ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುರುಳಿ ಟೀ ಮಾಡುವ ವಿಧಾನ!
ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ.

ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ ಸಮಸ್ಯೆ ನಿವಾರಿಸಲು ಮದ್ದಾಗಿ ಕೆಲಸ ಮಾಡುತ್ತದೆ, ಹೃದಯದ ಆರೋಗ್ಯ, ಜೀರ್ಣ ಶಕ್ತಿ ವೃದ್ಧಿಸುತ್ತದೆ. ಇದರಲ್ಲಿರುವ ಫ್ಲೇವೋನಾಯ್ಡ್ ಅಂಶ ಆರೋಗಕ್ಕೆ ತುಂಬಾ ಒಳ್ಳೆಯದಾಗಿದೆ.

ಹುರುಳಿ ಟೀ ಮಾಡಲು ಬೇಕಾದ ಸಾಮಾಗ್ರಿ:
ನೀರು- 3 ಕಪ್ಹು, ರುಳಿ ಕಾಳು- 2 ಚಮಚ, ಜೇನು ತುಪ್ಪ- 1 ಚಮಚ
ಮಾಡುವ ವಿಧಾನ:
ಮೊದಲು ಸ್ಟವ್ ಹಚ್ಚಿ ಒಂದು ತವಾದಲ್ಲಿ ಹುರುಳಿ ಕಾಳುಗಳನ್ನು ಹುರಿದುಕೊಂಡು ಪಕ್ಕಕ್ಕೆ ಎತ್ತಿಟ್ಟುಕೊಳ್ಳಿ. ಬಳಿಕ ಚಹಾ ತಯಾರಿಸಲು ಪಾತ್ರೆಯಲ್ಲಿ ನೀರು ಕುದಿಯಲು ಇಡಿ.

ಬಳಿಕ ಕುದಿಯುತ್ತಿರುವ ನೀರಿಗೆ ಹುರಿಡದಿಟ್ಟುಕೊಂಡ ಹುರುಳಿ ಕಾಳನ್ನು ಹಾಕಿ 1ರಿಂದ 3 ನಿಮಿಷ ಕುದಿಯಲು ಬಿಡಿ. ಬೇಕಾದರೆ ಹುರಿದ ಹುರುಳಿ ಕಾಳನ್ನು ಪುಡಿ ಮಾಡಿ ಕೂಡ ಚಹಾ ತಯಾರಿಸಬಹುದು. ಅಷ್ಟೇ ಅಲ್ಲದೆ ಹುರುಳಿ ಎಲೆಗಳನ್ನು ಒಣಗಿಸಿ, ಪುಡಿ ಮಾಡಿ ಅದನ್ನು ಕೂಡ ಚಹಾ ಮಾಡಲು ಬಳಸಬಹುದು.
ಬಳಿಕ ಹುರುಳಿ ಕಾಳಿನ ಅಂಶ ನೀರಿನಲ್ಲಿ ಬೆರೆತ ಬಳಿಕ ಸ್ಟವನ್ನು ಆಫ್ ಮಾಡಿ. ಲೋಟದಲ್ಲಿ ಚಹಾ ಸೋಸಿ ಕುಡಿಯಿರಿ. ಈ ಚಹಾವನ್ನು ಹಾಗೆ ಕುಡಿಯಬಹುದು, ಇಲ್ಲವಾದರೇ ಇದಕ್ಕೆ ಸ್ವಲ್ಪ ಜೇನು ತುಪ್ಪ ಬೆರೆಸಿ ಸೇವಿಸಬಹುದು.

