ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುರುಳಿ ಟೀ ಮಾಡುವ ವಿಧಾನ!
ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ.

ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ ಸಮಸ್ಯೆ ನಿವಾರಿಸಲು ಮದ್ದಾಗಿ ಕೆಲಸ ಮಾಡುತ್ತದೆ, ಹೃದಯದ ಆರೋಗ್ಯ, ಜೀರ್ಣ ಶಕ್ತಿ ವೃದ್ಧಿಸುತ್ತದೆ. ಇದರಲ್ಲಿರುವ ಫ್ಲೇವೋನಾಯ್ಡ್ ಅಂಶ ಆರೋಗಕ್ಕೆ ತುಂಬಾ ಒಳ್ಳೆಯದಾಗಿದೆ.

ಹುರುಳಿ ಟೀ ಮಾಡಲು ಬೇಕಾದ ಸಾಮಾಗ್ರಿ:
ನೀರು- 3 ಕಪ್ಹು, ರುಳಿ ಕಾಳು- 2 ಚಮಚ, ಜೇನು ತುಪ್ಪ- 1 ಚಮಚ
ಮಾಡುವ ವಿಧಾನ:
ಮೊದಲು ಸ್ಟವ್ ಹಚ್ಚಿ ಒಂದು ತವಾದಲ್ಲಿ ಹುರುಳಿ ಕಾಳುಗಳನ್ನು ಹುರಿದುಕೊಂಡು ಪಕ್ಕಕ್ಕೆ ಎತ್ತಿಟ್ಟುಕೊಳ್ಳಿ. ಬಳಿಕ ಚಹಾ ತಯಾರಿಸಲು ಪಾತ್ರೆಯಲ್ಲಿ ನೀರು ಕುದಿಯಲು ಇಡಿ.

ಬಳಿಕ ಕುದಿಯುತ್ತಿರುವ ನೀರಿಗೆ ಹುರಿಡದಿಟ್ಟುಕೊಂಡ ಹುರುಳಿ ಕಾಳನ್ನು ಹಾಕಿ 1ರಿಂದ 3 ನಿಮಿಷ ಕುದಿಯಲು ಬಿಡಿ. ಬೇಕಾದರೆ ಹುರಿದ ಹುರುಳಿ ಕಾಳನ್ನು ಪುಡಿ ಮಾಡಿ ಕೂಡ ಚಹಾ ತಯಾರಿಸಬಹುದು. ಅಷ್ಟೇ ಅಲ್ಲದೆ ಹುರುಳಿ ಎಲೆಗಳನ್ನು ಒಣಗಿಸಿ, ಪುಡಿ ಮಾಡಿ ಅದನ್ನು ಕೂಡ ಚಹಾ ಮಾಡಲು ಬಳಸಬಹುದು.
ಬಳಿಕ ಹುರುಳಿ ಕಾಳಿನ ಅಂಶ ನೀರಿನಲ್ಲಿ ಬೆರೆತ ಬಳಿಕ ಸ್ಟವನ್ನು ಆಫ್ ಮಾಡಿ. ಲೋಟದಲ್ಲಿ ಚಹಾ ಸೋಸಿ ಕುಡಿಯಿರಿ. ಈ ಚಹಾವನ್ನು ಹಾಗೆ ಕುಡಿಯಬಹುದು, ಇಲ್ಲವಾದರೇ ಇದಕ್ಕೆ ಸ್ವಲ್ಪ ಜೇನು ತುಪ್ಪ ಬೆರೆಸಿ ಸೇವಿಸಬಹುದು.

