ಆರೋಗ್ಯ

ಆರೋಗ್ಯದ ಮೇಲೆ ಹುರುಳಿ ಟೀ, ಹುರುಳಿ ಟೀ ಇಂದ ಏನೆಲ್ಲಾ ಲಾಭವಿದೆ ಗೊತ್ತಾ.

112

ಹುರುಳಿ ಟೀ ಮಾಡುವ ವಿಧಾನ!

ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ.

ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ ಸಮಸ್ಯೆ ನಿವಾರಿಸಲು ಮದ್ದಾಗಿ ಕೆಲಸ ಮಾಡುತ್ತದೆ, ಹೃದಯದ ಆರೋಗ್ಯ, ಜೀರ್ಣ ಶಕ್ತಿ ವೃದ್ಧಿಸುತ್ತದೆ. ಇದರಲ್ಲಿರುವ ಫ್ಲೇವೋನಾಯ್ಡ್ ಅಂಶ ಆರೋಗಕ್ಕೆ ತುಂಬಾ ಒಳ್ಳೆಯದಾಗಿದೆ.

ಹುರುಳಿ ಟೀ ಮಾಡಲು ಬೇಕಾದ ಸಾಮಾಗ್ರಿ:

ನೀರು- 3 ಕಪ್ಹು, ರುಳಿ ಕಾಳು- 2 ಚಮಚ, ಜೇನು ತುಪ್ಪ- 1 ಚಮಚ

ಮಾಡುವ ವಿಧಾನ:

ಮೊದಲು ಸ್ಟವ್ ಹಚ್ಚಿ ಒಂದು ತವಾದಲ್ಲಿ ಹುರುಳಿ ಕಾಳುಗಳನ್ನು ಹುರಿದುಕೊಂಡು ಪಕ್ಕಕ್ಕೆ ಎತ್ತಿಟ್ಟುಕೊಳ್ಳಿ. ಬಳಿಕ ಚಹಾ ತಯಾರಿಸಲು ಪಾತ್ರೆಯಲ್ಲಿ ನೀರು ಕುದಿಯಲು ಇಡಿ.

ಬಳಿಕ ಕುದಿಯುತ್ತಿರುವ ನೀರಿಗೆ ಹುರಿಡದಿಟ್ಟುಕೊಂಡ ಹುರುಳಿ ಕಾಳನ್ನು ಹಾಕಿ 1ರಿಂದ 3 ನಿಮಿಷ ಕುದಿಯಲು ಬಿಡಿ. ಬೇಕಾದರೆ ಹುರಿದ ಹುರುಳಿ ಕಾಳನ್ನು ಪುಡಿ ಮಾಡಿ ಕೂಡ ಚಹಾ ತಯಾರಿಸಬಹುದು. ಅಷ್ಟೇ ಅಲ್ಲದೆ ಹುರುಳಿ ಎಲೆಗಳನ್ನು ಒಣಗಿಸಿ, ಪುಡಿ ಮಾಡಿ ಅದನ್ನು ಕೂಡ ಚಹಾ ಮಾಡಲು ಬಳಸಬಹುದು.

ಬಳಿಕ ಹುರುಳಿ ಕಾಳಿನ ಅಂಶ ನೀರಿನಲ್ಲಿ ಬೆರೆತ ಬಳಿಕ ಸ್ಟವನ್ನು ಆಫ್ ಮಾಡಿ. ಲೋಟದಲ್ಲಿ ಚಹಾ ಸೋಸಿ ಕುಡಿಯಿರಿ. ಈ ಚಹಾವನ್ನು ಹಾಗೆ ಕುಡಿಯಬಹುದು, ಇಲ್ಲವಾದರೇ ಇದಕ್ಕೆ ಸ್ವಲ್ಪ ಜೇನು ತುಪ್ಪ ಬೆರೆಸಿ ಸೇವಿಸಬಹುದು.

ಆರೋಗ್ಯಕರ ಲಾಭವೇನು?

1. ಕಿಡ್ನಿ ಸಮಸ್ಯೆಗೆ ಮದ್ದು

ಹುರುಳಿ ಕಾಳಿನಲ್ಲಿರುವ ಆ್ಯಂಟಿಆಕ್ಸಿಡೆಂಟ್ ಹಾಗೂ ರುಟಿನ್ ಅಂಶ ಕಿಡ್ನಿ ಸಮಸ್ಯೆಗೆ ರಾಮಬಾಣ. ಪ್ರತಿನಿತ್ಯ ಹುರುಳಿ ಟೀ ಸೇವನೆ ಮಾಡಿದರೆ ಕಿಡ್ನಿ ಸಮಸ್ಯೆ ನಿಧಾನವಾಗಿ ಗುಣವಾಗುತ್ತದೆ.