ಆರೋಗ್ಯಕರ ಲಾಭವೇನು?
1. ಕಿಡ್ನಿ ಸಮಸ್ಯೆಗೆ ಮದ್ದು
ಹುರುಳಿ ಕಾಳಿನಲ್ಲಿರುವ ಆ್ಯಂಟಿಆಕ್ಸಿಡೆಂಟ್ ಹಾಗೂ ರುಟಿನ್ ಅಂಶ ಕಿಡ್ನಿ ಸಮಸ್ಯೆಗೆ ರಾಮಬಾಣ. ಪ್ರತಿನಿತ್ಯ ಹುರುಳಿ ಟೀ ಸೇವನೆ ಮಾಡಿದರೆ ಕಿಡ್ನಿ ಸಮಸ್ಯೆ ನಿಧಾನವಾಗಿ ಗುಣವಾಗುತ್ತದೆ.
2. ಮಧುಮೇಹ ನಿಯಂತ್ರಣಕ್ಕೆ ಸಹಕಾರಿ:
ಮಧುಮೇಹಿಗಳು ಹುರುಳಿ ಟೀ ಕುಡಿದರೆ ಅವರ ದೇಹದಲ್ಲಿ ಸಕ್ಕರೆಯಂಶವನ್ನು ಅದು ನಿಯಂತ್ರಿಸುತ್ತದೆ. ಈ ಟೀ ರಕ್ತದಲ್ಲಿ ಗ್ಲೂಕೋಸ್ ಪ್ರಮಾಣವನ್ನು ಕಾಪಾಡಿ, ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಯುತ್ತದೆ.

3. ಹೃದಯದ ಆರೋಗ್ಯಕ್ಕೆ ಉತ್ತಮ:
ಹುರುಳಿ ಟೀ ಪ್ರತಿದಿನ ಕುಡಿಯುವುದರಿಂದ ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಕಡಿಮೆ ಆಗುತ್ತದೆ. ಇದರಲ್ಲಿ ಫ್ಲೇವೋನಾಯ್ಡ್ ಅಂಶವಿರುವುದರಿಂದ ರಕ್ತ ಹೆಪ್ಪುಗಟ್ಟುವುದನ್ನು ಇದು ತಡೆಗಟ್ಟುತ್ತದೆ. ಪಾಶ್ರ್ವವಾಯು, ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.
4. ಜೀರ್ಣಕ್ರಿಯೆಗೆ ಒಳ್ಳೆದು:
ಹುರುಳಿ ಕಾಳಿನಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುವಂತೆ ಕಾರ್ಯನಿರ್ವಹಿಸುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಬರುವುದಿಲ್ಲ. ಆಗಾಗ ಹೊಟ್ಟೆ ಉಬ್ಬುವ ಸಮಸ್ಯೆ ಇರುವವರು ಹುರುಳಿ ಟೀ ಸೇವಿಸಿದರೆ ಒಳ್ಳೆದು.

5. ತೂಕ ಇಳಿಸುತ್ತದೆ:
ಹುರುಳಿಕಾಳು ತೂಕ ಇಳಿಕೆಯಲ್ಲಿ ಉತ್ತಮ ಕಾರ್ಯ ನಿರ್ವಸುತ್ತದೆ. ಇದರಲ್ಲಿ ಕಡಿಮೆ ಕ್ಯಾಲೋರಿ ಅಧಿಕ ಆ್ಯಂಟಿಆಕ್ಸಿಡೆಂಟ್ ಇರುವುದರಿಂದ ಮೆಟಬಾಲಿಸಂ ಮೇಲೆ ಪರಿಣಾಮ ಬೀರುತ್ತದೆ. ದೇಹದಲ್ಲಿ ನೀರಿನ ಅಂಶ ಹೆಚ್ಚಿಸಿ ಬೇಡದ ಪೌಂಡ್ಸ್ ಗಳನ್ನು ನಾಶ ಮಾಡುತ್ತದೆ. ಇದರಿಂದ ತೂಕ ಇಳಿಕೆಯಾಗುತ್ತದೆ.
6. ಕ್ಯಾನ್ಸರ್ ತಡೆಗಟ್ಟುತ್ತದೆ:
ಹುರುಳಿ ಕಾಳಿನಲ್ಲಿರುವ ರುಟಿನ್ ಅಂಶ ಇರುತ್ತದೆ. ಈ ರುಟಿನ್ ಅಂಶ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ಫ್ಲೇವೋನಾಯ್ಡ್ ಅಂಶವಿರುವ ಆಹಾರ ಸೇವಿಸುವುದರಿಂದ ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಕಿಡ್ನಿ, ಗರ್ಭಕೋಶದ ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….
ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!
ನಾನು ಜೆಡಿಎಸ್ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…
ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…
ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…