ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುರುಳಿ ಟೀ ಮಾಡುವ ವಿಧಾನ!
ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ.
ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ ಸಮಸ್ಯೆ ನಿವಾರಿಸಲು ಮದ್ದಾಗಿ ಕೆಲಸ ಮಾಡುತ್ತದೆ, ಹೃದಯದ ಆರೋಗ್ಯ, ಜೀರ್ಣ ಶಕ್ತಿ ವೃದ್ಧಿಸುತ್ತದೆ. ಇದರಲ್ಲಿರುವ ಫ್ಲೇವೋನಾಯ್ಡ್ ಅಂಶ ಆರೋಗಕ್ಕೆ ತುಂಬಾ ಒಳ್ಳೆಯದಾಗಿದೆ.
ಹುರುಳಿ ಟೀ ಮಾಡಲು ಬೇಕಾದ ಸಾಮಾಗ್ರಿ:
ನೀರು- 3 ಕಪ್ಹು, ರುಳಿ ಕಾಳು- 2 ಚಮಚ, ಜೇನು ತುಪ್ಪ- 1 ಚಮಚ
ಮಾಡುವ ವಿಧಾನ:
ಮೊದಲು ಸ್ಟವ್ ಹಚ್ಚಿ ಒಂದು ತವಾದಲ್ಲಿ ಹುರುಳಿ ಕಾಳುಗಳನ್ನು ಹುರಿದುಕೊಂಡು ಪಕ್ಕಕ್ಕೆ ಎತ್ತಿಟ್ಟುಕೊಳ್ಳಿ. ಬಳಿಕ ಚಹಾ ತಯಾರಿಸಲು ಪಾತ್ರೆಯಲ್ಲಿ ನೀರು ಕುದಿಯಲು ಇಡಿ.
ಬಳಿಕ ಕುದಿಯುತ್ತಿರುವ ನೀರಿಗೆ ಹುರಿಡದಿಟ್ಟುಕೊಂಡ ಹುರುಳಿ ಕಾಳನ್ನು ಹಾಕಿ 1ರಿಂದ 3 ನಿಮಿಷ ಕುದಿಯಲು ಬಿಡಿ. ಬೇಕಾದರೆ ಹುರಿದ ಹುರುಳಿ ಕಾಳನ್ನು ಪುಡಿ ಮಾಡಿ ಕೂಡ ಚಹಾ ತಯಾರಿಸಬಹುದು. ಅಷ್ಟೇ ಅಲ್ಲದೆ ಹುರುಳಿ ಎಲೆಗಳನ್ನು ಒಣಗಿಸಿ, ಪುಡಿ ಮಾಡಿ ಅದನ್ನು ಕೂಡ ಚಹಾ ಮಾಡಲು ಬಳಸಬಹುದು.
ಬಳಿಕ ಹುರುಳಿ ಕಾಳಿನ ಅಂಶ ನೀರಿನಲ್ಲಿ ಬೆರೆತ ಬಳಿಕ ಸ್ಟವನ್ನು ಆಫ್ ಮಾಡಿ. ಲೋಟದಲ್ಲಿ ಚಹಾ ಸೋಸಿ ಕುಡಿಯಿರಿ. ಈ ಚಹಾವನ್ನು ಹಾಗೆ ಕುಡಿಯಬಹುದು, ಇಲ್ಲವಾದರೇ ಇದಕ್ಕೆ ಸ್ವಲ್ಪ ಜೇನು ತುಪ್ಪ ಬೆರೆಸಿ ಸೇವಿಸಬಹುದು.
ಆರೋಗ್ಯಕರ ಲಾಭವೇನು?
1. ಕಿಡ್ನಿ ಸಮಸ್ಯೆಗೆ ಮದ್ದು
ಹುರುಳಿ ಕಾಳಿನಲ್ಲಿರುವ ಆ್ಯಂಟಿಆಕ್ಸಿಡೆಂಟ್ ಹಾಗೂ ರುಟಿನ್ ಅಂಶ ಕಿಡ್ನಿ ಸಮಸ್ಯೆಗೆ ರಾಮಬಾಣ. ಪ್ರತಿನಿತ್ಯ ಹುರುಳಿ ಟೀ ಸೇವನೆ ಮಾಡಿದರೆ ಕಿಡ್ನಿ ಸಮಸ್ಯೆ ನಿಧಾನವಾಗಿ ಗುಣವಾಗುತ್ತದೆ.
