಉಬ್ಬುವ ಸಮಸ್ಯೆ ಇರುವವರು ಹುರುಳಿ ಟೀ ಸೇವಿಸಿದರೆ ಒಳ್ಳೆದು.

5. ತೂಕ ಇಳಿಸುತ್ತದೆ:
ಹುರುಳಿಕಾಳು ತೂಕ ಇಳಿಕೆಯಲ್ಲಿ ಉತ್ತಮ ಕಾರ್ಯ ನಿರ್ವಸುತ್ತದೆ. ಇದರಲ್ಲಿ ಕಡಿಮೆ ಕ್ಯಾಲೋರಿ ಅಧಿಕ ಆ್ಯಂಟಿಆಕ್ಸಿಡೆಂಟ್ ಇರುವುದರಿಂದ ಮೆಟಬಾಲಿಸಂ ಮೇಲೆ ಪರಿಣಾಮ ಬೀರುತ್ತದೆ. ದೇಹದಲ್ಲಿ ನೀರಿನ ಅಂಶ ಹೆಚ್ಚಿಸಿ ಬೇಡದ ಪೌಂಡ್ಸ್ ಗಳನ್ನು ನಾಶ ಮಾಡುತ್ತದೆ. ಇದರಿಂದ ತೂಕ ಇಳಿಕೆಯಾಗುತ್ತದೆ.
6. ಕ್ಯಾನ್ಸರ್ ತಡೆಗಟ್ಟುತ್ತದೆ:
ಹುರುಳಿ ಕಾಳಿನಲ್ಲಿರುವ ರುಟಿನ್ ಅಂಶ ಇರುತ್ತದೆ. ಈ ರುಟಿನ್ ಅಂಶ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ಫ್ಲೇವೋನಾಯ್ಡ್ ಅಂಶವಿರುವ ಆಹಾರ ಸೇವಿಸುವುದರಿಂದ ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಕಿಡ್ನಿ, ಗರ್ಭಕೋಶದ ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…
![]()
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ…
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.