News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಆರೋಗ್ಯದ ಮೇಲೆ ಹುರುಳಿ ಟೀ, ಹುರುಳಿ ಟೀ ಇಂದ ಏನೆಲ್ಲಾ ಲಾಭವಿದೆ ಗೊತ್ತಾ.

118

ಹುರುಳಿ ಟೀ ಮಾಡುವ ವಿಧಾನ!

ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ.

ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ ಸಮಸ್ಯೆ ನಿವಾರಿಸಲು ಮದ್ದಾಗಿ ಕೆಲಸ ಮಾಡುತ್ತದೆ, ಹೃದಯದ ಆರೋಗ್ಯ, ಜೀರ್ಣ ಶಕ್ತಿ ವೃದ್ಧಿಸುತ್ತದೆ. ಇದರಲ್ಲಿರುವ ಫ್ಲೇವೋನಾಯ್ಡ್ ಅಂಶ ಆರೋಗಕ್ಕೆ ತುಂಬಾ ಒಳ್ಳೆಯದಾಗಿದೆ.

ಹುರುಳಿ ಟೀ ಮಾಡಲು ಬೇಕಾದ ಸಾಮಾಗ್ರಿ:

ನೀರು- 3 ಕಪ್ಹು, ರುಳಿ ಕಾಳು- 2 ಚಮಚ, ಜೇನು ತುಪ್ಪ- 1 ಚಮಚ

ಮಾಡುವ ವಿಧಾನ:

ಮೊದಲು ಸ್ಟವ್ ಹಚ್ಚಿ ಒಂದು ತವಾದಲ್ಲಿ ಹುರುಳಿ ಕಾಳುಗಳನ್ನು ಹುರಿದುಕೊಂಡು ಪಕ್ಕಕ್ಕೆ ಎತ್ತಿಟ್ಟುಕೊಳ್ಳಿ. ಬಳಿಕ ಚಹಾ ತಯಾರಿಸಲು ಪಾತ್ರೆಯಲ್ಲಿ ನೀರು ಕುದಿಯಲು ಇಡಿ.

ಬಳಿಕ ಕುದಿಯುತ್ತಿರುವ ನೀರಿಗೆ ಹುರಿಡದಿಟ್ಟುಕೊಂಡ ಹುರುಳಿ ಕಾಳನ್ನು ಹಾಕಿ 1ರಿಂದ 3 ನಿಮಿಷ ಕುದಿಯಲು ಬಿಡಿ. ಬೇಕಾದರೆ ಹುರಿದ ಹುರುಳಿ ಕಾಳನ್ನು ಪುಡಿ ಮಾಡಿ ಕೂಡ ಚಹಾ ತಯಾರಿಸಬಹುದು. ಅಷ್ಟೇ ಅಲ್ಲದೆ ಹುರುಳಿ ಎಲೆಗಳನ್ನು ಒಣಗಿಸಿ, ಪುಡಿ ಮಾಡಿ ಅದನ್ನು ಕೂಡ ಚಹಾ ಮಾಡಲು ಬಳಸಬಹುದು.

ಬಳಿಕ ಹುರುಳಿ ಕಾಳಿನ ಅಂಶ ನೀರಿನಲ್ಲಿ ಬೆರೆತ ಬಳಿಕ ಸ್ಟವನ್ನು ಆಫ್ ಮಾಡಿ. ಲೋಟದಲ್ಲಿ ಚಹಾ ಸೋಸಿ ಕುಡಿಯಿರಿ. ಈ ಚಹಾವನ್ನು ಹಾಗೆ ಕುಡಿಯಬಹುದು, ಇಲ್ಲವಾದರೇ ಇದಕ್ಕೆ ಸ್ವಲ್ಪ ಜೇನು ತುಪ್ಪ ಬೆರೆಸಿ ಸೇವಿಸಬಹುದು.

ಆರೋಗ್ಯಕರ ಲಾಭವೇನು?

1. ಕಿಡ್ನಿ ಸಮಸ್ಯೆಗೆ ಮದ್ದು

ಹುರುಳಿ ಕಾಳಿನಲ್ಲಿರುವ ಆ್ಯಂಟಿಆಕ್ಸಿಡೆಂಟ್ ಹಾಗೂ ರುಟಿನ್ ಅಂಶ ಕಿಡ್ನಿ ಸಮಸ್ಯೆಗೆ ರಾಮಬಾಣ. ಪ್ರತಿನಿತ್ಯ ಹುರುಳಿ ಟೀ ಸೇವನೆ ಮಾಡಿದರೆ ಕಿಡ್ನಿ ಸಮಸ್ಯೆ ನಿಧಾನವಾಗಿ ಗುಣವಾಗುತ್ತದೆ.