2. ಮಧುಮೇಹ ನಿಯಂತ್ರಣಕ್ಕೆ ಸಹಕಾರಿ:

ಮಧುಮೇಹಿಗಳು ಹುರುಳಿ ಟೀ ಕುಡಿದರೆ ಅವರ ದೇಹದಲ್ಲಿ ಸಕ್ಕರೆಯಂಶವನ್ನು ಅದು ನಿಯಂತ್ರಿಸುತ್ತದೆ. ಈ ಟೀ ರಕ್ತದಲ್ಲಿ ಗ್ಲೂಕೋಸ್ ಪ್ರಮಾಣವನ್ನು ಕಾಪಾಡಿ, ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಯುತ್ತದೆ.

3. ಹೃದಯದ ಆರೋಗ್ಯಕ್ಕೆ ಉತ್ತಮ:

ಹುರುಳಿ ಟೀ ಪ್ರತಿದಿನ ಕುಡಿಯುವುದರಿಂದ ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಕಡಿಮೆ ಆಗುತ್ತದೆ. ಇದರಲ್ಲಿ ಫ್ಲೇವೋನಾಯ್ಡ್ ಅಂಶವಿರುವುದರಿಂದ ರಕ್ತ ಹೆಪ್ಪುಗಟ್ಟುವುದನ್ನು ಇದು ತಡೆಗಟ್ಟುತ್ತದೆ. ಪಾಶ್ರ್ವವಾಯು, ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.

4. ಜೀರ್ಣಕ್ರಿಯೆಗೆ ಒಳ್ಳೆದು:

ಹುರುಳಿ ಕಾಳಿನಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುವಂತೆ ಕಾರ್ಯನಿರ್ವಹಿಸುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಬರುವುದಿಲ್ಲ. ಆಗಾಗ ಹೊಟ್ಟೆ ಉಬ್ಬುವ ಸಮಸ್ಯೆ ಇರುವವರು ಹುರುಳಿ ಟೀ ಸೇವಿಸಿದರೆ ಒಳ್ಳೆದು.

5. ತೂಕ ಇಳಿಸುತ್ತದೆ:

ಹುರುಳಿಕಾಳು ತೂಕ ಇಳಿಕೆಯಲ್ಲಿ ಉತ್ತಮ ಕಾರ್ಯ ನಿರ್ವಸುತ್ತದೆ. ಇದರಲ್ಲಿ ಕಡಿಮೆ ಕ್ಯಾಲೋರಿ ಅಧಿಕ ಆ್ಯಂಟಿಆಕ್ಸಿಡೆಂಟ್ ಇರುವುದರಿಂದ ಮೆಟಬಾಲಿಸಂ ಮೇಲೆ ಪರಿಣಾಮ ಬೀರುತ್ತದೆ. ದೇಹದಲ್ಲಿ ನೀರಿನ ಅಂಶ ಹೆಚ್ಚಿಸಿ ಬೇಡದ ಪೌಂಡ್ಸ್ ಗಳನ್ನು ನಾಶ ಮಾಡುತ್ತದೆ. ಇದರಿಂದ ತೂಕ ಇಳಿಕೆಯಾಗುತ್ತದೆ.

6. ಕ್ಯಾನ್ಸರ್ ತಡೆಗಟ್ಟುತ್ತದೆ:
ಹುರುಳಿ ಕಾಳಿನಲ್ಲಿರುವ ರುಟಿನ್ ಅಂಶ ಇರುತ್ತದೆ. ಈ ರುಟಿನ್ ಅಂಶ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ಫ್ಲೇವೋನಾಯ್ಡ್ ಅಂಶವಿರುವ ಆಹಾರ ಸೇವಿಸುವುದರಿಂದ ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಕಿಡ್ನಿ, ಗರ್ಭಕೋಶದ ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುವುದಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸುದ್ದಿ

    “ನಮ್ಮದು ಮಾಟಮಂತ್ರ ಮಾಡೋ ಕುಟುಂಬ ಅಲ್ಲ, ನನಗಿನ್ನೂ ಹುಚ್ಚು ಹಿಡಿದಿಲ್ಲ” ; ಅಚ್ಚರಿಯ ಹೇಳಿಕೆ ಕೊಟ್ಟ ಕುಮಾರಸ್ವಾಮಿ….!

    ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…

  • ಆರೋಗ್ಯ

    ನಿಮ್ಗೆ ಈ 5 ತಿಂಡಿ ತಿನಿಸುಗಳು ಬಹಳ ನಿದ್ದೆ ತರಿಸುತ್ತವೆ..!ತಿಳಿಯಲು ಈ ಲೇಖನ ಓದಿ..

    ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.

  • ದಿನಕ್ಕೊಂದು ನೀತಿ ಕಥೆ

    ಭೂಮಿ ತಲೆಕೆಳಗಾದರೆ …? ಓದಿ ದಿನಕ್ಕೊಂದು ನೀತಿ ಕಥೆ….

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.

  • ಜ್ಯೋತಿಷ್ಯ

    ನಿತ್ಯ ಪಂಚಾಂಗ ಶುಭ ಶುಕ್ರವಾರ, ರಾಶಿಗನುಗುಣವಾಗಿ ದಿನಭವಿಷ್ಯ 24/8/2018

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.