2. ಮಧುಮೇಹ ನಿಯಂತ್ರಣಕ್ಕೆ ಸಹಕಾರಿ:
ಮಧುಮೇಹಿಗಳು ಹುರುಳಿ ಟೀ ಕುಡಿದರೆ ಅವರ ದೇಹದಲ್ಲಿ ಸಕ್ಕರೆಯಂಶವನ್ನು ಅದು ನಿಯಂತ್ರಿಸುತ್ತದೆ. ಈ ಟೀ ರಕ್ತದಲ್ಲಿ ಗ್ಲೂಕೋಸ್ ಪ್ರಮಾಣವನ್ನು ಕಾಪಾಡಿ, ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಯುತ್ತದೆ.
3. ಹೃದಯದ ಆರೋಗ್ಯಕ್ಕೆ ಉತ್ತಮ:
ಹುರುಳಿ ಟೀ ಪ್ರತಿದಿನ ಕುಡಿಯುವುದರಿಂದ ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಕಡಿಮೆ ಆಗುತ್ತದೆ. ಇದರಲ್ಲಿ ಫ್ಲೇವೋನಾಯ್ಡ್ ಅಂಶವಿರುವುದರಿಂದ ರಕ್ತ ಹೆಪ್ಪುಗಟ್ಟುವುದನ್ನು ಇದು ತಡೆಗಟ್ಟುತ್ತದೆ. ಪಾಶ್ರ್ವವಾಯು, ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.
4. ಜೀರ್ಣಕ್ರಿಯೆಗೆ ಒಳ್ಳೆದು:
ಹುರುಳಿ ಕಾಳಿನಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುವಂತೆ ಕಾರ್ಯನಿರ್ವಹಿಸುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಬರುವುದಿಲ್ಲ. ಆಗಾಗ ಹೊಟ್ಟೆ ಉಬ್ಬುವ ಸಮಸ್ಯೆ ಇರುವವರು ಹುರುಳಿ ಟೀ ಸೇವಿಸಿದರೆ ಒಳ್ಳೆದು.
5. ತೂಕ ಇಳಿಸುತ್ತದೆ:
ಹುರುಳಿಕಾಳು ತೂಕ ಇಳಿಕೆಯಲ್ಲಿ ಉತ್ತಮ ಕಾರ್ಯ ನಿರ್ವಸುತ್ತದೆ. ಇದರಲ್ಲಿ ಕಡಿಮೆ ಕ್ಯಾಲೋರಿ ಅಧಿಕ ಆ್ಯಂಟಿಆಕ್ಸಿಡೆಂಟ್ ಇರುವುದರಿಂದ ಮೆಟಬಾಲಿಸಂ ಮೇಲೆ ಪರಿಣಾಮ ಬೀರುತ್ತದೆ. ದೇಹದಲ್ಲಿ ನೀರಿನ ಅಂಶ ಹೆಚ್ಚಿಸಿ ಬೇಡದ ಪೌಂಡ್ಸ್ ಗಳನ್ನು ನಾಶ ಮಾಡುತ್ತದೆ. ಇದರಿಂದ ತೂಕ ಇಳಿಕೆಯಾಗುತ್ತದೆ.
6. ಕ್ಯಾನ್ಸರ್ ತಡೆಗಟ್ಟುತ್ತದೆ:
ಹುರುಳಿ ಕಾಳಿನಲ್ಲಿರುವ ರುಟಿನ್ ಅಂಶ ಇರುತ್ತದೆ. ಈ ರುಟಿನ್ ಅಂಶ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ಫ್ಲೇವೋನಾಯ್ಡ್ ಅಂಶವಿರುವ ಆಹಾರ ಸೇವಿಸುವುದರಿಂದ ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಕಿಡ್ನಿ, ಗರ್ಭಕೋಶದ ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ. ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…