2. ಮಧುಮೇಹ ನಿಯಂತ್ರಣಕ್ಕೆ ಸಹಕಾರಿ:

ಮಧುಮೇಹಿಗಳು ಹುರುಳಿ ಟೀ ಕುಡಿದರೆ ಅವರ ದೇಹದಲ್ಲಿ ಸಕ್ಕರೆಯಂಶವನ್ನು ಅದು ನಿಯಂತ್ರಿಸುತ್ತದೆ. ಈ ಟೀ ರಕ್ತದಲ್ಲಿ ಗ್ಲೂಕೋಸ್ ಪ್ರಮಾಣವನ್ನು ಕಾಪಾಡಿ, ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಯುತ್ತದೆ.

3. ಹೃದಯದ ಆರೋಗ್ಯಕ್ಕೆ ಉತ್ತಮ:

ಹುರುಳಿ ಟೀ ಪ್ರತಿದಿನ ಕುಡಿಯುವುದರಿಂದ ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಕಡಿಮೆ ಆಗುತ್ತದೆ. ಇದರಲ್ಲಿ ಫ್ಲೇವೋನಾಯ್ಡ್ ಅಂಶವಿರುವುದರಿಂದ ರಕ್ತ ಹೆಪ್ಪುಗಟ್ಟುವುದನ್ನು ಇದು ತಡೆಗಟ್ಟುತ್ತದೆ. ಪಾಶ್ರ್ವವಾಯು, ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.

4. ಜೀರ್ಣಕ್ರಿಯೆಗೆ ಒಳ್ಳೆದು:

ಹುರುಳಿ ಕಾಳಿನಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುವಂತೆ ಕಾರ್ಯನಿರ್ವಹಿಸುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಬರುವುದಿಲ್ಲ. ಆಗಾಗ ಹೊಟ್ಟೆ ಉಬ್ಬುವ ಸಮಸ್ಯೆ ಇರುವವರು ಹುರುಳಿ ಟೀ ಸೇವಿಸಿದರೆ ಒಳ್ಳೆದು.

5. ತೂಕ ಇಳಿಸುತ್ತದೆ:

ಹುರುಳಿಕಾಳು ತೂಕ ಇಳಿಕೆಯಲ್ಲಿ ಉತ್ತಮ ಕಾರ್ಯ ನಿರ್ವಸುತ್ತದೆ. ಇದರಲ್ಲಿ ಕಡಿಮೆ ಕ್ಯಾಲೋರಿ ಅಧಿಕ ಆ್ಯಂಟಿಆಕ್ಸಿಡೆಂಟ್ ಇರುವುದರಿಂದ ಮೆಟಬಾಲಿಸಂ ಮೇಲೆ ಪರಿಣಾಮ ಬೀರುತ್ತದೆ. ದೇಹದಲ್ಲಿ ನೀರಿನ ಅಂಶ ಹೆಚ್ಚಿಸಿ ಬೇಡದ ಪೌಂಡ್ಸ್ ಗಳನ್ನು ನಾಶ ಮಾಡುತ್ತದೆ. ಇದರಿಂದ ತೂಕ ಇಳಿಕೆಯಾಗುತ್ತದೆ.

6. ಕ್ಯಾನ್ಸರ್ ತಡೆಗಟ್ಟುತ್ತದೆ:
ಹುರುಳಿ ಕಾಳಿನಲ್ಲಿರುವ ರುಟಿನ್ ಅಂಶ ಇರುತ್ತದೆ. ಈ ರುಟಿನ್ ಅಂಶ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ಫ್ಲೇವೋನಾಯ್ಡ್ ಅಂಶವಿರುವ ಆಹಾರ ಸೇವಿಸುವುದರಿಂದ ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಕಿಡ್ನಿ, ಗರ್ಭಕೋಶದ ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುವುದಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೊಂದು ಗುಡ್‌ ನ್ಯೂಸ್: ಪ್ರತಿ ತಿಂಗಳು ಸಿಗಲಿದೆ 3 ಸಾವಿರ ರೂ….!

    ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…

  • ಸುದ್ದಿ

    ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

    ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…

  • ವಿಸ್ಮಯ ಜಗತ್ತು

    ಪ್ರಕೃತಿಯಲ್ಲಿ ಅಸ್ತಿತ್ವದಲ್ಲಿದೆ ಎಂದು ನೀವು ನಂಬಲಾಗದ 05 ವಿಷಯಗಳನ್ನು ಎಲ್ಲಿವೆ..!ತಿಳಿಯಲು ಈ ಲೇಖನ ಓದಿ…

    ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…

  • ಸ್ಪೂರ್ತಿ

    ಮಸೀದಿಯಲ್ಲಿ ತಯಾರದ ಶಿವ ಭಂಡಾರಾದ ಅಡುಗೆ ……!

    ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್‌ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…