ಆರೋಗ್ಯಕರ ಲಾಭವೇನು?
1. ಕಿಡ್ನಿ ಸಮಸ್ಯೆಗೆ ಮದ್ದು
ಹುರುಳಿ ಕಾಳಿನಲ್ಲಿರುವ ಆ್ಯಂಟಿಆಕ್ಸಿಡೆಂಟ್ ಹಾಗೂ ರುಟಿನ್ ಅಂಶ ಕಿಡ್ನಿ ಸಮಸ್ಯೆಗೆ ರಾಮಬಾಣ. ಪ್ರತಿನಿತ್ಯ ಹುರುಳಿ ಟೀ ಸೇವನೆ ಮಾಡಿದರೆ ಕಿಡ್ನಿ ಸಮಸ್ಯೆ ನಿಧಾನವಾಗಿ ಗುಣವಾಗುತ್ತದೆ.
2. ಮಧುಮೇಹ ನಿಯಂತ್ರಣಕ್ಕೆ ಸಹಕಾರಿ:
ಮಧುಮೇಹಿಗಳು ಹುರುಳಿ ಟೀ ಕುಡಿದರೆ ಅವರ ದೇಹದಲ್ಲಿ ಸಕ್ಕರೆಯಂಶವನ್ನು ಅದು ನಿಯಂತ್ರಿಸುತ್ತದೆ. ಈ ಟೀ ರಕ್ತದಲ್ಲಿ ಗ್ಲೂಕೋಸ್ ಪ್ರಮಾಣವನ್ನು ಕಾಪಾಡಿ, ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಯುತ್ತದೆ.

3. ಹೃದಯದ ಆರೋಗ್ಯಕ್ಕೆ ಉತ್ತಮ:
ಹುರುಳಿ ಟೀ ಪ್ರತಿದಿನ ಕುಡಿಯುವುದರಿಂದ ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಕಡಿಮೆ ಆಗುತ್ತದೆ. ಇದರಲ್ಲಿ ಫ್ಲೇವೋನಾಯ್ಡ್ ಅಂಶವಿರುವುದರಿಂದ ರಕ್ತ ಹೆಪ್ಪುಗಟ್ಟುವುದನ್ನು ಇದು ತಡೆಗಟ್ಟುತ್ತದೆ. ಪಾಶ್ರ್ವವಾಯು, ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.
4. ಜೀರ್ಣಕ್ರಿಯೆಗೆ ಒಳ್ಳೆದು:
ಹುರುಳಿ ಕಾಳಿನಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುವಂತೆ ಕಾರ್ಯನಿರ್ವಹಿಸುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಬರುವುದಿಲ್ಲ. ಆಗಾಗ ಹೊಟ್ಟೆ ಉಬ್ಬುವ ಸಮಸ್ಯೆ ಇರುವವರು ಹುರುಳಿ ಟೀ ಸೇವಿಸಿದರೆ ಒಳ್ಳೆದು.

5. ತೂಕ ಇಳಿಸುತ್ತದೆ:
ಹುರುಳಿಕಾಳು ತೂಕ ಇಳಿಕೆಯಲ್ಲಿ ಉತ್ತಮ ಕಾರ್ಯ ನಿರ್ವಸುತ್ತದೆ. ಇದರಲ್ಲಿ ಕಡಿಮೆ ಕ್ಯಾಲೋರಿ ಅಧಿಕ ಆ್ಯಂಟಿಆಕ್ಸಿಡೆಂಟ್ ಇರುವುದರಿಂದ ಮೆಟಬಾಲಿಸಂ ಮೇಲೆ ಪರಿಣಾಮ ಬೀರುತ್ತದೆ. ದೇಹದಲ್ಲಿ ನೀರಿನ ಅಂಶ ಹೆಚ್ಚಿಸಿ ಬೇಡದ ಪೌಂಡ್ಸ್ ಗಳನ್ನು ನಾಶ ಮಾಡುತ್ತದೆ. ಇದರಿಂದ ತೂಕ ಇಳಿಕೆಯಾಗುತ್ತದೆ.
6. ಕ್ಯಾನ್ಸರ್ ತಡೆಗಟ್ಟುತ್ತದೆ:
ಹುರುಳಿ ಕಾಳಿನಲ್ಲಿರುವ ರುಟಿನ್ ಅಂಶ ಇರುತ್ತದೆ. ಈ ರುಟಿನ್ ಅಂಶ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ಫ್ಲೇವೋನಾಯ್ಡ್ ಅಂಶವಿರುವ ಆಹಾರ ಸೇವಿಸುವುದರಿಂದ ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಕಿಡ್ನಿ, ಗರ್ಭಕೋಶದ ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.